<p><strong>ಬೆಂಗಳೂರು</strong>: ಬೆಂಗಳೂರಿನ ಪ್ರತಿಷ್ಟಿತ ರಸ್ತೆಯಾದ ಮಹಾತ್ಮಾ ಗಾಂಧಿ ರಸ್ತೆಯ (ಎಂಜಿ ರೋಡ್) ಅವ್ಯವಸ್ಥೆ ಬಗ್ಗೆ ಬೆಂಗಳೂರಿನ ಉದ್ಯಮಿ ಮೋಹನ್ದಾಸ್ ಪೈ ಅವರು ಚಿತ್ರವೊಂದನ್ನು ಹಂಚಿಕೊಂಡು ಕಿಡಿಕಾರಿದ್ದಾರೆ.</p><p>ಈ ಫೋಟೊ ಸದ್ಯ ಟ್ವಿಟರ್ನಲ್ಲಿ ಹೆಚ್ಚು ಚರ್ಚೆಯಾಗಿದ್ದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂಮ್ದಾರ್ ಶಾ ಸೇರಿದಂತೆ ಅನೇಕರು ಹಂಚಿಕೊಂಡು ಬೆಂಗಳೂರಿನ ಕೆಲ ಅಸಡ್ಡೆ ಮನೋಭಾವದ ನಾಗರಿಕ ವರ್ತನೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಬೆಂಗಳೂರಿನ ಅತ್ಯಂತ ಪ್ರಮುಖ ರಸ್ತೆಯಾದ ಎಂ.ಜಿ ರಸ್ತೆಯಲ್ಲಿ ಫುಟ್ಪಾತ್ ಹಾಳಾಗಿರುವುದನ್ನು ಮತ್ತು ಕಸವನ್ನು ಹೇಗೆ ಹಾಕಿದಾರೆ ನೋಡಿ. ನಮ್ಮ ಅತ್ಯಂತ ಪ್ರತಿಷ್ಠಿತ ರಸ್ತೆಯಲ್ಲೂ ಉತ್ತಮ ಫುಟ್ಪಾತ್ಗಳನ್ನು ಹೊಂದಲು ಸಾಧ್ಯವಾಗದಿರುವುದು ಎಂತಹ ನಾಚಿಕೆಗೇಡಿನ ಸಂಗತಿ. ಸಂಬಂಧಿಸಿದವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p><p>ಕಿರಣ್ ಮಜೂಂಮ್ದಾರ್ ಶಾ ಅವರು, ಕಸದ ಬಗ್ಗೆ ನಾಗರಿಕ ಪ್ರಜ್ಞೆ ಇಲ್ಲದ ಬೇಜವಾಬ್ದಾರಿ ಜನಗಳ ಕೆಲಸವಿದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಬೆಂಗಳೂರಿನ ಅನೇಕ ನಾಗರಿಕರು ಈ ಪೋಸ್ಟ್ಗಳಿಗೆ ಪ್ರತಿಕ್ರಿಯಿಸಿದ್ದು, ಪ್ರತಿದಿನ ಸಾವಿರಾರು ಜನ ಅಡ್ಡಾಡುವ ಎಂ.ಜಿ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗಗಳು ಮತ್ತು ಅವುಗಳ ನಿರ್ವಹಣೆ ಸರಿಯಾಗಿಲ್ಲ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರಿನ ಪ್ರತಿಷ್ಟಿತ ರಸ್ತೆಯಾದ ಮಹಾತ್ಮಾ ಗಾಂಧಿ ರಸ್ತೆಯ (ಎಂಜಿ ರೋಡ್) ಅವ್ಯವಸ್ಥೆ ಬಗ್ಗೆ ಬೆಂಗಳೂರಿನ ಉದ್ಯಮಿ ಮೋಹನ್ದಾಸ್ ಪೈ ಅವರು ಚಿತ್ರವೊಂದನ್ನು ಹಂಚಿಕೊಂಡು ಕಿಡಿಕಾರಿದ್ದಾರೆ.</p><p>ಈ ಫೋಟೊ ಸದ್ಯ ಟ್ವಿಟರ್ನಲ್ಲಿ ಹೆಚ್ಚು ಚರ್ಚೆಯಾಗಿದ್ದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂಮ್ದಾರ್ ಶಾ ಸೇರಿದಂತೆ ಅನೇಕರು ಹಂಚಿಕೊಂಡು ಬೆಂಗಳೂರಿನ ಕೆಲ ಅಸಡ್ಡೆ ಮನೋಭಾವದ ನಾಗರಿಕ ವರ್ತನೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಬೆಂಗಳೂರಿನ ಅತ್ಯಂತ ಪ್ರಮುಖ ರಸ್ತೆಯಾದ ಎಂ.ಜಿ ರಸ್ತೆಯಲ್ಲಿ ಫುಟ್ಪಾತ್ ಹಾಳಾಗಿರುವುದನ್ನು ಮತ್ತು ಕಸವನ್ನು ಹೇಗೆ ಹಾಕಿದಾರೆ ನೋಡಿ. ನಮ್ಮ ಅತ್ಯಂತ ಪ್ರತಿಷ್ಠಿತ ರಸ್ತೆಯಲ್ಲೂ ಉತ್ತಮ ಫುಟ್ಪಾತ್ಗಳನ್ನು ಹೊಂದಲು ಸಾಧ್ಯವಾಗದಿರುವುದು ಎಂತಹ ನಾಚಿಕೆಗೇಡಿನ ಸಂಗತಿ. ಸಂಬಂಧಿಸಿದವರು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.</p><p>ಕಿರಣ್ ಮಜೂಂಮ್ದಾರ್ ಶಾ ಅವರು, ಕಸದ ಬಗ್ಗೆ ನಾಗರಿಕ ಪ್ರಜ್ಞೆ ಇಲ್ಲದ ಬೇಜವಾಬ್ದಾರಿ ಜನಗಳ ಕೆಲಸವಿದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p><p>ಬೆಂಗಳೂರಿನ ಅನೇಕ ನಾಗರಿಕರು ಈ ಪೋಸ್ಟ್ಗಳಿಗೆ ಪ್ರತಿಕ್ರಿಯಿಸಿದ್ದು, ಪ್ರತಿದಿನ ಸಾವಿರಾರು ಜನ ಅಡ್ಡಾಡುವ ಎಂ.ಜಿ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗಗಳು ಮತ್ತು ಅವುಗಳ ನಿರ್ವಹಣೆ ಸರಿಯಾಗಿಲ್ಲ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>