<figcaption>""</figcaption>.<p><strong>ಬೆಂಗಳೂರು:</strong> ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಉಂಟಾದ ಗಲಭೆ ತಡರಾತ್ರಿ 2ರ ಸುಮಾರಿಗೆ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ.</p>.<p>ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.<br /><br /><strong>ಪರಿಸ್ಥಿತಿ ನಿಯಂತ್ರಣಕ್ಕೆ: </strong>ಸದ್ಯಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್ ಪಂಥ್ ಹೇಳಿದ್ದಾರೆ .</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು ಹಲವರು ಗಾಯಗೊಂಡಿದ್ದಾರೆ. ಈಗ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ’ ಎಂದು ತಿಳಿಸಿದ್ದಾರೆ.</p>.<p>ಉದ್ರಿಕ್ತರು ಪೊಲೀಸರ ಮೇಲೆ ಹಲ್ಲೆ ಎಸಗಿದ್ದು, ಕಲ್ಲು ತೂರಾಟದಿಂದಾಗಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡೇಟಿನಿಂದ ಒಬ್ಬ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಗಾಯಾಳುಗಳ ಪರಿಸ್ಥಿತಿ ಬೆಳಿಗ್ಗೆ ಗೊತ್ತಾಗಲಿದೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/home-minister-basavaraj-bommai-speech-about-bengaluru-kg-halli-violence-752718.html" target="_blank">ಪುಂಡಾಟಿಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ: ಬೊಮ್ಮಾಯಿ</a></strong></p>.<p><strong>ಗಲಭೆ: 30 ಮಂದಿಯನ್ನು ಬಂಧಿಸಿದ ಸಿಸಿಬಿ</strong><br />ಬೆಂಗಳೂರು; ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ 30 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಗಲಭೆ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಸಿಸಿಬಿ ವಹಿಸಲಾಗಿದೆ. ಸಿಸಿಬಿಯ ವಿಶೇಷ ತಂಡಗಳು, ಮಂಗಳವಾರ ರಾತ್ರಿಯೀಡಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.</p>.<p>'ಸದ್ಯಕ್ಕೆ 30 ಮಂದಿಯನ್ನು ಬಂಧಿಸಲಾಗಿದೆ. ಬಂಧನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮತ್ತಷ್ಟು ಮಂದಿಯನ್ನು ಬಂಧಿಸಬೇಕಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p><strong>ದೇವಸ್ಥಾನಕ್ಕೆ ಕಾವಲಾದ ಯುವಕರು<br />ಬೆಂಗಳೂರು: </strong>ಡಿ.ಜೆ.ಹಳ್ಳಿ, ಕಾವಲ್ ಭೈರಸಂದ್ರದಲ್ಲಿ ಗಲಭೆ ನಡೆಯುತ್ತಿರುವಾಗಲೇ ಕೆಲ ಯುವಕರು, ದೇವಸ್ಥಾನಕ್ಕೆ ಕಾವಲಾಗಿ ನಿಂತು ಆ ಸ್ಥಳದಲ್ಲಿ ಯಾವುದೇ ಗಲಾಟೆ ಆಗದಂತೆ ನೋಡಿಕೊಂಡರು. ಉದ್ರಿಕ್ತರು ಗುಂಪು ಗುಂಪಾಗಿ ಸೇರುತ್ತ ಗಲಾಟೆ ಮಾಡುತ್ತಿದ್ದರು.</p>.<p>ರಸ್ತೆಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದರು. ಇದೇ ಸಂದರ್ಭದಲ್ಲಿ ಕೆಲ ಯುವಕರು, ದೇವಸ್ಥಾನದ ಹೊರಭಾಗದಲ್ಲಿ ನಿಂತು ಮಾನವ ಸರಪಳಿ ನಿರ್ಮಿಸಿ ಕಾವಲಾದರು. ದೇವಸ್ಥಾನ ಬಳಿ ಬಂದ ಕೆಲ ಕಿಡಿಗೇಡಿಗಳನ್ನು ಬೆದರಿಸಿ ಸ್ಥಳದಿಂದ ವಾಪಸು ಕಳುಹಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/violence-breaks-out-in-bengaluru-congress-mla-house-attacked-over-derogatory-post-752715.html" target="_blank">ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ; ಪೊಲೀಸರಿಂದ ಗಾಳಿಯಲ್ಲಿ ಗುಂಡು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು:</strong> ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಉಂಟಾದ ಗಲಭೆ ತಡರಾತ್ರಿ 2ರ ಸುಮಾರಿಗೆ ನಿಯಂತ್ರಣಕ್ಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕರ್ಫ್ಯೂ ಸಹ ಜಾರಿ ಮಾಡಲಾಗಿದೆ.</p>.<p>ಈ ಸಂಬಂಧ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಗುಂಪು ಸೇರಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.<br /><br /><strong>ಪರಿಸ್ಥಿತಿ ನಿಯಂತ್ರಣಕ್ಕೆ: </strong>ಸದ್ಯಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಗಲಭೆ ಕೋರರನ್ನು ಬಂಧಿಸಲಾಗುತ್ತಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಕಮಲ್ ಪಂಥ್ ಹೇಳಿದ್ದಾರೆ .</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಗಲಭೆ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು ಹಲವರು ಗಾಯಗೊಂಡಿದ್ದಾರೆ. ಈಗ ಸ್ಥಿತಿ ನಿಯಂತ್ರಣಕ್ಕೆ ಬಂದಿದೆ’ ಎಂದು ತಿಳಿಸಿದ್ದಾರೆ.</p>.<p>ಉದ್ರಿಕ್ತರು ಪೊಲೀಸರ ಮೇಲೆ ಹಲ್ಲೆ ಎಸಗಿದ್ದು, ಕಲ್ಲು ತೂರಾಟದಿಂದಾಗಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡೇಟಿನಿಂದ ಒಬ್ಬ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಗಾಯಾಳುಗಳ ಪರಿಸ್ಥಿತಿ ಬೆಳಿಗ್ಗೆ ಗೊತ್ತಾಗಲಿದೆ ಎಂದು ಹೇಳಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/home-minister-basavaraj-bommai-speech-about-bengaluru-kg-halli-violence-752718.html" target="_blank">ಪುಂಡಾಟಿಕೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ: ಬೊಮ್ಮಾಯಿ</a></strong></p>.<p><strong>ಗಲಭೆ: 30 ಮಂದಿಯನ್ನು ಬಂಧಿಸಿದ ಸಿಸಿಬಿ</strong><br />ಬೆಂಗಳೂರು; ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ 30 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.</p>.<p>ಗಲಭೆ ಪ್ರಕರಣದ ತನಿಖೆ ಜವಾಬ್ದಾರಿಯನ್ನು ಸಿಸಿಬಿ ವಹಿಸಲಾಗಿದೆ. ಸಿಸಿಬಿಯ ವಿಶೇಷ ತಂಡಗಳು, ಮಂಗಳವಾರ ರಾತ್ರಿಯೀಡಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.</p>.<p>'ಸದ್ಯಕ್ಕೆ 30 ಮಂದಿಯನ್ನು ಬಂಧಿಸಲಾಗಿದೆ. ಬಂಧನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮತ್ತಷ್ಟು ಮಂದಿಯನ್ನು ಬಂಧಿಸಬೇಕಿದೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.</p>.<p><strong>ದೇವಸ್ಥಾನಕ್ಕೆ ಕಾವಲಾದ ಯುವಕರು<br />ಬೆಂಗಳೂರು: </strong>ಡಿ.ಜೆ.ಹಳ್ಳಿ, ಕಾವಲ್ ಭೈರಸಂದ್ರದಲ್ಲಿ ಗಲಭೆ ನಡೆಯುತ್ತಿರುವಾಗಲೇ ಕೆಲ ಯುವಕರು, ದೇವಸ್ಥಾನಕ್ಕೆ ಕಾವಲಾಗಿ ನಿಂತು ಆ ಸ್ಥಳದಲ್ಲಿ ಯಾವುದೇ ಗಲಾಟೆ ಆಗದಂತೆ ನೋಡಿಕೊಂಡರು. ಉದ್ರಿಕ್ತರು ಗುಂಪು ಗುಂಪಾಗಿ ಸೇರುತ್ತ ಗಲಾಟೆ ಮಾಡುತ್ತಿದ್ದರು.</p>.<p>ರಸ್ತೆಯಲ್ಲಿದ್ದ ವಾಹನಗಳಿಗೆ ಬೆಂಕಿ ಹಚ್ಚುತ್ತಿದ್ದರು. ಇದೇ ಸಂದರ್ಭದಲ್ಲಿ ಕೆಲ ಯುವಕರು, ದೇವಸ್ಥಾನದ ಹೊರಭಾಗದಲ್ಲಿ ನಿಂತು ಮಾನವ ಸರಪಳಿ ನಿರ್ಮಿಸಿ ಕಾವಲಾದರು. ದೇವಸ್ಥಾನ ಬಳಿ ಬಂದ ಕೆಲ ಕಿಡಿಗೇಡಿಗಳನ್ನು ಬೆದರಿಸಿ ಸ್ಥಳದಿಂದ ವಾಪಸು ಕಳುಹಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/bengaluru-city/violence-breaks-out-in-bengaluru-congress-mla-house-attacked-over-derogatory-post-752715.html" target="_blank">ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ; ಪೊಲೀಸರಿಂದ ಗಾಳಿಯಲ್ಲಿ ಗುಂಡು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>