ಸೆಂಟ್ರಲ್ ಸಿಲ್ಕ್ಬೋರ್ಡ್ನಿಂದ ಕಾಡುಬೀಸನಹಳ್ಳಿಯವರೆಗೆ ಮೆಟ್ರೊ ಮಾರ್ಗ ನಿರ್ಮಿಸಲು ಈ ಮರಗಳು ಅಡ್ಡಿಯಾಗಿವೆ. ರಸ್ತೆಯ ಮಧ್ಯಭಾಗದಲ್ಲಿ (ಮೀಡಿಯನ್) ಈ ಮರಗಳಿದ್ದು, ಕಡಿಯುವುದು ಅನಿವಾರ್ಯವಾಗಿದೆ. ಈ ಸಂಬಂಧ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದು. ಜುಲೈ 4ರೊಳಗೆ ಈ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಬಿಬಿಎಂಪಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಎಸ್. ರಂಗನಾಥ ಸ್ವಾಮಿ ‘ಪ್ರಜಾವಾಣಿ‘ಗೆ ತಿಳಿಸಿದರು.