‘ಕೊಲೆಯಾದ ಯುವಕ, ಸ್ನೇಹಿತ ದಿಲೀಪ್ಗೆ ₹20 ಸಾವಿರ ಕೈ ಸಾಲ ನೀಡಿದ್ದ ಪಾಂಡು ಹಿಂದಿರುಗಿಸಲು ಹಲವು ಬಾರಿ ಮನವಿ ಮಾಡಿದ್ದ. ಇದರಿಂದ ಕುಪಿತಗೊಂಡಿದ್ದ ಆರೋಪಿ, ಕೊಲೆಗೆ ಸಂಚು ರೂಪಿಸಿದ್ದ. ಖಾಲಿ ಪ್ರದೇಶಕ್ಕೆ ಕರೆದೊಯ್ದು ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ್ದ. ಜೊತೆಗೆ ಸ್ಥಳದಲ್ಲಿ ಬಿದ್ದಿದ್ದ ದೊಡ್ಡ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.