<p><strong>ಕೆ.ಆರ್.ಪುರ:</strong> ಮೆಟ್ರೊ ಕಾಮಗಾರಿಗೆ ಬಳಸುವ ಬೃಹತ್ ಗಾತ್ರದ ಕ್ರೇನ್ನ ಟವರ್ ತುಂಡಾಗಿ ಕಾರ್ಮಿಕರ ಶೆಡ್ಗಳ ಮೇಲೆ ಬಿದ್ದ ಪರಿಣಾಮ ಐವರು ಕಾರ್ಮಿಕರು ಗಾಯಗೊಂಡಿದ್ದು, ನಾಲ್ಕು ಮನೆಗಳಿಗೆ ಹಾನಿಯಾಗಿರುವ ಘಟನೆ ಆವಲಹಳ್ಳಿಯ ಮೇಡಹಳ್ಳಿಯಲ್ಲಿ ಭಾನುವಾರ ನಡೆದಿದೆ.</p>.<p>ಘಟನೆಯಲ್ಲಿ ಬಿಹಾರದ ಲಾಲೂ (30), ಕುರ್ಬನ್ (19), ಇಲಿಯಾಜ್ (38), ಸಮೀಮ್ (28) ಮತ್ತು ಶಾಮದೇವ್ (56) ಗಾಯಗೊಂಡಿದ್ದು, ಶ್ರೀಸತ್ಯಸಾಯಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಈ ಪೈಕಿ ಲಾಲೂ ಮತ್ತು ಕುರ್ಬನ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರು ವಾಸವಾಗಿದ್ದ ಶೆಡ್ಗಳು ಹಾನಿಗೀಡಾಗಿವೆ. ಬೆಳಿಗ್ಗೆ 11.30ರ ಸುಮಾರಿಗೆ ಮೇಡಹಳ್ಳಿ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮೆಡಹಳ್ಳಿ ಬಳಿ ಮೆಟ್ರೊ ಕಾಮಗಾರಿ ನಡೆಯುತ್ತಿದ್ದು, ಎಎಸ್ ಕ್ರೇನ್ ಸರ್ವೀಸ್ನಿಂದ ಭಾರೀ ಗಾತ್ರದ ವಸ್ತುಗಳನ್ನು ಮೇಲಕ್ಕೆ ಎತ್ತುವುದು, ಇಳಿಸುವುದು ಮಾಡಲಾಗುತ್ತಿದೆ. ಆದರೆ, ಜನವಸತಿ ಪ್ರದೇಶದಲ್ಲಿ ಅನುಮತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ಸ್ಥಳೀಯರು ಪೊಲೀಸರು, ಬಿಬಿಎಂಪಿಗೆ ದೂರು ನೀಡಿದ್ದರು. ಆದರೂ ಕ್ರಮಕೈಗೊಂಡಿಲ್ಲ.</p>.<p>ಜನ ವಸತಿ ಪ್ರದೇಶ ಸಮೀಪದ ಖಾಲಿ ಜಾಗದಲ್ಲಿ ಕ್ರೇನ್ಗಳನ್ನು ನಿಲುಗಡೆ ಮಾಡಲಾಗಿದ್ದು, ಭಾನುವಾರ ಬೆಳಿಗ್ಗೆ ಈ ಜಾಗದಲ್ಲಿ ಕ್ರೇನ್ಗಳನ್ನು ದುರಸ್ತಿ ಮಾಡಿ, ಪ್ರಾಯೋಗಿಕವಾಗಿ ಕೆಲ ವಸ್ತುಗಳನ್ನು ಎತ್ತುವುದು ಮಾಡಲಾಗುತ್ತಿತ್ತು. ಈ ವೇಳೆ ಕ್ರೇನ್ ಟವರ್ ತುಂಡಾಗಿ ಕಾರ್ಮಿಕರು ವಾಸವಿದ್ದ ಶೆಡ್ಗಳ ಮೇಲೆ ಬಿದ್ದಿದೆ. ಕ್ರೇನ್ಗಳು ಚಂದ್ರಶೇಖರ್ ಎಂಬುವರಿಗೆ ಸೇರಿದ್ದು ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಆವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಮೆಟ್ರೊ ಕಾಮಗಾರಿಗೆ ಬಳಸುವ ಬೃಹತ್ ಗಾತ್ರದ ಕ್ರೇನ್ನ ಟವರ್ ತುಂಡಾಗಿ ಕಾರ್ಮಿಕರ ಶೆಡ್ಗಳ ಮೇಲೆ ಬಿದ್ದ ಪರಿಣಾಮ ಐವರು ಕಾರ್ಮಿಕರು ಗಾಯಗೊಂಡಿದ್ದು, ನಾಲ್ಕು ಮನೆಗಳಿಗೆ ಹಾನಿಯಾಗಿರುವ ಘಟನೆ ಆವಲಹಳ್ಳಿಯ ಮೇಡಹಳ್ಳಿಯಲ್ಲಿ ಭಾನುವಾರ ನಡೆದಿದೆ.</p>.<p>ಘಟನೆಯಲ್ಲಿ ಬಿಹಾರದ ಲಾಲೂ (30), ಕುರ್ಬನ್ (19), ಇಲಿಯಾಜ್ (38), ಸಮೀಮ್ (28) ಮತ್ತು ಶಾಮದೇವ್ (56) ಗಾಯಗೊಂಡಿದ್ದು, ಶ್ರೀಸತ್ಯಸಾಯಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಈ ಪೈಕಿ ಲಾಲೂ ಮತ್ತು ಕುರ್ಬನ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರು ವಾಸವಾಗಿದ್ದ ಶೆಡ್ಗಳು ಹಾನಿಗೀಡಾಗಿವೆ. ಬೆಳಿಗ್ಗೆ 11.30ರ ಸುಮಾರಿಗೆ ಮೇಡಹಳ್ಳಿ ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮೆಡಹಳ್ಳಿ ಬಳಿ ಮೆಟ್ರೊ ಕಾಮಗಾರಿ ನಡೆಯುತ್ತಿದ್ದು, ಎಎಸ್ ಕ್ರೇನ್ ಸರ್ವೀಸ್ನಿಂದ ಭಾರೀ ಗಾತ್ರದ ವಸ್ತುಗಳನ್ನು ಮೇಲಕ್ಕೆ ಎತ್ತುವುದು, ಇಳಿಸುವುದು ಮಾಡಲಾಗುತ್ತಿದೆ. ಆದರೆ, ಜನವಸತಿ ಪ್ರದೇಶದಲ್ಲಿ ಅನುಮತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಈ ಹಿಂದೆ ಸಾಕಷ್ಟು ಬಾರಿ ಸ್ಥಳೀಯರು ಪೊಲೀಸರು, ಬಿಬಿಎಂಪಿಗೆ ದೂರು ನೀಡಿದ್ದರು. ಆದರೂ ಕ್ರಮಕೈಗೊಂಡಿಲ್ಲ.</p>.<p>ಜನ ವಸತಿ ಪ್ರದೇಶ ಸಮೀಪದ ಖಾಲಿ ಜಾಗದಲ್ಲಿ ಕ್ರೇನ್ಗಳನ್ನು ನಿಲುಗಡೆ ಮಾಡಲಾಗಿದ್ದು, ಭಾನುವಾರ ಬೆಳಿಗ್ಗೆ ಈ ಜಾಗದಲ್ಲಿ ಕ್ರೇನ್ಗಳನ್ನು ದುರಸ್ತಿ ಮಾಡಿ, ಪ್ರಾಯೋಗಿಕವಾಗಿ ಕೆಲ ವಸ್ತುಗಳನ್ನು ಎತ್ತುವುದು ಮಾಡಲಾಗುತ್ತಿತ್ತು. ಈ ವೇಳೆ ಕ್ರೇನ್ ಟವರ್ ತುಂಡಾಗಿ ಕಾರ್ಮಿಕರು ವಾಸವಿದ್ದ ಶೆಡ್ಗಳ ಮೇಲೆ ಬಿದ್ದಿದೆ. ಕ್ರೇನ್ಗಳು ಚಂದ್ರಶೇಖರ್ ಎಂಬುವರಿಗೆ ಸೇರಿದ್ದು ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಆವಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>