<p><strong>ಬೆಂಗಳೂರು:</strong> ‘ದೀಪಾವಳಿ ಹಬ್ಬ ಸಮೀಪಿಸಿದ್ದು, ಪಟಾಕಿ ಮಾರಾಟಗಾರರು ಎಚ್ಚರಿಕೆ ವಹಿಸಬೇಕು. ಮಾರಾಟಗಾರರು ಮುಂಗಡವಾಗಿ ಪಟಾಕಿ ಸಂಗ್ರಹ ಮಾಡಿಕೊಳ್ಳಲು ಅವಕಾಶ ಇಲ್ಲ’ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಹೇಳಿದರು.</p>.<p>ನಗರದಲ್ಲಿ ನಡೆದ ತಾತ್ಕಾಲಿಕ ಪಟಾಕಿ ಅಂಗಡಿಗಳ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೇಡಿಕೆ ಹೆಚ್ಚಿದೆ ಎನ್ನುವ ಕಾರಣಕ್ಕೆ ಪಟಾಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡಿದ್ದರೆ, ಅಂತಹ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.</p>.<p>ನಗರದ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಎರಡು ವರ್ಷಗಳ ಹಿಂದೆ ಅತ್ತಿಬೆಲೆಯಲ್ಲಿ ಅವಘಡ ಸಂಭವಿಸಿತ್ತು. ಅಂತಹ ದುರಂತಗಳು ಆಗದಂತೆ ಕಟ್ಟೆಚರ ವಹಿಸಬೇಕು ಎಂದು ಹೇಳಿದರು.</p>.<p>‘ಹೆಚ್ಚಿನ ಪ್ರಮಾಣದಲ್ಲಿ ಪಟಾಕಿಯನ್ನು ದಾಸ್ತಾನು ಮಾಡಿಕೊಂಡರೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಅನಾಹುತಗಳಿಗೆ ಆಸ್ಪದ ಕೊಡಬಾರದು’ ಎಂದು ಹೇಳಿದರು.</p>.<p>‘ದೀಪಾವಳಿ ಹಬ್ಬಕ್ಕೆ ಐದು ದಿನ ಮುಂಚಿತವಾಗಿ ಪಟಾಕಿ ತಂದುಕೊಳ್ಳಬೇಕು. ಐದು ದಿನಗಳ ಒಳಗಾಗಿ ದಾಸ್ತಾನು ಖಾಲಿ ಮಾಡಬೇಕು. ಅ.18ರಿಂದ 22ರ ತನಕ ಪಟಾಕಿ ಮಾರಾಟ ಮಾಡುವುದಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.</p>.<p>‘ಗೋದಾಮಿನಲ್ಲಿ ಅನಧಿಕೃತವಾಗಿ ಪಟಾಕಿ ಸಂಗ್ರಹಣೆ ಮಾಡಿಕೊಂಡರೆ ಗಸ್ತು ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಸುರಕ್ಷತಾ ಕ್ರಮಗಳನ್ನು ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ’ ಎಂದು ಕಮಿಷನರ್ ಮಾಹಿತಿ ನೀಡಿದರು.</p>.<p>ಪಟಾಕಿ ಅಂಗಡಿಗಳನ್ನು ನಿರ್ಮಿಸಲು ಬಯಸುವ ಅರ್ಜಿದಾರರಿಗೆ ಪರವಾನಗಿ ನೀಡಲು ಲಾಟರಿ ವ್ಯವಸ್ಥೆ ಅನುಸರಿಸಲಾಗುತ್ತಿದೆ. ಲಾಟರಿಯಲ್ಲಿ ಗೆದ್ದವರಿಗೆ ಅಂಗಡಿ ತೆರೆಯಲು ಅನುಮತಿ ಸಿಗುತ್ತದೆ. 78 ಮೈದಾನಗಳಲ್ಲಿ 411 ಅಂಗಡಿಗಳಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೀಪಾವಳಿ ಹಬ್ಬ ಸಮೀಪಿಸಿದ್ದು, ಪಟಾಕಿ ಮಾರಾಟಗಾರರು ಎಚ್ಚರಿಕೆ ವಹಿಸಬೇಕು. ಮಾರಾಟಗಾರರು ಮುಂಗಡವಾಗಿ ಪಟಾಕಿ ಸಂಗ್ರಹ ಮಾಡಿಕೊಳ್ಳಲು ಅವಕಾಶ ಇಲ್ಲ’ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಹೇಳಿದರು.</p>.<p>ನಗರದಲ್ಲಿ ನಡೆದ ತಾತ್ಕಾಲಿಕ ಪಟಾಕಿ ಅಂಗಡಿಗಳ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಬೇಡಿಕೆ ಹೆಚ್ಚಿದೆ ಎನ್ನುವ ಕಾರಣಕ್ಕೆ ಪಟಾಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡಿದ್ದರೆ, ಅಂತಹ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.</p>.<p>ನಗರದ ಯಾವುದೇ ಭಾಗದಲ್ಲಿ ಪಟಾಕಿ ದುರಂತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಎರಡು ವರ್ಷಗಳ ಹಿಂದೆ ಅತ್ತಿಬೆಲೆಯಲ್ಲಿ ಅವಘಡ ಸಂಭವಿಸಿತ್ತು. ಅಂತಹ ದುರಂತಗಳು ಆಗದಂತೆ ಕಟ್ಟೆಚರ ವಹಿಸಬೇಕು ಎಂದು ಹೇಳಿದರು.</p>.<p>‘ಹೆಚ್ಚಿನ ಪ್ರಮಾಣದಲ್ಲಿ ಪಟಾಕಿಯನ್ನು ದಾಸ್ತಾನು ಮಾಡಿಕೊಂಡರೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಅನಾಹುತಗಳಿಗೆ ಆಸ್ಪದ ಕೊಡಬಾರದು’ ಎಂದು ಹೇಳಿದರು.</p>.<p>‘ದೀಪಾವಳಿ ಹಬ್ಬಕ್ಕೆ ಐದು ದಿನ ಮುಂಚಿತವಾಗಿ ಪಟಾಕಿ ತಂದುಕೊಳ್ಳಬೇಕು. ಐದು ದಿನಗಳ ಒಳಗಾಗಿ ದಾಸ್ತಾನು ಖಾಲಿ ಮಾಡಬೇಕು. ಅ.18ರಿಂದ 22ರ ತನಕ ಪಟಾಕಿ ಮಾರಾಟ ಮಾಡುವುದಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.</p>.<p>‘ಗೋದಾಮಿನಲ್ಲಿ ಅನಧಿಕೃತವಾಗಿ ಪಟಾಕಿ ಸಂಗ್ರಹಣೆ ಮಾಡಿಕೊಂಡರೆ ಗಸ್ತು ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡುವ ಮುನ್ನ ಸುರಕ್ಷತಾ ಕ್ರಮಗಳನ್ನು ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ’ ಎಂದು ಕಮಿಷನರ್ ಮಾಹಿತಿ ನೀಡಿದರು.</p>.<p>ಪಟಾಕಿ ಅಂಗಡಿಗಳನ್ನು ನಿರ್ಮಿಸಲು ಬಯಸುವ ಅರ್ಜಿದಾರರಿಗೆ ಪರವಾನಗಿ ನೀಡಲು ಲಾಟರಿ ವ್ಯವಸ್ಥೆ ಅನುಸರಿಸಲಾಗುತ್ತಿದೆ. ಲಾಟರಿಯಲ್ಲಿ ಗೆದ್ದವರಿಗೆ ಅಂಗಡಿ ತೆರೆಯಲು ಅನುಮತಿ ಸಿಗುತ್ತದೆ. 78 ಮೈದಾನಗಳಲ್ಲಿ 411 ಅಂಗಡಿಗಳಿಗೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>