<p><strong>ಬೆಂಗಳೂರು</strong>: ನಗರದ ಕೆ.ಆರ್.ಪುರಂ ಮೆಟ್ರೊ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಅದು ಎಚ್ಎಎಲ್ ಉದ್ಯೋಗಿಯೊಬ್ಬರು ಬಿಟ್ಟು ಹೋಗಿದ್ದ ಟೂಲ್ ಕಿಟ್ ಬಾಕ್ಸ್ ಎಂದು ಗೊತ್ತಾದ ಬಳಿಕ ಸಾರ್ವಜನಿಕರು ಮತ್ತು ಪೊಲೀಸರು ನಿಟ್ಟುಸಿರುಬಿಟ್ಟರು.</p><p>ಎಚ್ಎಎಲ್ನ ಏರ್ಕ್ರಾಫ್ಟ್ ವಿಭಾಗದ ಉದ್ಯೋಗಿ ಮಂಜುನಾಥ್ ಜಾಧವ್ ಅವರು ಹರಿಯಾಣದಲ್ಲಿ ತರಬೇತಿ ಮುಗಿಸಿ ನಗರಕ್ಕೆ ರೈಲಿನಲ್ಲಿ ಬಂದರು. ಬಳಿಕ ಅಲ್ಲಿಂದ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಟೂಲ್ ಕಿಟ್ ಬಾಕ್ಸ್ ಅನ್ನು ನಿಲ್ದಾಣದಲ್ಲಿಯೇ ಮರೆತು ಹೋಗಿದ್ದಾರೆ. </p><p>ಬಾಕ್ಸ್ ಗಮನಿಸಿದ ಸಾರ್ವಜನಿಕರು, ಬಾಂಬ್ ಇರಬಹುದೆಂದು ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ, ಸ್ಥಳವನ್ನು ಸುತ್ತುವರಿದರು.</p><p>ಮುಂಜಾಗ್ರತಾ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳ, ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಬಾಕ್ಸ್ ಪರಿಶೀಲಿಸಿದಾಗ ಸ್ಫೋಟಕ ವಸ್ತುಗಳು ಇರಲಿಲ್ಲ. ಬದಲಾಗಿ ಟೂಲ್ ಕಿಟ್ ಬಾಕ್ಸ್ ಎಂಬುದು ಗೊತ್ತಾಯಿತು. <br><br>ಮರೆತುಹೋಗಿದ್ದ ಟೂಲ್ ಕಿಟ್ ಬಾಕ್ಸ್ ಅನ್ನು ತೆಗೆದುಕೊಳ್ಳಲು ಮಂಜುನಾಥ್ ಅವರು ಮೆಟ್ರೊ ನಿಲ್ದಾಣಕ್ಕೆ ವಾಪಸ್ ಬಂದಿದ್ದಾರೆ. ಆಗ ಪೊಲೀಸರು ಅವರನ್ನು ವಿಚಾರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಬೇಜವಾಬ್ದಾರಿತನದಿಂದ ವರ್ತಿಸಬಾರದೆಂದು ಎಚ್ಚರಿಕೆ ನೀಡಿ, ಬಾಕ್ಸ್ ಕೊಟ್ಟು ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಕೆ.ಆರ್.ಪುರಂ ಮೆಟ್ರೊ ನಿಲ್ದಾಣದಲ್ಲಿ ಬುಧವಾರ ಮಧ್ಯಾಹ್ನ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿದ್ದು, ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಅದು ಎಚ್ಎಎಲ್ ಉದ್ಯೋಗಿಯೊಬ್ಬರು ಬಿಟ್ಟು ಹೋಗಿದ್ದ ಟೂಲ್ ಕಿಟ್ ಬಾಕ್ಸ್ ಎಂದು ಗೊತ್ತಾದ ಬಳಿಕ ಸಾರ್ವಜನಿಕರು ಮತ್ತು ಪೊಲೀಸರು ನಿಟ್ಟುಸಿರುಬಿಟ್ಟರು.</p><p>ಎಚ್ಎಎಲ್ನ ಏರ್ಕ್ರಾಫ್ಟ್ ವಿಭಾಗದ ಉದ್ಯೋಗಿ ಮಂಜುನಾಥ್ ಜಾಧವ್ ಅವರು ಹರಿಯಾಣದಲ್ಲಿ ತರಬೇತಿ ಮುಗಿಸಿ ನಗರಕ್ಕೆ ರೈಲಿನಲ್ಲಿ ಬಂದರು. ಬಳಿಕ ಅಲ್ಲಿಂದ ಮೆಟ್ರೊ ನಿಲ್ದಾಣಕ್ಕೆ ಬಂದಿದ್ದಾರೆ. ಈ ವೇಳೆ ಅವರು ತಮ್ಮ ಟೂಲ್ ಕಿಟ್ ಬಾಕ್ಸ್ ಅನ್ನು ನಿಲ್ದಾಣದಲ್ಲಿಯೇ ಮರೆತು ಹೋಗಿದ್ದಾರೆ. </p><p>ಬಾಕ್ಸ್ ಗಮನಿಸಿದ ಸಾರ್ವಜನಿಕರು, ಬಾಂಬ್ ಇರಬಹುದೆಂದು ಶಂಕೆ ವ್ಯಕ್ತಪಡಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಹದೇವಪುರ ಪೊಲೀಸರು ಭೇಟಿ ನೀಡಿ, ಸ್ಥಳವನ್ನು ಸುತ್ತುವರಿದರು.</p><p>ಮುಂಜಾಗ್ರತಾ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳ, ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳವನ್ನು ಕರೆಸಿಕೊಳ್ಳಲಾಯಿತು. ಬಾಕ್ಸ್ ಪರಿಶೀಲಿಸಿದಾಗ ಸ್ಫೋಟಕ ವಸ್ತುಗಳು ಇರಲಿಲ್ಲ. ಬದಲಾಗಿ ಟೂಲ್ ಕಿಟ್ ಬಾಕ್ಸ್ ಎಂಬುದು ಗೊತ್ತಾಯಿತು. <br><br>ಮರೆತುಹೋಗಿದ್ದ ಟೂಲ್ ಕಿಟ್ ಬಾಕ್ಸ್ ಅನ್ನು ತೆಗೆದುಕೊಳ್ಳಲು ಮಂಜುನಾಥ್ ಅವರು ಮೆಟ್ರೊ ನಿಲ್ದಾಣಕ್ಕೆ ವಾಪಸ್ ಬಂದಿದ್ದಾರೆ. ಆಗ ಪೊಲೀಸರು ಅವರನ್ನು ವಿಚಾರಣೆ ನಡೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಬೇಜವಾಬ್ದಾರಿತನದಿಂದ ವರ್ತಿಸಬಾರದೆಂದು ಎಚ್ಚರಿಕೆ ನೀಡಿ, ಬಾಕ್ಸ್ ಕೊಟ್ಟು ಕಳುಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>