<p><strong>ಬೆಂಗಳೂರು: ‘</strong>ಎರಡು ವರ್ಷಗಳಲ್ಲಿ ಪಿಲ್ಲರ್ ನಿರ್ಮಿಸಲು ಸಾಧ್ಯವಾಗಿಲ್ಲ. ಎರಡು ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?’</p>.<p>ನಮ್ಮ ಮೆಟ್ರೊ ನಾಗವಾರ ನಿಲ್ದಾಣದಿಂದ ಬಾಗಲೂರು ಕ್ರಾಸ್ ನಿಲ್ದಾಣದವರೆಗಿನ ಎರಡನೇ ಹಂತದ ಕಾಮಗಾರಿಯನ್ನು ಭಾನುವಾರ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮೆಟ್ರೊ ಅಧಿಕಾರಿಗಳನ್ನು ಮತ್ತು ಎನ್ಸಿಸಿ ಗುತ್ತಿಗೆ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿ ಇದು.</p>.<p>‘ನನಗೆ ಪಿಲ್ಲರ್ ಕಾಣಿಸುತ್ತಿಲ್ಲ. ನಾನೇನು ಕುರುಡ ಅಂದುಕೊಂಡ್ರಾ? ಒಂದು ಪಿಲ್ಲರ್ ನಿರ್ಮಿಸಲು ಎರಡು ವರ್ಷ ಬೇಕಾ’ ಎಂದು ಪ್ರಶ್ನಿಸಿದರು.</p>.<p>ಮೆಟ್ರೊ ಕಾಮಗಾರಿಯ ತ್ಯಾಜ್ಯವನ್ನು ಪಾದಚಾರಿ ರಸ್ತೆ ಮೇಲೆ ಹಾಕಿರುವುದನ್ನು ಗಮನಿಸಿದ ಸಚಿವರು ಸಿಡಿಮಿಡಿಗೊಂಡರು. ಕೂಡಲೇ ತ್ಯಾಜ್ಯವನ್ನು ತೆರವುಗೊಳಿಸುವಂತೆ ಸೂಚಿಸಿದರು.</p>.<p>ಸಿಬ್ಚಂದಿಯನ್ನು ಕರೆಸಿ ಸಚಿವರ ಎದುರೇ ಅಧಿಕಾರಿಗಳು ತ್ಯಾಜ್ಯವನ್ನು ತೆರವುಗೊಳಿಸಿದರು.</p>.<p>‘ಎಲ್ಲೋ ನಿರ್ಮಾಣ ಕಾರ್ಯ ನಡೆಯುತ್ತಿದ್ದರೆ ಇನ್ನೆಲ್ಲೋ ಯಾಕೆ ರಸ್ತೆ ಬಂದ್ ಮಾಡ್ತೀರಿ. ಜನರಿಗೆ ತೊಂದರೆ ಕೊಡ್ತೀರಿ? ಪಾದಚಾರಿ ರಸ್ತೆಯೂ ಇಲ್ಲ. ವಾಹನ ಸಂಚಾರಕ್ಕೂ ತೊಡಕು. ಯಾಕೆ ಹೀಗೆ ಮಾಡ್ತೀರಿ? ಕೂಡಲೇ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ’ ಎಂದು ಸೂಚಿಸಿದರು.</p>.<p>ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.</p>.<p>ನಾಗವಾರ, ವೀರಣ್ಣಪಾಳ್ಯ, ಹೆಬ್ಬಾಳ, ಎಸ್ಟೀಮ್ ಮಾಲ್ ಜಂಕ್ಷನ್, ಅಲ್ಲಾಳಸಂದ್ರ, ಜಕ್ಕೂರು ವಾಯುನೆಲೆ ಪ್ರದೇಶ, ಬ್ಯಾಟರಾಯನಪುರ, ಕೊಡಿಗೆಹಳ್ಳಿಯಲ್ಲಿ ಮೆಟ್ರೊ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.</p>.<p>ಬೆಂಗಳೂರು ಉತ್ತರ ಪಾಲಿಕೆ ಆಯುಕ್ತ ಸುನೀಲ್ ಕುಮಾರ್, ಮೆಟ್ರೊ ಮುಖ್ಯ ಎಂಜಿನಿಯರ್, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಎರಡು ವರ್ಷಗಳಲ್ಲಿ ಪಿಲ್ಲರ್ ನಿರ್ಮಿಸಲು ಸಾಧ್ಯವಾಗಿಲ್ಲ. ಎರಡು ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?’</p>.<p>ನಮ್ಮ ಮೆಟ್ರೊ ನಾಗವಾರ ನಿಲ್ದಾಣದಿಂದ ಬಾಗಲೂರು ಕ್ರಾಸ್ ನಿಲ್ದಾಣದವರೆಗಿನ ಎರಡನೇ ಹಂತದ ಕಾಮಗಾರಿಯನ್ನು ಭಾನುವಾರ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮೆಟ್ರೊ ಅಧಿಕಾರಿಗಳನ್ನು ಮತ್ತು ಎನ್ಸಿಸಿ ಗುತ್ತಿಗೆ ಕಂಪನಿಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪರಿ ಇದು.</p>.<p>‘ನನಗೆ ಪಿಲ್ಲರ್ ಕಾಣಿಸುತ್ತಿಲ್ಲ. ನಾನೇನು ಕುರುಡ ಅಂದುಕೊಂಡ್ರಾ? ಒಂದು ಪಿಲ್ಲರ್ ನಿರ್ಮಿಸಲು ಎರಡು ವರ್ಷ ಬೇಕಾ’ ಎಂದು ಪ್ರಶ್ನಿಸಿದರು.</p>.<p>ಮೆಟ್ರೊ ಕಾಮಗಾರಿಯ ತ್ಯಾಜ್ಯವನ್ನು ಪಾದಚಾರಿ ರಸ್ತೆ ಮೇಲೆ ಹಾಕಿರುವುದನ್ನು ಗಮನಿಸಿದ ಸಚಿವರು ಸಿಡಿಮಿಡಿಗೊಂಡರು. ಕೂಡಲೇ ತ್ಯಾಜ್ಯವನ್ನು ತೆರವುಗೊಳಿಸುವಂತೆ ಸೂಚಿಸಿದರು.</p>.<p>ಸಿಬ್ಚಂದಿಯನ್ನು ಕರೆಸಿ ಸಚಿವರ ಎದುರೇ ಅಧಿಕಾರಿಗಳು ತ್ಯಾಜ್ಯವನ್ನು ತೆರವುಗೊಳಿಸಿದರು.</p>.<p>‘ಎಲ್ಲೋ ನಿರ್ಮಾಣ ಕಾರ್ಯ ನಡೆಯುತ್ತಿದ್ದರೆ ಇನ್ನೆಲ್ಲೋ ಯಾಕೆ ರಸ್ತೆ ಬಂದ್ ಮಾಡ್ತೀರಿ. ಜನರಿಗೆ ತೊಂದರೆ ಕೊಡ್ತೀರಿ? ಪಾದಚಾರಿ ರಸ್ತೆಯೂ ಇಲ್ಲ. ವಾಹನ ಸಂಚಾರಕ್ಕೂ ತೊಡಕು. ಯಾಕೆ ಹೀಗೆ ಮಾಡ್ತೀರಿ? ಕೂಡಲೇ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ’ ಎಂದು ಸೂಚಿಸಿದರು.</p>.<p>ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.</p>.<p>ನಾಗವಾರ, ವೀರಣ್ಣಪಾಳ್ಯ, ಹೆಬ್ಬಾಳ, ಎಸ್ಟೀಮ್ ಮಾಲ್ ಜಂಕ್ಷನ್, ಅಲ್ಲಾಳಸಂದ್ರ, ಜಕ್ಕೂರು ವಾಯುನೆಲೆ ಪ್ರದೇಶ, ಬ್ಯಾಟರಾಯನಪುರ, ಕೊಡಿಗೆಹಳ್ಳಿಯಲ್ಲಿ ಮೆಟ್ರೊ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.</p>.<p>ಬೆಂಗಳೂರು ಉತ್ತರ ಪಾಲಿಕೆ ಆಯುಕ್ತ ಸುನೀಲ್ ಕುಮಾರ್, ಮೆಟ್ರೊ ಮುಖ್ಯ ಎಂಜಿನಿಯರ್, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಹಾಗೂ ಬೆಸ್ಕಾಂ ಅಧಿಕಾರಿಗಳು ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>