ಡೆಹರಾಡೂನ್ನ ವಿಜಯ್ಕುಮಾರ್, ಬೆಂಗಳೂರು ಪೀಣ್ಯದಲ್ಲಿರುವ ಆಮ್ಲಜನಕ ಹಾಗೂ ನೈಟ್ರೋಜನ್ ತಯಾರಿಕೆ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಂಪನಿಯ ಹೊಸ ಘಟಕ ಸ್ಥಾಪನೆ ಕೆಲಸಕ್ಕಾಗಿ ಜ. 25ರಂದು ಟರ್ಕಿಗೆ ಹೋಗಿದ್ದರು. ಟರ್ಕಿಯಲ್ಲಿ ಭೂಕಂಪ ಸಂಭವಿಸಿದ ಬಳಿಕ, ಅವರ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ. ವಿಜಯ್ಕುಮಾರ್ ಅವರನ್ನು ಹುಡುಕಿಕೊಡುವಂತೆ ಸಂಬಂಧಿಕರು ಭಾರತೀಯ ರಾಯಭಾರಿ ಕಚೇರಿಗೆ ಪತ್ರ ಬರೆದಿದ್ದರು.