<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಎನ್ಸಿಬಿಯ ಬೆಂಗಳೂರು ಪ್ರಾದೇಶಿಕ ಘಟಕದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಆರೋಪಿಗಳಿಂದ ವಶ ಪಡಿಸಿಕೊಂಡಿದ್ದ ₹38 ಕೋಟಿ ಮೌಲ್ಯದ ನೈಸರ್ಗಿಕ–ಸಿಂಥೆಟಿಕ್ ಡ್ರಗ್ಸ್ ಅನ್ನು ಹೊಸಕೋಟೆಯ ಘಟಕದಲ್ಲಿ ಶುಕ್ರವಾರ ನಾಶಪಡಿಸಲಾಯಿತು.</p>.<p>ಒಟ್ಟು 13 ಪ್ರಕರಣಗಳಲ್ಲಿ ವಿವಿಧ ಮಾದರಿಯ 128.75 ಕೆ.ಜಿ. ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳ ಲಾಗಿತ್ತು. ಗಾಂಜಾ, ಹೈಡ್ರೊಪೋನಿಕ್ ಗಾಂಜಾ, ಕೊಕೇನ್, ಎಂಡಿಎಂಎ ಕ್ರಿಸ್ಟಲ್ಗಳನ್ನು ಆರೋಪಿಗಳಿಂದ ಜಪ್ತಿ ಮಾಡಲಾಗಿತ್ತು. ಅದನ್ನು ನಾಶಪಡಿಸಲಾಯಿತು. ಕಳೆದ ಫೆಬ್ರುವರಿಯಲ್ಲೂ ₹11 ಕೋಟಿ ಮೌಲ್ಯದ 1,607 ಕೆ.ಜಿ. ಡ್ರಗ್ಸ್ ನಾಶಪಡಿಸಲಾಗಿತ್ತು. ಈ ವರ್ಷ ಒಟ್ಟು ₹49 ಕೋಟಿ ಮೌಲ್ಯದ ಡ್ರಗ್ಸ್ ನಾಶ ಪಡಿಸಿದಂತಾಗಿದೆ ಎಂದು ಎನ್ಸಿಬಿ ಬೆಂಗಳೂರು ಪ್ರಾದೇಶಿಕ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಎನ್ಸಿಬಿಯ ಪ್ರಾದೇಶಿಕ ನಿರ್ದೇಶಕ ಸಚಿನ್ ಘೋರ್ಪಡೆ, ಸಿಸಿಬಿ ಕ್ರೈಂ–2 ವಿಭಾಗದ ಡಿಸಿಪಿ ರಾಜಾ ಇಮಾಮ್ ಖಾಸೀಂ, ಎನ್ಸಿಬಿಯ ಸಹಾಯಕ ನಿರ್ದೇಶಕ ಎಂ.ಆರ್.ಅರವಿಂದ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ವಿವಿಧೆಡೆ ಎನ್ಸಿಬಿಯ ಬೆಂಗಳೂರು ಪ್ರಾದೇಶಿಕ ಘಟಕದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಆರೋಪಿಗಳಿಂದ ವಶ ಪಡಿಸಿಕೊಂಡಿದ್ದ ₹38 ಕೋಟಿ ಮೌಲ್ಯದ ನೈಸರ್ಗಿಕ–ಸಿಂಥೆಟಿಕ್ ಡ್ರಗ್ಸ್ ಅನ್ನು ಹೊಸಕೋಟೆಯ ಘಟಕದಲ್ಲಿ ಶುಕ್ರವಾರ ನಾಶಪಡಿಸಲಾಯಿತು.</p>.<p>ಒಟ್ಟು 13 ಪ್ರಕರಣಗಳಲ್ಲಿ ವಿವಿಧ ಮಾದರಿಯ 128.75 ಕೆ.ಜಿ. ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳ ಲಾಗಿತ್ತು. ಗಾಂಜಾ, ಹೈಡ್ರೊಪೋನಿಕ್ ಗಾಂಜಾ, ಕೊಕೇನ್, ಎಂಡಿಎಂಎ ಕ್ರಿಸ್ಟಲ್ಗಳನ್ನು ಆರೋಪಿಗಳಿಂದ ಜಪ್ತಿ ಮಾಡಲಾಗಿತ್ತು. ಅದನ್ನು ನಾಶಪಡಿಸಲಾಯಿತು. ಕಳೆದ ಫೆಬ್ರುವರಿಯಲ್ಲೂ ₹11 ಕೋಟಿ ಮೌಲ್ಯದ 1,607 ಕೆ.ಜಿ. ಡ್ರಗ್ಸ್ ನಾಶಪಡಿಸಲಾಗಿತ್ತು. ಈ ವರ್ಷ ಒಟ್ಟು ₹49 ಕೋಟಿ ಮೌಲ್ಯದ ಡ್ರಗ್ಸ್ ನಾಶ ಪಡಿಸಿದಂತಾಗಿದೆ ಎಂದು ಎನ್ಸಿಬಿ ಬೆಂಗಳೂರು ಪ್ರಾದೇಶಿಕ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಎನ್ಸಿಬಿಯ ಪ್ರಾದೇಶಿಕ ನಿರ್ದೇಶಕ ಸಚಿನ್ ಘೋರ್ಪಡೆ, ಸಿಸಿಬಿ ಕ್ರೈಂ–2 ವಿಭಾಗದ ಡಿಸಿಪಿ ರಾಜಾ ಇಮಾಮ್ ಖಾಸೀಂ, ಎನ್ಸಿಬಿಯ ಸಹಾಯಕ ನಿರ್ದೇಶಕ ಎಂ.ಆರ್.ಅರವಿಂದ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>