<p>ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿ, ಗುಜರಿ ಸಾಮಗ್ರಿಗಳು ಭಸ್ಮವಾಗಿವೆ.</p>.<p>ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.</p>.<p>ತಮಿಳುನಾಡಿನ ಕುಂದನ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿ ವ್ಯಾಪಿಸಿ ಗೋದಾಮು ಧಗಧಗನೇ ಹೊತ್ತಿ ಉರಿದಿದೆ. ಗೋದಾಮಿನಲ್ಲಿ ಯಾರೂ ಇರಲಿಲ್ಲ. ಯಾವುದೇ ಪ್ರಾಣಹಾನಿಯೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೆಂಕಿ ಬಿದ್ದ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸಿಬ್ಬಂದಿ ಸ್ಥಳಕ್ಕೆ ಬಂದು ಮೂರು ವಾಹನಗಳಲ್ಲಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.</p>.<p>ಹೆಚ್ಚಾಗಿ ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿಯಿಂದ ದೊಡ್ಡಮಟ್ಟದ ಹೊಗೆ ಆವರಿಸಿಕೊಂಡಿತ್ತು. ಪಕ್ಕದಲ್ಲಿಯೇ ಇದ್ದ ಕಬ್ಬಿಣದ ರಾಡ್ಗಳು, ಡ್ರಮ್ಗಳನ್ನು ಶೇಖರಿಸಿದ್ದ ಗೋದಾಮಿಗೂ ಬೆಂಕಿ ವ್ಯಾಪಿಸಿದೆ. ಹೀಗಾಗಿ, ಅಲ್ಲಿಯೂ ಕೆಲವು ವಸ್ತುಗಳು ಸುಟ್ಟು ಹೋಗಿವೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಕುಂದನ್ ಅವರು ಎರಡು ವರ್ಷದಿಂದ ಗೋದಾಮು ನಡೆಸುತ್ತಿದ್ದರು. ಬುಧವಾರ ಸಂಜೆ ತಮಿಳುನಾಡಿಗೆ ತೆರಳಿದ್ದರು. ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-4-1325616993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯಂಡಹಳ್ಳಿಯ ಪ್ಲಾಸ್ಟಿಕ್ ಗೋದಾಮಿನಲ್ಲಿ ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿ, ಗುಜರಿ ಸಾಮಗ್ರಿಗಳು ಭಸ್ಮವಾಗಿವೆ.</p>.<p>ಶಾರ್ಟ್ ಸರ್ಕಿಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.</p>.<p>ತಮಿಳುನಾಡಿನ ಕುಂದನ್ ಎಂಬುವರಿಗೆ ಸೇರಿದ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿ ವ್ಯಾಪಿಸಿ ಗೋದಾಮು ಧಗಧಗನೇ ಹೊತ್ತಿ ಉರಿದಿದೆ. ಗೋದಾಮಿನಲ್ಲಿ ಯಾರೂ ಇರಲಿಲ್ಲ. ಯಾವುದೇ ಪ್ರಾಣಹಾನಿಯೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬೆಂಕಿ ಬಿದ್ದ ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಸಿಬ್ಬಂದಿ ಸ್ಥಳಕ್ಕೆ ಬಂದು ಮೂರು ವಾಹನಗಳಲ್ಲಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.</p>.<p>ಹೆಚ್ಚಾಗಿ ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿಯಿಂದ ದೊಡ್ಡಮಟ್ಟದ ಹೊಗೆ ಆವರಿಸಿಕೊಂಡಿತ್ತು. ಪಕ್ಕದಲ್ಲಿಯೇ ಇದ್ದ ಕಬ್ಬಿಣದ ರಾಡ್ಗಳು, ಡ್ರಮ್ಗಳನ್ನು ಶೇಖರಿಸಿದ್ದ ಗೋದಾಮಿಗೂ ಬೆಂಕಿ ವ್ಯಾಪಿಸಿದೆ. ಹೀಗಾಗಿ, ಅಲ್ಲಿಯೂ ಕೆಲವು ವಸ್ತುಗಳು ಸುಟ್ಟು ಹೋಗಿವೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ಕುಂದನ್ ಅವರು ಎರಡು ವರ್ಷದಿಂದ ಗೋದಾಮು ನಡೆಸುತ್ತಿದ್ದರು. ಬುಧವಾರ ಸಂಜೆ ತಮಿಳುನಾಡಿಗೆ ತೆರಳಿದ್ದರು. ಗುರುವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-4-1325616993</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>