'ವಾಡಿಕೆಯಂತೆ ರಾಜ್ಯದಲ್ಲಿ ಮಳೆ ಸುರಿದಿದ್ದರೆ, ಈ ವೇಳೆಗೆ ಹಣ್ಣು, ತರಕಾರಿಗಳ ಬೆಲೆ ಏರುತ್ತಿತ್ತು. ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚೇನೂ ಮಳೆಯಾಗಿಲ್ಲ. ಇದರಿಂದ ರೈತರು ಬೆಳೆದ ತರಕಾರಿಗಳು ಎಂದಿನಂತೆ ಮಾರುಕಟ್ಟೆಗೆ ಆವಕವಾಗಿವೆ. ಹೆಚ್ಚು ಕಾರ್ಯಕ್ರಮಗಳು ನಡೆಯದೆ ಇರುವುದರಿಂದ ಬೇಡಿಕೆಯೂ ಇಲ್ಲ' ಎಂದು ದಾಸನಪುರ ಎಪಿಎಂಸಿ ಮಾರುಕಟ್ಟೆಯ ತರಕಾರಿ-ಸೊಪ್ಪು ಸಗಟು ವ್ಯಾಪಾರಿ ಕುಮಾರ್ ತಿಳಿಸಿದರು.