<p><strong>ಬೆಂಗಳೂರು: </strong>ದೊಡ್ಡನೆಕ್ಕುಂದಿ ಜಂಕ್ಷನ್ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್ನಿಂದ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.</p>.<p>‘ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ಗೊತ್ತಾಗಿದೆ. ಅಪಘಾತದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ, ಯಾರೊಬ್ಬರೂ ದೂರು ನೀಡಿಲ್ಲ’ ಎಂದು ಎಚ್ಎಎಲ್ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>ರಸ್ತೆಗೆ ವಾಲಿದ್ದ ಬ್ಯಾರಿಕೇಡ್: ‘ದೊಡ್ಡನೆ ಕ್ಕುಂದಿ ಜಂಕ್ಷನ್ನಿಂದ ಮಹದೇವಪುರ ಮುಖ್ಯರಸ್ತೆ ಮಧ್ಯದಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.</p>.<p>ಕಾಮಗಾರಿ ನಡೆಯುವ ಸ್ಥಳದ ಎರಡು ಬದಿಯಲ್ಲಿ ಕಬ್ಬಿಣದ ಬ್ಯಾರಿಕೇಡ್ಗಳನ್ನು ಸಾಲಾಗಿ ನಿಲ್ಲಿಸಲಾಗಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.</p>.<p>‘ಬ್ಯಾರಿಕೇಡ್ವೊಂದರ ಶೇ 10ರಷ್ಟು ಭಾಗ ರಸ್ತೆಗೆ ವಾಲಿತ್ತು. ಇದೇ ಮಾರ್ಗದಲ್ಲಿ ವೇಗವಾಗಿ ಹೊರಟಿದ್ದ ಕಾರು, ಬ್ಯಾರಿಕೇಡ್ನ ವಾಲಿದ್ದ ಭಾಗಕ್ಕೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಬ್ಯಾರಿಕೇಡ್ ಸಂಪೂರ್ಣವಾಗಿ ಕಿತ್ತು ಬಂದು ಕಾರಿಗೆ ಅಪ್ಪಳಿಸಿತ್ತು. ಕಾರು ಭಾಗಶಃ ಜಖಂಗೊಂಡಿತು’ ಎಂದು ತಿಳಿಸಿದರು.</p>.<p>‘ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಅವರಿಗೆ ಯಾವುದೇ ಗಾಯಗಳಾಗಿಲ್ಲ. ಕಾರಿನಿಂದ ಇಳಿದ ಅವರು, ಸ್ಥಳದಲ್ಲಿದ್ದ ಮೆಟ್ರೊ ಕಾಮಗಾರಿ ಕಾರ್ಮಿಕರನ್ನು ಪ್ರಶ್ನಿಸಿ<br />ದ್ದರು. ಮೆಟ್ರೊ ಎಂಜಿನಿಯರ್ ಸಹ ಸ್ಥಳಕ್ಕೆ ಬಂದು ಪರಿಶೀಲಿಸಿದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೊಡ್ಡನೆಕ್ಕುಂದಿ ಜಂಕ್ಷನ್ನಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್ನಿಂದ ಅಪಘಾತ ಸಂಭವಿಸಿದ್ದು, ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.</p>.<p>‘ಭಾನುವಾರ ಮಧ್ಯಾಹ್ನ 3.30ರ ಸುಮಾರಿಗೆ ಅಪಘಾತ ಸಂಭವಿಸಿರುವುದಾಗಿ ಗೊತ್ತಾಗಿದೆ. ಅಪಘಾತದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆದರೆ, ಯಾರೊಬ್ಬರೂ ದೂರು ನೀಡಿಲ್ಲ’ ಎಂದು ಎಚ್ಎಎಲ್ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>ರಸ್ತೆಗೆ ವಾಲಿದ್ದ ಬ್ಯಾರಿಕೇಡ್: ‘ದೊಡ್ಡನೆ ಕ್ಕುಂದಿ ಜಂಕ್ಷನ್ನಿಂದ ಮಹದೇವಪುರ ಮುಖ್ಯರಸ್ತೆ ಮಧ್ಯದಲ್ಲಿ ಮೆಟ್ರೊ ನಿರ್ಮಾಣ ಕಾಮಗಾರಿ ನಡೆಯುತ್ತಿದೆ.</p>.<p>ಕಾಮಗಾರಿ ನಡೆಯುವ ಸ್ಥಳದ ಎರಡು ಬದಿಯಲ್ಲಿ ಕಬ್ಬಿಣದ ಬ್ಯಾರಿಕೇಡ್ಗಳನ್ನು ಸಾಲಾಗಿ ನಿಲ್ಲಿಸಲಾಗಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.</p>.<p>‘ಬ್ಯಾರಿಕೇಡ್ವೊಂದರ ಶೇ 10ರಷ್ಟು ಭಾಗ ರಸ್ತೆಗೆ ವಾಲಿತ್ತು. ಇದೇ ಮಾರ್ಗದಲ್ಲಿ ವೇಗವಾಗಿ ಹೊರಟಿದ್ದ ಕಾರು, ಬ್ಯಾರಿಕೇಡ್ನ ವಾಲಿದ್ದ ಭಾಗಕ್ಕೆ ಡಿಕ್ಕಿ ಹೊಡೆದಿತ್ತು. ಇದರಿಂದಾಗಿ ಬ್ಯಾರಿಕೇಡ್ ಸಂಪೂರ್ಣವಾಗಿ ಕಿತ್ತು ಬಂದು ಕಾರಿಗೆ ಅಪ್ಪಳಿಸಿತ್ತು. ಕಾರು ಭಾಗಶಃ ಜಖಂಗೊಂಡಿತು’ ಎಂದು ತಿಳಿಸಿದರು.</p>.<p>‘ಕಾರಿನಲ್ಲಿ ಇಬ್ಬರು ಪ್ರಯಾಣಿಕರಿದ್ದರು. ಅವರಿಗೆ ಯಾವುದೇ ಗಾಯಗಳಾಗಿಲ್ಲ. ಕಾರಿನಿಂದ ಇಳಿದ ಅವರು, ಸ್ಥಳದಲ್ಲಿದ್ದ ಮೆಟ್ರೊ ಕಾಮಗಾರಿ ಕಾರ್ಮಿಕರನ್ನು ಪ್ರಶ್ನಿಸಿ<br />ದ್ದರು. ಮೆಟ್ರೊ ಎಂಜಿನಿಯರ್ ಸಹ ಸ್ಥಳಕ್ಕೆ ಬಂದು ಪರಿಶೀಲಿಸಿದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>