<p><strong>ಬೆಂಗಳೂರು</strong>: ಜೂನ್ನಲ್ಲಿ ಮುಂಗಾರು ಆರಂಭವಾಗುವುದಕ್ಕೂ ಮುನ್ನ ಎಲ್ಲರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.</p>.<p>ಎಲ್ಲ ಮುಖ್ಯ, ಉಪ ಮುಖ್ಯರಸ್ತೆ ಮತ್ತು ಇತರೇ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಚರಂಡಿ ಹೂಳು ತಗೆಯುವುದು, ಶೋಲ್ಡರ್ ಡ್ರೈನ್ಸ್ ಹಾಗೂ ಗ್ರೇಟಿಂಗ್ಸ್ ಸ್ವಚ್ಛತೆಯನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ, ರಸ್ತೆಗಳಲ್ಲಿನ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯಲು ಅವಕಾಶವಿದೆಯೇ ಅಥವಾ ಹೂಳು ತುಂಬಿದೆಯೇ ಎಂಬುದನ್ನು ಪರಿಶೀಲಿಸಿ, ಕ್ರಮ ವಹಿಸಲು ಸೂಚಿಸಬೇಕು. ರಾಜಕಾಲುವೆಗಳಲ್ಲಿ ಹೂಳುತೆಗೆದಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಮೇ 8ರೊಳಗೆ ಚಿತ್ರ ಸಹಿತವರದಿ ನೀಡಬೇಕು ಎಂದರು.</p>.<p>ಮರ ತೆರವಿಗೆ ಸೂಚನೆ: ಏ. 29ರಂದು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮರಗಳು, ರೆಂಬೆ-ಕೊಂಬೆಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಗಿದೆ. ಪಾಲಿಕೆಯ ಅರಣ್ಯ ಘಟಕದ ವತಿಯಿಂದ ಮಳೆ-ಗಾಳಿಗೆ ಬಿದ್ದ ಮರ ಹಾಗೂ ರೆಂಬೆಗಳನ್ನು ತೆರವುಗೊಳಿಸಲು ಅಭಿವೃದ್ಧಿಯ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-1974233833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜೂನ್ನಲ್ಲಿ ಮುಂಗಾರು ಆರಂಭವಾಗುವುದಕ್ಕೂ ಮುನ್ನ ಎಲ್ಲರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದರು.</p>.<p>ಎಲ್ಲ ಮುಖ್ಯ, ಉಪ ಮುಖ್ಯರಸ್ತೆ ಮತ್ತು ಇತರೇ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಚರಂಡಿ ಹೂಳು ತಗೆಯುವುದು, ಶೋಲ್ಡರ್ ಡ್ರೈನ್ಸ್ ಹಾಗೂ ಗ್ರೇಟಿಂಗ್ಸ್ ಸ್ವಚ್ಛತೆಯನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<p>ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ತಂಡಗಳನ್ನು ರಚಿಸಿ, ರಸ್ತೆಗಳಲ್ಲಿನ ಮಳೆ ನೀರು ಚರಂಡಿಗಳಲ್ಲಿ ಸರಾಗವಾಗಿ ಹರಿಯಲು ಅವಕಾಶವಿದೆಯೇ ಅಥವಾ ಹೂಳು ತುಂಬಿದೆಯೇ ಎಂಬುದನ್ನು ಪರಿಶೀಲಿಸಿ, ಕ್ರಮ ವಹಿಸಲು ಸೂಚಿಸಬೇಕು. ರಾಜಕಾಲುವೆಗಳಲ್ಲಿ ಹೂಳುತೆಗೆದಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಮೇ 8ರೊಳಗೆ ಚಿತ್ರ ಸಹಿತವರದಿ ನೀಡಬೇಕು ಎಂದರು.</p>.<p>ಮರ ತೆರವಿಗೆ ಸೂಚನೆ: ಏ. 29ರಂದು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮರಗಳು, ರೆಂಬೆ-ಕೊಂಬೆಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ಸಾಕಷ್ಟು ಅಡಚಣೆಯಾಗಿದೆ. ಪಾಲಿಕೆಯ ಅರಣ್ಯ ಘಟಕದ ವತಿಯಿಂದ ಮಳೆ-ಗಾಳಿಗೆ ಬಿದ್ದ ಮರ ಹಾಗೂ ರೆಂಬೆಗಳನ್ನು ತೆರವುಗೊಳಿಸಲು ಅಭಿವೃದ್ಧಿಯ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-1974233833</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>