<p><strong>ಬೆಂಗಳೂರು:</strong> ನಗರದಲ್ಲಿ ಸೆ.3ರಂದು ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು, ವಿಧಿಸಲಾಗಿರುವ ದಂಡದಲ್ಲಿ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ತ್ಯಾಜ್ಯ ವಿಲೇವಾರಿಗೆ 35 ಟ್ರ್ಯಾಕ್ಟರ್ಗಳ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ತಿಳಿಸಿದರು.</p>.<p>ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಬರುವ ದಂಡವನ್ನು ವಿಧಾನಸಭೆ ಕ್ಷೇತ್ರಗಳಿಗೆ ಬಾಡಿಗೆ ಮೂಲಕ ಟ್ರ್ಯಾಕ್ಟರ್ಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ ಟೆಂಡರ್ ಕರೆಯಲಾಗುತ್ತಿದ್ದು, ಅಕ್ಟೋಬರ್ 3ರಿಂದ ಟ್ರ್ಯಾಕ್ಟರ್ಗಳು ಬಳಕೆಗೆ ಲಭ್ಯವಾಗಲಿವೆ ಎಂದು ಹೇಳಿದರು.</p>.<p>ವಿಧಾನಸಭೆ ಕ್ಷೇತ್ರಗಳಲ್ಲಿ ಕಟ್ಟಡ ತ್ಯಾಜ್ಯ, ಬ್ಲ್ಯಾಕ್ ಸ್ಪಾಟ್ಗಳಲ್ಲಿನ ಕಸ ವಿಲೇವಾರಿ, ಮರಗಳ ಕೊಂಬೆಗಳನ್ನು ಸಾಗಿಸುವುದು ಸೇರಿದಂತೆ ಸ್ವಚ್ಛತೆಗೆ ಟ್ರ್ಯಾಕ್ಟರ್ಗಳ ಕೊರತೆ ಇದೆ. ಹೀಗಾಗಿ, ಪ್ಲಾಸ್ಟಿಕ್ ಬಳಕೆಗೆ ವಿಧಿಸಲಾಗುತ್ತಿರುವ ದಂಡವನ್ನು ಟ್ರ್ಯಾಕ್ಟರ್ಗಳ ಬಾಡಿಗೆಗೆ ಉಪಯೋಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>25 ವಿಧಾನಸಭೆ ಕ್ಷೇತ್ರಗಳಿಗೆ ತಲಾ ಒಂದು ಟ್ರ್ಯಾಕ್ಟರ್ ಅನ್ನು ನೀಡಲಾಗುತ್ತದೆ. ಹೆಚ್ಚಿನ ವ್ಯಾಪ್ತಿ ಹೊಂದಿರುವ ಮಹದೇವಪುರಕ್ಕೆ ಆರು ಹಾಗೂ ಕೆ.ಆರ್.ಪುರ ವಿಧಾನಸಭೆ ಕ್ಷೇತ್ರಕ್ಕೆ ನಾಲ್ಕು ಟ್ರ್ಯಾಕ್ಟರ್ಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ನಗರವನ್ನು ಏಕಬಳಕೆ ಪ್ಲಾಸ್ಟಿಕ್ಮುಕ್ತ ನಗರವನ್ನಾಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಸಿಇಒ ಕರೀಗೌಡ ತಿಳಿಸಿದರು.</p>.<p>ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಫರ್ಲ್ ಪಲಿಫಿಲಂ ಮ್ಯಾನುಫ್ಯಾಕ್ಚರರ್ ದಾಸ್ತಾನು ಘಟಕದ ಮೇಲೆ ಶುಕ್ರವಾರ ದಾಳಿ ನಡೆಸಿ, 5 ಟನ್ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು ₹10 ಲಕ್ಷ ದಂಡ ವಿಧಿಸಲಾಗಿದೆ. ಮತ್ತೆ ಏಕಬಳಕೆ ಪ್ಲಾಸ್ಟಿಕ್ ಬಳಸದಂತೆ ಘಟಕದ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕರೀಗೌಡ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಸೆ.3ರಂದು ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು, ವಿಧಿಸಲಾಗಿರುವ ದಂಡದಲ್ಲಿ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ತ್ಯಾಜ್ಯ ವಿಲೇವಾರಿಗೆ 35 ಟ್ರ್ಯಾಕ್ಟರ್ಗಳ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ತಿಳಿಸಿದರು.</p>.<p>ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಬರುವ ದಂಡವನ್ನು ವಿಧಾನಸಭೆ ಕ್ಷೇತ್ರಗಳಿಗೆ ಬಾಡಿಗೆ ಮೂಲಕ ಟ್ರ್ಯಾಕ್ಟರ್ಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ ಟೆಂಡರ್ ಕರೆಯಲಾಗುತ್ತಿದ್ದು, ಅಕ್ಟೋಬರ್ 3ರಿಂದ ಟ್ರ್ಯಾಕ್ಟರ್ಗಳು ಬಳಕೆಗೆ ಲಭ್ಯವಾಗಲಿವೆ ಎಂದು ಹೇಳಿದರು.</p>.<p>ವಿಧಾನಸಭೆ ಕ್ಷೇತ್ರಗಳಲ್ಲಿ ಕಟ್ಟಡ ತ್ಯಾಜ್ಯ, ಬ್ಲ್ಯಾಕ್ ಸ್ಪಾಟ್ಗಳಲ್ಲಿನ ಕಸ ವಿಲೇವಾರಿ, ಮರಗಳ ಕೊಂಬೆಗಳನ್ನು ಸಾಗಿಸುವುದು ಸೇರಿದಂತೆ ಸ್ವಚ್ಛತೆಗೆ ಟ್ರ್ಯಾಕ್ಟರ್ಗಳ ಕೊರತೆ ಇದೆ. ಹೀಗಾಗಿ, ಪ್ಲಾಸ್ಟಿಕ್ ಬಳಕೆಗೆ ವಿಧಿಸಲಾಗುತ್ತಿರುವ ದಂಡವನ್ನು ಟ್ರ್ಯಾಕ್ಟರ್ಗಳ ಬಾಡಿಗೆಗೆ ಉಪಯೋಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.</p>.<p>25 ವಿಧಾನಸಭೆ ಕ್ಷೇತ್ರಗಳಿಗೆ ತಲಾ ಒಂದು ಟ್ರ್ಯಾಕ್ಟರ್ ಅನ್ನು ನೀಡಲಾಗುತ್ತದೆ. ಹೆಚ್ಚಿನ ವ್ಯಾಪ್ತಿ ಹೊಂದಿರುವ ಮಹದೇವಪುರಕ್ಕೆ ಆರು ಹಾಗೂ ಕೆ.ಆರ್.ಪುರ ವಿಧಾನಸಭೆ ಕ್ಷೇತ್ರಕ್ಕೆ ನಾಲ್ಕು ಟ್ರ್ಯಾಕ್ಟರ್ಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸಲಾಗುತ್ತಿದೆ ಎಂದು ಅವರು ತಿಳಿಸಿದರು.</p>.<p>ನಗರವನ್ನು ಏಕಬಳಕೆ ಪ್ಲಾಸ್ಟಿಕ್ಮುಕ್ತ ನಗರವನ್ನಾಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಸಿಇಒ ಕರೀಗೌಡ ತಿಳಿಸಿದರು.</p>.<p>ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಫರ್ಲ್ ಪಲಿಫಿಲಂ ಮ್ಯಾನುಫ್ಯಾಕ್ಚರರ್ ದಾಸ್ತಾನು ಘಟಕದ ಮೇಲೆ ಶುಕ್ರವಾರ ದಾಳಿ ನಡೆಸಿ, 5 ಟನ್ ಏಕಬಳಕೆ ಪ್ಲಾಸ್ಟಿಕ್ ವಶಪಡಿಸಿಕೊಂಡು ₹10 ಲಕ್ಷ ದಂಡ ವಿಧಿಸಲಾಗಿದೆ. ಮತ್ತೆ ಏಕಬಳಕೆ ಪ್ಲಾಸ್ಟಿಕ್ ಬಳಸದಂತೆ ಘಟಕದ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಕರೀಗೌಡ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>