<p><strong>ಬೆಂಗಳೂರು:</strong> ಜಪ್ತಿಯಾಗಿದ್ದ ದ್ವಿಚಕ್ರ ವಾಹನ ಪಡೆಯಲು ಬಂದ ಈಶ್ವರ್ ಅವರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯನಗರ ಸಂಚಾರ ಠಾಣೆಯ ಪಿಎಸ್ಐ ಶಾಂತರಾಮ್ ಹಾಗೂ ಹೆಡ್ಕಾನ್ಸ್ಟೆಬಲ್ ಸಿದ್ದಿಕಿ ಅವರನ್ನು ಅಮಾನತುಗೊಳಿಸಿ ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್.ಅನುಚೇತ್ ಆದೇಶಿಸಿದ್ದಾರೆ.</p>.<p>ಮಾರ್ಚ್ 14ರಂದು ಜಿ. ಟಿ. ಮಾಲ್ ಬಳಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ ದ್ವಿಚಕ್ರ ವಾಹನ ಸವಾರ ಈಶ್ವರ್ ಪಾನಮತ್ತರಾಗಿರುವುದು ಪತ್ತೆಯಾಗಿತ್ತು. </p>.<p>'ನ್ಯಾಯಾಲಯದಲ್ಲಿ ದಂಡ ಪಾವತಿಸಿದರೆ ₹10 ಸಾವಿರ, ಸ್ಥಳದಲ್ಲಿಯೇ ₹3 ಸಾವಿರ ನೀಡಿದರೆ ಬಿಟ್ಟು ಕಳಿಸುತ್ತೇವೆ ಎಂದು ಪಿಎಸ್ಐ ಮತ್ತು ಸಿಬ್ಬಂದಿ ಹೇಳಿದ್ದರು' ಎಂದು ಈಶ್ವರ್ ಆರೋಪಿಸಿದ್ದಾರೆ.</p>.<p>‘ಆನ್ಲೈನ್ನಲ್ಲಿ ಹಣ ವರ್ಗಾಯಿಸಲು ಮುಂದಾದಾಗ ನಗದು ನೀಡುವಂತೆ ಪೊಲೀಸರು ಒತ್ತಾಯಿಸಿದ್ದರು. ನನ್ನ ಬಳಿ ಹಣವಿಲ್ಲ, ನ್ಯಾಯಾಲಯದಲ್ಲಿಯೇ ದಂಡ ಪಾವತಿಸುವುದಾಗಿ ಹೇಳಿದ್ದೆ. ದ್ವಿಚಕ್ರ ವಾಹನ ಜಪ್ತಿ ಮಾಡಿ, ದಂಡದ ರಶೀದಿ ಕೊಟ್ಟು ಕಳುಹಿಸಿದ್ದರು’ ಎಂದು ತಿಳಿಸಿದ್ದಾರೆ.</p>.<p>ದಂಡ ಪಾವತಿ ಬಳಿಕ ಈಶ್ವರ್, ತಮ್ಮ ದ್ವಿಚಕ್ರ ವಾಹನ ಹಿಂಪಡೆಯಲು ಠಾಣೆ ಬಳಿ ಹೋಗಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಅವರನ್ನು ನಿಂದಿಸಿ, ಥಳಿಸಿದ ಕಾರಣ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಆಟೊ ಕರೆಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಪೊಲೀಸರನ್ನು ತರಾಟೆ ತೆಗೆದುಕೊಂಡಿದ್ದಾರೆ. ‘ನಾನು ಹಲ್ಲೆ ಮಾಡಿಲ್ಲ’ ಎಂದು ಪಿಎಸ್ಐ ಹೇಳುತ್ತಿರುವ ವಿಡಿಯೊ ಜಾಲತಾಣದಲ್ಲಿ ಹರಿದಾಡಿತ್ತು. </p>.<p>ಬಳಿಕ ಡಿಸಿಪಿ ಅನಿತಾ ಹದ್ದಣವರ ಅವರು ಎಸಿಪಿಗೆ ವರದಿ ನೀಡುವಂತೆ ಸೂಚಿಸಿದ್ದರು. ವರದಿ ಆಧರಿಸಿ ಇಬ್ಬರನ್ನು ಅಮಾನತುಗೊಳಿಸಿ, ಇಲಾಖೆ ವಿಚಾರಣೆ ಕಾಯ್ದಿರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಪ್ತಿಯಾಗಿದ್ದ ದ್ವಿಚಕ್ರ ವಾಹನ ಪಡೆಯಲು ಬಂದ ಈಶ್ವರ್ ಅವರ ಮೇಲೆ ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ವಿಜಯನಗರ ಸಂಚಾರ ಠಾಣೆಯ ಪಿಎಸ್ಐ ಶಾಂತರಾಮ್ ಹಾಗೂ ಹೆಡ್ಕಾನ್ಸ್ಟೆಬಲ್ ಸಿದ್ದಿಕಿ ಅವರನ್ನು ಅಮಾನತುಗೊಳಿಸಿ ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್.ಅನುಚೇತ್ ಆದೇಶಿಸಿದ್ದಾರೆ.</p>.<p>ಮಾರ್ಚ್ 14ರಂದು ಜಿ. ಟಿ. ಮಾಲ್ ಬಳಿ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುವ ವೇಳೆ ದ್ವಿಚಕ್ರ ವಾಹನ ಸವಾರ ಈಶ್ವರ್ ಪಾನಮತ್ತರಾಗಿರುವುದು ಪತ್ತೆಯಾಗಿತ್ತು. </p>.<p>'ನ್ಯಾಯಾಲಯದಲ್ಲಿ ದಂಡ ಪಾವತಿಸಿದರೆ ₹10 ಸಾವಿರ, ಸ್ಥಳದಲ್ಲಿಯೇ ₹3 ಸಾವಿರ ನೀಡಿದರೆ ಬಿಟ್ಟು ಕಳಿಸುತ್ತೇವೆ ಎಂದು ಪಿಎಸ್ಐ ಮತ್ತು ಸಿಬ್ಬಂದಿ ಹೇಳಿದ್ದರು' ಎಂದು ಈಶ್ವರ್ ಆರೋಪಿಸಿದ್ದಾರೆ.</p>.<p>‘ಆನ್ಲೈನ್ನಲ್ಲಿ ಹಣ ವರ್ಗಾಯಿಸಲು ಮುಂದಾದಾಗ ನಗದು ನೀಡುವಂತೆ ಪೊಲೀಸರು ಒತ್ತಾಯಿಸಿದ್ದರು. ನನ್ನ ಬಳಿ ಹಣವಿಲ್ಲ, ನ್ಯಾಯಾಲಯದಲ್ಲಿಯೇ ದಂಡ ಪಾವತಿಸುವುದಾಗಿ ಹೇಳಿದ್ದೆ. ದ್ವಿಚಕ್ರ ವಾಹನ ಜಪ್ತಿ ಮಾಡಿ, ದಂಡದ ರಶೀದಿ ಕೊಟ್ಟು ಕಳುಹಿಸಿದ್ದರು’ ಎಂದು ತಿಳಿಸಿದ್ದಾರೆ.</p>.<p>ದಂಡ ಪಾವತಿ ಬಳಿಕ ಈಶ್ವರ್, ತಮ್ಮ ದ್ವಿಚಕ್ರ ವಾಹನ ಹಿಂಪಡೆಯಲು ಠಾಣೆ ಬಳಿ ಹೋಗಿದ್ದರು. ಈ ವೇಳೆ ಪೊಲೀಸ್ ಸಿಬ್ಬಂದಿ ಅವರನ್ನು ನಿಂದಿಸಿ, ಥಳಿಸಿದ ಕಾರಣ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಆಟೊ ಕರೆಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.</p>.<p>ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು, ಪೊಲೀಸರನ್ನು ತರಾಟೆ ತೆಗೆದುಕೊಂಡಿದ್ದಾರೆ. ‘ನಾನು ಹಲ್ಲೆ ಮಾಡಿಲ್ಲ’ ಎಂದು ಪಿಎಸ್ಐ ಹೇಳುತ್ತಿರುವ ವಿಡಿಯೊ ಜಾಲತಾಣದಲ್ಲಿ ಹರಿದಾಡಿತ್ತು. </p>.<p>ಬಳಿಕ ಡಿಸಿಪಿ ಅನಿತಾ ಹದ್ದಣವರ ಅವರು ಎಸಿಪಿಗೆ ವರದಿ ನೀಡುವಂತೆ ಸೂಚಿಸಿದ್ದರು. ವರದಿ ಆಧರಿಸಿ ಇಬ್ಬರನ್ನು ಅಮಾನತುಗೊಳಿಸಿ, ಇಲಾಖೆ ವಿಚಾರಣೆ ಕಾಯ್ದಿರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>