<p><strong>ಬೆಂಗಳೂರು:</strong> ಓಕಳಿಪುರ ಸಿಗ್ನಲ್ಮುಕ್ತ ಕಾರಿಡಾರ್ನ ಎರಡು ಮಾರ್ಗಗಳು (ಲೂಪ್) ಪೂರ್ಣಗೊಂಡಿದ್ದು, ಒಂದು ವಾರದಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ.</p>.<p>ಮಲ್ಲೇಶ್ವರದಿಂದ ರೈಲು ನಿಲ್ದಾಣ ಹಾಗೂ ರಾಜಾಜಿನಗರದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡು ಮಾರ್ಗಗಳ ನಿರ್ಮಾಣವನ್ನು ಬಿಬಿಎಂಪಿ ಪೂರ್ಣಗೊಳಿಸಿದೆ ಎಂದು ಯೋಜನೆ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ತಿಳಿಸಿದರು.</p>.<p>ಓಕಳಿಪುರ ಸಿಗ್ನಲ್ಮುಕ್ತ ಕಾರಿಡಾರ್ ಯೋಜನೆಯಲ್ಲಿ ಓಕಳಿಪುರದ ಜಂಕ್ಷನ್ನಲ್ಲಿ ಆರು ಪಥಗಳನ್ನು ನಿರ್ಮಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ರೈಲ್ವೆ ಇಲಾಖೆಯಿಂದ ಭೂ ಹಸ್ತಾಂತರ ಪ್ರಕ್ರಿಯೆ ನಿಧಾನವಾದ ಕಾರಣ, ಎರಡು ಮಾರ್ಗಗಳನ್ನು ಪೂರ್ಣಗೊಳಿಸುವುದು ವಿಳಂಬವಾಗಿತ್ತು. ಈಗ ಎಲ್ಲವೂ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಉದ್ಘಾಟಿಸಲಾಗುತ್ತದೆ ಎಂದರು.</p>.<p>‘ತುಮಕೂರು ಮಾರ್ಗದಡಿ ಪ್ರೀಕಾಸ್ಟ್ ಬಾಕ್ಸ್ ಅಳವಡಿಕೆ ಪೂರ್ಣವಾಗಿದೆ. ಚೆನ್ನೈ ರೈಲು ಮಾರ್ಗದಡಿ ಪ್ರೀಕಾಸ್ಟ್ ಬಾಕ್ಸ್ಗಳನ್ನು ರೈಲ್ವೆ ಇಲಾಖೆ ಅಳವಡಿಸಬೇಕಿದೆ. ಅದನ್ನು ಅವರು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅದು ಮುಗಿದರೆ ಕಾರಿಡಾರ್ ಸಂಪೂರ್ಣಗೊಳ್ಳುತ್ತದೆ’ ಎಂದು ಹೇಳಿದರು.</p>.<p>2013–14ರಲ್ಲಿ ಓಕಳಿಪುರ ಸಿಗ್ನಲ್ ಮುಕ್ತ ಕಾರಿಡಾರ್ ಯೋಜನೆ ಆರಂಭವಾಗಿತ್ತು. ₹337 ಕೋಟಿ ವೆಚ್ಚದ ಕಾಮಗಾರಿಯಲ್ಲಿ ಭೂಸ್ವಾಧೀನ ವೆಚ್ಚವೂ ಸೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಓಕಳಿಪುರ ಸಿಗ್ನಲ್ಮುಕ್ತ ಕಾರಿಡಾರ್ನ ಎರಡು ಮಾರ್ಗಗಳು (ಲೂಪ್) ಪೂರ್ಣಗೊಂಡಿದ್ದು, ಒಂದು ವಾರದಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಸಾಧ್ಯತೆ ಇದೆ.</p>.<p>ಮಲ್ಲೇಶ್ವರದಿಂದ ರೈಲು ನಿಲ್ದಾಣ ಹಾಗೂ ರಾಜಾಜಿನಗರದಿಂದ ರೈಲು ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಎರಡು ಮಾರ್ಗಗಳ ನಿರ್ಮಾಣವನ್ನು ಬಿಬಿಎಂಪಿ ಪೂರ್ಣಗೊಳಿಸಿದೆ ಎಂದು ಯೋಜನೆ ವಿಭಾಗದ ಮುಖ್ಯ ಎಂಜಿನಿಯರ್ ಲೋಕೇಶ್ ತಿಳಿಸಿದರು.</p>.<p>ಓಕಳಿಪುರ ಸಿಗ್ನಲ್ಮುಕ್ತ ಕಾರಿಡಾರ್ ಯೋಜನೆಯಲ್ಲಿ ಓಕಳಿಪುರದ ಜಂಕ್ಷನ್ನಲ್ಲಿ ಆರು ಪಥಗಳನ್ನು ನಿರ್ಮಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ರೈಲ್ವೆ ಇಲಾಖೆಯಿಂದ ಭೂ ಹಸ್ತಾಂತರ ಪ್ರಕ್ರಿಯೆ ನಿಧಾನವಾದ ಕಾರಣ, ಎರಡು ಮಾರ್ಗಗಳನ್ನು ಪೂರ್ಣಗೊಳಿಸುವುದು ವಿಳಂಬವಾಗಿತ್ತು. ಈಗ ಎಲ್ಲವೂ ಪೂರ್ಣಗೊಂಡಿದ್ದು, ಸದ್ಯದಲ್ಲಿಯೇ ಉದ್ಘಾಟಿಸಲಾಗುತ್ತದೆ ಎಂದರು.</p>.<p>‘ತುಮಕೂರು ಮಾರ್ಗದಡಿ ಪ್ರೀಕಾಸ್ಟ್ ಬಾಕ್ಸ್ ಅಳವಡಿಕೆ ಪೂರ್ಣವಾಗಿದೆ. ಚೆನ್ನೈ ರೈಲು ಮಾರ್ಗದಡಿ ಪ್ರೀಕಾಸ್ಟ್ ಬಾಕ್ಸ್ಗಳನ್ನು ರೈಲ್ವೆ ಇಲಾಖೆ ಅಳವಡಿಸಬೇಕಿದೆ. ಅದನ್ನು ಅವರು ಇನ್ನೆರಡು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅದು ಮುಗಿದರೆ ಕಾರಿಡಾರ್ ಸಂಪೂರ್ಣಗೊಳ್ಳುತ್ತದೆ’ ಎಂದು ಹೇಳಿದರು.</p>.<p>2013–14ರಲ್ಲಿ ಓಕಳಿಪುರ ಸಿಗ್ನಲ್ ಮುಕ್ತ ಕಾರಿಡಾರ್ ಯೋಜನೆ ಆರಂಭವಾಗಿತ್ತು. ₹337 ಕೋಟಿ ವೆಚ್ಚದ ಕಾಮಗಾರಿಯಲ್ಲಿ ಭೂಸ್ವಾಧೀನ ವೆಚ್ಚವೂ ಸೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>