<p><strong>ಬೆಂಗಳೂರು</strong>: ಜಿಬಿಎ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತ ಮನೆ-ಮನೆಗೆ ಭೇಟಿ ನೀಡಿ, ಮನೆ ಪಟ್ಟಿ ಸಿದ್ದಪಡಿಸುವ ಕಾರ್ಯ ಏ.16ರಿಂದ ಆರಂಭವಾಗಲಿದೆ. ಇದಕ್ಕಾಗಿ 26 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.</p>.<p>ಗಣತಿದಾರರು ಮತ್ತು ಮೇಲ್ವಿಚಾರಕರು, ಅಧಿಕಾರಿಗಳ ಸಹಕಾರದೊಂದಿಗೆ ಎಲ್ಲಾ ಮನೆಗಳ ಸಮಗ್ರ ಮತ್ತು ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದರು.</p>.<p>23,705 ಗಣತಿದಾರರು, 2,912 ಮೇಲ್ವಿಚಾರಕರು ಸೇರಿದಂತೆ 26,616 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲಾ ನಾಗರಿಕರು ಜನಗಣತಿ ತಂಡಗಳಿಗೆ ಪೂರ್ಣ ಸಹಕಾರ ನೀಡಿ, ನಿಖರ ಮಾಹಿತಿಯನ್ನು ಒದಗಿಸುವಂತೆ ವಿನಂತಿಸಲಾಗಿದೆ. ಜನಗಣತಿಯಲ್ಲಿ ಭಾಗವಹಿಸುವುದು ಒಂದು ಮಹತ್ವದ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ಹೇಳಿದರು.</p>.<p>ಜನಗಣತಿ ಉದ್ದೇಶಕ್ಕಾಗಿ ಮಾಹಿತಿ ಯನ್ನು ನೀಡುವುದು ಜನಗಣತಿ ಕಾಯ್ದೆ 1948ರ ಅನ್ವಯ ಕಡ್ಡಾಯವಾಗಿದ್ದು, ಮಾಹಿತಿ ನೀಡಲು ನಿರಾಕರಿಸಿ ದಲ್ಲಿ ಅಥವಾ ಸಿಬ್ಬಂದಿಗೆ ಅಸಹಕಾರ ತೋರಿದಲ್ಲಿ ಕಾಯ್ದೆಯ ವಿಧಿಗಳ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಿಬಿಎ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಮೊದಲ ಹಂತ ಮನೆ-ಮನೆಗೆ ಭೇಟಿ ನೀಡಿ, ಮನೆ ಪಟ್ಟಿ ಸಿದ್ದಪಡಿಸುವ ಕಾರ್ಯ ಏ.16ರಿಂದ ಆರಂಭವಾಗಲಿದೆ. ಇದಕ್ಕಾಗಿ 26 ಸಾವಿರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.</p>.<p>ಗಣತಿದಾರರು ಮತ್ತು ಮೇಲ್ವಿಚಾರಕರು, ಅಧಿಕಾರಿಗಳ ಸಹಕಾರದೊಂದಿಗೆ ಎಲ್ಲಾ ಮನೆಗಳ ಸಮಗ್ರ ಮತ್ತು ನಿಖರ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ ಎಂದರು.</p>.<p>23,705 ಗಣತಿದಾರರು, 2,912 ಮೇಲ್ವಿಚಾರಕರು ಸೇರಿದಂತೆ 26,616 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಲ್ಲಾ ನಾಗರಿಕರು ಜನಗಣತಿ ತಂಡಗಳಿಗೆ ಪೂರ್ಣ ಸಹಕಾರ ನೀಡಿ, ನಿಖರ ಮಾಹಿತಿಯನ್ನು ಒದಗಿಸುವಂತೆ ವಿನಂತಿಸಲಾಗಿದೆ. ಜನಗಣತಿಯಲ್ಲಿ ಭಾಗವಹಿಸುವುದು ಒಂದು ಮಹತ್ವದ ರಾಷ್ಟ್ರೀಯ ಕರ್ತವ್ಯವಾಗಿದೆ ಎಂದು ಹೇಳಿದರು.</p>.<p>ಜನಗಣತಿ ಉದ್ದೇಶಕ್ಕಾಗಿ ಮಾಹಿತಿ ಯನ್ನು ನೀಡುವುದು ಜನಗಣತಿ ಕಾಯ್ದೆ 1948ರ ಅನ್ವಯ ಕಡ್ಡಾಯವಾಗಿದ್ದು, ಮಾಹಿತಿ ನೀಡಲು ನಿರಾಕರಿಸಿ ದಲ್ಲಿ ಅಥವಾ ಸಿಬ್ಬಂದಿಗೆ ಅಸಹಕಾರ ತೋರಿದಲ್ಲಿ ಕಾಯ್ದೆಯ ವಿಧಿಗಳ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>