<p><strong>ಬೆಂಗಳೂರು:</strong> ‘ಇಡೀ ಜಗತ್ತಿಗೆ ಮಾಹಿತಿತಂತ್ರಜ್ಞಾನ ಸೇವೆ ಒದಗಿಸುವುದಕ್ಕೆ ಮಾತ್ರವೇ ಬೆಂಗಳೂರು ಹೆಸರುವಾಸಿಯಲ್ಲ. ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನೂ ಈ ನಗರ ಪೊರೆಯುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.</p>.<p>ನಗರದ ಕನಕಪುರ ರಸ್ತೆಯಲ್ಲಿರುವಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ಆಯೋಜಿಸಿದ್ದ 45ನೇ ವಾರ್ಷಿಕೋತ್ಸವದಲ್ಲಿ ನೂತನ ಧ್ಯಾನ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಧ್ಯಾತ್ಮ ಅಂದರೆ ಕೇವಲ ಧ್ಯಾನವಲ್ಲ. ಸಮಾಜ ಸೇವೆಯನ್ನು ಒಳಗೊಂಡಾಗಷ್ಟೇ ಅದು ಪರಿಪೂರ್ಣವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಸೇವೆ ಎನ್ನುವುದು ಪರಮ ಧರ್ಮ. ಪರೋಪಕಾರವೇ ಪುಣ್ಯ, ಪರಪೀಡನೆಯೇ ಪಾಪ’ ಎಂದರು.</p>.<p>‘ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಇಲ್ಲಿ ಸ್ಥಾಪಿಸಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು 180ಕ್ಕೂ ಹೆಚ್ಚು ದೇಶಗಳಲ್ಲಿ ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಪಸರಿಸುತ್ತಿದೆ. 45 ವರ್ಷಗಳ ಹಿಂದೆ ಬಿತ್ತಿದ ಬೀಜವು, ಇಂದು ವಿಶಾಲವಾದ ಹೆಮ್ಮರವಾಗಿ ಬೆಳೆದಿದೆ. ಈ ವೃಕ್ಷದ ಸಾವಿರಾರು ಶಾಖೆಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರ ಬದುಕನ್ನು ಸುಂದರಗೊಳಿಸುತ್ತಿವೆ’ ಎಂದು ಹೇಳಿದರು.</p>.<p>ಶ್ರೀ ಶ್ರೀ ರವಿಶಂಕರ್ ಗುರೂಜಿ, ‘ದೇಶ–ವಿದೇಶಗಳಲ್ಲಿ ಶಾಂತಿ ನೆಲಸುವ ಸಲುವಾಗಿ ಪ್ರಧಾನಿ ಮೋದಿ ಅವರು ಮಹತ್ವದ ಹೆಜ್ಜೆಗಳನ್ನು ಇರಿಸಿದ್ದಾರೆ. ಅವರು ಭಾರತವನ್ನು ಹೊಸ ಎತ್ತರಕ್ಕೆ ಒಯ್ದಿದ್ದು, ಈ ಬಗ್ಗೆ ಭಾರತಾಂಬೆಗೆ ಮತ್ತು ಭಾರತೀಯರಿಗೆ ಹೆಮ್ಮೆಯಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-51-1455445436</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಇಡೀ ಜಗತ್ತಿಗೆ ಮಾಹಿತಿತಂತ್ರಜ್ಞಾನ ಸೇವೆ ಒದಗಿಸುವುದಕ್ಕೆ ಮಾತ್ರವೇ ಬೆಂಗಳೂರು ಹೆಸರುವಾಸಿಯಲ್ಲ. ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನೂ ಈ ನಗರ ಪೊರೆಯುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟರು.</p>.<p>ನಗರದ ಕನಕಪುರ ರಸ್ತೆಯಲ್ಲಿರುವಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಭಾನುವಾರ ಆಯೋಜಿಸಿದ್ದ 45ನೇ ವಾರ್ಷಿಕೋತ್ಸವದಲ್ಲಿ ನೂತನ ಧ್ಯಾನ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಧ್ಯಾತ್ಮ ಅಂದರೆ ಕೇವಲ ಧ್ಯಾನವಲ್ಲ. ಸಮಾಜ ಸೇವೆಯನ್ನು ಒಳಗೊಂಡಾಗಷ್ಟೇ ಅದು ಪರಿಪೂರ್ಣವಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಸೇವೆ ಎನ್ನುವುದು ಪರಮ ಧರ್ಮ. ಪರೋಪಕಾರವೇ ಪುಣ್ಯ, ಪರಪೀಡನೆಯೇ ಪಾಪ’ ಎಂದರು.</p>.<p>‘ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಇಲ್ಲಿ ಸ್ಥಾಪಿಸಿದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು 180ಕ್ಕೂ ಹೆಚ್ಚು ದೇಶಗಳಲ್ಲಿ ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಪಸರಿಸುತ್ತಿದೆ. 45 ವರ್ಷಗಳ ಹಿಂದೆ ಬಿತ್ತಿದ ಬೀಜವು, ಇಂದು ವಿಶಾಲವಾದ ಹೆಮ್ಮರವಾಗಿ ಬೆಳೆದಿದೆ. ಈ ವೃಕ್ಷದ ಸಾವಿರಾರು ಶಾಖೆಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರ ಬದುಕನ್ನು ಸುಂದರಗೊಳಿಸುತ್ತಿವೆ’ ಎಂದು ಹೇಳಿದರು.</p>.<p>ಶ್ರೀ ಶ್ರೀ ರವಿಶಂಕರ್ ಗುರೂಜಿ, ‘ದೇಶ–ವಿದೇಶಗಳಲ್ಲಿ ಶಾಂತಿ ನೆಲಸುವ ಸಲುವಾಗಿ ಪ್ರಧಾನಿ ಮೋದಿ ಅವರು ಮಹತ್ವದ ಹೆಜ್ಜೆಗಳನ್ನು ಇರಿಸಿದ್ದಾರೆ. ಅವರು ಭಾರತವನ್ನು ಹೊಸ ಎತ್ತರಕ್ಕೆ ಒಯ್ದಿದ್ದು, ಈ ಬಗ್ಗೆ ಭಾರತಾಂಬೆಗೆ ಮತ್ತು ಭಾರತೀಯರಿಗೆ ಹೆಮ್ಮೆಯಿದೆ’ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-51-1455445436</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>