<p><strong>ಬೆಂಗಳೂರು</strong>: ‘ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿರ್ಬಂಧಿಸುವ ಪ್ರಸ್ತಾವ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅತಿಯಾದ ವೇಗದಿಂದ ಈ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಲೇನ್ ಶಿಸ್ತಿನ ಕೊರತೆ ಮತ್ತು ನಿಗದಿತ ವೇಗದ ಮಿತಿಯಾದ ಪ್ರತಿ ಗಂಟೆಗೆ 100 ಕಿ.ಮೀ. ಮೀರುವ ವಾಹನಗಳು ಅಪಘಾತಕ್ಕೆ ಪ್ರಮುಖ ಕಾರಣವಾಗಿವೆ. ವಾಹನ ಸವಾರರಿಗೆ ವೇಗದ ಮಿತಿ ಬಗ್ಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಈ ರಸ್ತೆ ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೆದ್ದಾರಿಯಲ್ಲಿನ ಸಮಸ್ಯೆಗಳ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್ಎಚ್ಎಐ) ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದರು.</p>.<p>ಮರಿತಿಬ್ಬೇಗೌಡ ಮಾತನಾಡಿ, ‘ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇ ರಾಷ್ಟ್ರೀಯ ಹೆದ್ದಾರಿ ಅಲ್ಲ, ಸಾವಿನ ದಾರಿಯಾಗಿದೆ. ಕೇವಲ ಆರು ತಿಂಗಳಲ್ಲಿ 512 ಅಪಘಾತಗಳು ಸಂಭವಿಸಿವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಪ್ರತಿ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದರೂ ನಿಯಂತ್ರಣಕ್ಕೆ ಕ್ರಮಕೈಗೊಂಡಿಲ್ಲ. ಹೆದ್ದಾರಿಯಲ್ಲಿ ಕಳ್ಳತನಗಳು ನಡೆಯುತ್ತಿವೆ. ಹೀಗಾಗಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿರ್ಬಂಧಿಸುವ ಪ್ರಸ್ತಾವ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅತಿಯಾದ ವೇಗದಿಂದ ಈ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಲೇನ್ ಶಿಸ್ತಿನ ಕೊರತೆ ಮತ್ತು ನಿಗದಿತ ವೇಗದ ಮಿತಿಯಾದ ಪ್ರತಿ ಗಂಟೆಗೆ 100 ಕಿ.ಮೀ. ಮೀರುವ ವಾಹನಗಳು ಅಪಘಾತಕ್ಕೆ ಪ್ರಮುಖ ಕಾರಣವಾಗಿವೆ. ವಾಹನ ಸವಾರರಿಗೆ ವೇಗದ ಮಿತಿ ಬಗ್ಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.</p>.<p>‘ಈ ರಸ್ತೆ ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೆದ್ದಾರಿಯಲ್ಲಿನ ಸಮಸ್ಯೆಗಳ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್ಎಚ್ಎಐ) ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದರು.</p>.<p>ಮರಿತಿಬ್ಬೇಗೌಡ ಮಾತನಾಡಿ, ‘ಬೆಂಗಳೂರು– ಮೈಸೂರು ಎಕ್ಸ್ಪ್ರೆಸ್ ವೇ ರಾಷ್ಟ್ರೀಯ ಹೆದ್ದಾರಿ ಅಲ್ಲ, ಸಾವಿನ ದಾರಿಯಾಗಿದೆ. ಕೇವಲ ಆರು ತಿಂಗಳಲ್ಲಿ 512 ಅಪಘಾತಗಳು ಸಂಭವಿಸಿವೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಪ್ರತಿ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದರೂ ನಿಯಂತ್ರಣಕ್ಕೆ ಕ್ರಮಕೈಗೊಂಡಿಲ್ಲ. ಹೆದ್ದಾರಿಯಲ್ಲಿ ಕಳ್ಳತನಗಳು ನಡೆಯುತ್ತಿವೆ. ಹೀಗಾಗಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>