<p><strong>ಬೆಂಗಳೂರು:</strong> ಬೆಂಗಳೂರು ಅರಮನೆ ಜಮೀನನ್ನು ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡ ಪ್ರಮಾಣಕ್ಕೆ ಅನುಗುಣವಾಗಿ ಮಾತ್ರ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) (ತಿದ್ದುಪಡಿ) ಮಸೂದೆ–2025ಕ್ಕೆ ವಿಧಾನಮಂಡಲದ ಉಭಯ ಸದನಗಳು ಶುಕ್ರವಾರ ಅಂಗೀಕಾರ ನೀಡಿದವು.</p>.<p>ಅರಮನೆಗೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಹಿಂದೆ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 1,217.41 ಚದರ ಮೀಟರ್ ಮಾತ್ರ ಬಳಕೆಯಾಗಿತ್ತು. ಆದರೆ, ಪೂರ್ಣ ವಿಸ್ತೀರ್ಣಕ್ಕೆ ಪರಿಹಾರ ನೀಡುವಂತೆ ರಾಜಮನೆತನದವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p>ಅರಮನೆಗೆ ಸೇರಿದ ಜಮೀನನ್ನು ಯಾವುದೇ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಳ್ಳುವ ಅಥವಾ ಬಳಸಿಕೊಳ್ಳದೇ ಇರುವ ಅಧಿಕಾರವನ್ನು ತಿದ್ದುಪಡಿಯು ರಾಜ್ಯ ಸರ್ಕಾರಕ್ಕೆ ನೀಡಲಿದೆ. ಅಲ್ಲದೇ, ಈ ಹಿಂದೆ ನೀಡಲಾದ ಯಾವುದೇ ಪರಿಹಾರದ ಮೊತ್ತವನ್ನು ಬಳಸಿಕೊಳ್ಳುವ ಜಮೀನಿಗೆ ನೀಡಬೇಕಾದ ಪರಿಹಾರದ ಮೊತ್ತಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಿದೆ.</p>.<p>ಬೆಂಗಳೂರು ಅರಮನೆ ಜಮೀನಿಗೆ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ನೀಡುವುದಕ್ಕೂ ಈ ಮಸೂದೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ಅರಮನೆ ಜಮೀನನ್ನು ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡ ಪ್ರಮಾಣಕ್ಕೆ ಅನುಗುಣವಾಗಿ ಮಾತ್ರ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಅಧಿಕಾರ ನೀಡುವ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) (ತಿದ್ದುಪಡಿ) ಮಸೂದೆ–2025ಕ್ಕೆ ವಿಧಾನಮಂಡಲದ ಉಭಯ ಸದನಗಳು ಶುಕ್ರವಾರ ಅಂಗೀಕಾರ ನೀಡಿದವು.</p>.<p>ಅರಮನೆಗೆ ಸೇರಿದ 15 ಎಕರೆ 17.5 ಗುಂಟೆ ಜಮೀನನ್ನು ಹಿಂದೆ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 1,217.41 ಚದರ ಮೀಟರ್ ಮಾತ್ರ ಬಳಕೆಯಾಗಿತ್ತು. ಆದರೆ, ಪೂರ್ಣ ವಿಸ್ತೀರ್ಣಕ್ಕೆ ಪರಿಹಾರ ನೀಡುವಂತೆ ರಾಜಮನೆತನದವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p>ಅರಮನೆಗೆ ಸೇರಿದ ಜಮೀನನ್ನು ಯಾವುದೇ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಳ್ಳುವ ಅಥವಾ ಬಳಸಿಕೊಳ್ಳದೇ ಇರುವ ಅಧಿಕಾರವನ್ನು ತಿದ್ದುಪಡಿಯು ರಾಜ್ಯ ಸರ್ಕಾರಕ್ಕೆ ನೀಡಲಿದೆ. ಅಲ್ಲದೇ, ಈ ಹಿಂದೆ ನೀಡಲಾದ ಯಾವುದೇ ಪರಿಹಾರದ ಮೊತ್ತವನ್ನು ಬಳಸಿಕೊಳ್ಳುವ ಜಮೀನಿಗೆ ನೀಡಬೇಕಾದ ಪರಿಹಾರದ ಮೊತ್ತಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಿದೆ.</p>.<p>ಬೆಂಗಳೂರು ಅರಮನೆ ಜಮೀನಿಗೆ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ನೀಡುವುದಕ್ಕೂ ಈ ಮಸೂದೆಯಲ್ಲಿ ನಿರ್ಬಂಧ ವಿಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>