ಡಿ.18ರಂದು ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಾಲಯದಲ್ಲಿ ಸುಬ್ರಹ್ಮಣ್ಯ ಷಷ್ಠಿ ನಡೆಯಲಿದೆ. ದೇಶ ಮತ್ತು ರಾಜ್ಯದ ವಿವಿಧ ಪ್ರದೇಶಗಳ ಲಕ್ಷಾಂತರ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಷಷ್ಠಿ ಸಮಯದಲ್ಲಿ ರೈಲು ಸಂಚಾರ ಇಲ್ಲದಿದ್ದರೆ ಭಕ್ತರಿಗೆ ಸುಬ್ರಹ್ಮಣ್ಯಕ್ಕೆ ತೆರಳಲು ಅನನುಕೂಲವಾಗಲಿದೆ. ಇದನ್ನು ತಪ್ಪಿಸಲು ಕಾಮಗಾರಿಯನ್ನು ಮುಂದೂಡಬೇಕು. ಡಿ. 20ರ ನಂತರ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಶಂಕರ್ ಗುಹ ದ್ವಾರಕನಾಥ್ ಒತ್ತಾಯಿಸಿದ್ದಾರೆ.