ಮಾನವ ಕಳ್ಳ ಸಾಗಣೆ: ನೇಪಾಳದ ಪ್ರಜೆಗಳನ್ನು ಭಾರತೀಯ ಪ್ರಜೆಗಳೆಂದು ನಕಲಿ ದಾಖಲಾತಿ ಸೃಷ್ಟಿಸಿಕೊಂಡು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಮಲೇಷ್ಯಾ, ಕ್ವಾಲಾಲಂಪುರಕ್ಕೆ ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲವನ್ನು ಭೇದಿಸಿ 9 ಮಂದಿಯನ್ನು ಬಂಧಿಸಲಾಗಿದೆ. ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 60 ಮಂದಿ ಬಾಂಗ್ಲಾ ವಲಸಿಗರನ್ನು ಪತ್ತೆ ಹಚ್ಚಿದ್ದು, ಅವರನ್ನು ಸ್ವದೇಶಕ್ಕೆ ಕಳಿಸುವ ಕಾರ್ಯ ಪ್ರಗತಿಯಲ್ಲಿದೆ. ನಗರದಲ್ಲಿ ನಿಯಮ ಉಲ್ಲಂಘಿಸಿ ನಡೆಸುತ್ತಿದ್ದ ಡ್ಯಾನ್ಸ್ ಬಾರ್, ಡಿಸ್ಕೋಥೆಕ್, ವೇಶ್ಯಾವಾಟಿಕೆ ಅಡ್ಡೆಗಳ ಮೇಲೆಯೂ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 65 ಮಂದಿಯ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಕಮಿಷನರ್ ವಿವರಿಸಿದರು.