<p><strong>ಬೆಂಗಳೂರು:</strong> 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.</p>.<p>ಮಳವಳ್ಳಿಯ ಸಿದ್ದು ಅಲಿಯಾಸ್ ನಾಗರಾಜ್ ಬಂಧಿತ.</p>.<p>ಆರೋಪಿಯಿಂದ ₹19.5 ಲಕ್ಷ ನಗದು ಮತ್ತು 711 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಠಾಣಾ ವ್ಯಾಪ್ತಿಯ ಅಂಚೆಪಾಳ್ಯದ ಪ್ರಕೃತಿ ಲೇಔಟ್ನ ಮನೆಯೊಂದರಲ್ಲಿ ಆರೋಪಿ ನಾಗರಾಜ್ ಅವರು 248 ಗ್ರಾಂ ಚಿನ್ನದ ಆಭರಣ ಕಳ್ಳತನ ಮಾಡಿದ್ದರು. ಮನೆಯ ಮಾಲೀಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ನಾಗರಾಜ್ ಎಂಟು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದರು. ಈತನ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.</p>.<p>ಚಿನ್ನಾಭರಣ ಕಳ್ಳತನ ಮಾಡಿದ ಬಳಿಕ ಮಾದಪ್ಪನ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ತೆರಳಿದ್ದರು. ಅಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p><strong>ಮೂವರು ಆರೋಪಿಗಳ ಸೆರೆ</strong></p><p><strong> ಬೆಂಗಳೂರು:</strong> ಕಾಶಿಯಾತ್ರೆಗೆ ಹೋಗಿದ್ದವರ ಮನೆ ದೋಚಿದ್ದ ಆರೋಪಿಗಳನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಪಾಂಡ್ಯರಾಜು ಪೃಥ್ವಿ ಮತ್ತು ಮಂಜುನಾಥ್ ಬಂಧಿತರು. ಆರೋಪಿಗಳಿಂದ ₹44 ಲಕ್ಷ ಮೌಲ್ಯದ 3 ಕೆ.ಜಿ ಬೆಳ್ಳಿ 220 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p><p> ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಬಂಧಿತರ ಪೈಕಿ ಪಾಂಡ್ಯರಾಜು ಅವರ ಮೇಲೆ ಅಮೃತಹಳ್ಳಿ ವೈಟ್ಫೀಲ್ಡ್ ಕಲಾಸಿಪಾಳ್ಯ ಬೆಳ್ಳಂದೂರಿನಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 15 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನನ್ನು ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.</p>.<p>ಮಳವಳ್ಳಿಯ ಸಿದ್ದು ಅಲಿಯಾಸ್ ನಾಗರಾಜ್ ಬಂಧಿತ.</p>.<p>ಆರೋಪಿಯಿಂದ ₹19.5 ಲಕ್ಷ ನಗದು ಮತ್ತು 711 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಠಾಣಾ ವ್ಯಾಪ್ತಿಯ ಅಂಚೆಪಾಳ್ಯದ ಪ್ರಕೃತಿ ಲೇಔಟ್ನ ಮನೆಯೊಂದರಲ್ಲಿ ಆರೋಪಿ ನಾಗರಾಜ್ ಅವರು 248 ಗ್ರಾಂ ಚಿನ್ನದ ಆಭರಣ ಕಳ್ಳತನ ಮಾಡಿದ್ದರು. ಮನೆಯ ಮಾಲೀಕರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ನಾಗರಾಜ್ ಎಂಟು ವರ್ಷಗಳಿಂದ ಕಳ್ಳತನ ಮಾಡುತ್ತಿದ್ದರು. ಈತನ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.</p>.<p>ಚಿನ್ನಾಭರಣ ಕಳ್ಳತನ ಮಾಡಿದ ಬಳಿಕ ಮಾದಪ್ಪನ ಬೆಟ್ಟಕ್ಕೆ ದೇವರ ದರ್ಶನ ಪಡೆಯಲು ತೆರಳಿದ್ದರು. ಅಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p><strong>ಮೂವರು ಆರೋಪಿಗಳ ಸೆರೆ</strong></p><p><strong> ಬೆಂಗಳೂರು:</strong> ಕಾಶಿಯಾತ್ರೆಗೆ ಹೋಗಿದ್ದವರ ಮನೆ ದೋಚಿದ್ದ ಆರೋಪಿಗಳನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಪಾಂಡ್ಯರಾಜು ಪೃಥ್ವಿ ಮತ್ತು ಮಂಜುನಾಥ್ ಬಂಧಿತರು. ಆರೋಪಿಗಳಿಂದ ₹44 ಲಕ್ಷ ಮೌಲ್ಯದ 3 ಕೆ.ಜಿ ಬೆಳ್ಳಿ 220 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p><p> ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು. ಬಂಧಿತರ ಪೈಕಿ ಪಾಂಡ್ಯರಾಜು ಅವರ ಮೇಲೆ ಅಮೃತಹಳ್ಳಿ ವೈಟ್ಫೀಲ್ಡ್ ಕಲಾಸಿಪಾಳ್ಯ ಬೆಳ್ಳಂದೂರಿನಲ್ಲಿ ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ಹೇಳಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>