<p><strong>ಬೆಂಗಳೂರು:</strong> ನಿಗದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ದಾಸ್ತಾನು ಮಾಡಿಕೊಂಡಿದ್ದ ಮಳಿಗೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಮಳಿಗೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.</p><p>ಕಾಟನ್ಪೇಟೆ, ಚಿಕ್ಕಪೇಟೆ, ಕೆಆರ್ ಮಾರುಕಟ್ಟೆ ಹಾಗೂ ಹೊಸೂರು ಭಾಗದಲ್ಲಿ ಪೊಲೀಸರು ಸೋಮವಾರ ಮಧ್ಯಾಹ್ನ ಕಾರ್ಯಾಚರಣೆ ನಡೆಸಿದರು. ಈ ವೇಳೆ ಪರವಾನಗಿ ಪಡೆದ ಪ್ರಮಾಣಕ್ಕಿಂತಲೂ ಹೆಚ್ಚಿನ ದಾಸ್ತಾನು ಮಾಡಿಕೊಂಡಿರುವುದು ಕಂಡುಬಂತು. ಹೆಚ್ಚುವರಿ ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು ಎಂದು ಗೊತ್ತಾಗಿದೆ.</p><p>ಹಸಿರು ಪಟಾಕಿ ಹೆಸರಿನಲ್ಲಿ ಸಾಂಪ್ರದಾಯಿಕ ಪಟಾಕಿಗಳ ಮಾರಾಟ ಮಾಡುತ್ತಿರುವುದು, ಪರವಾನಗಿ ಪಡೆಯದವರೂ ಪಟಾಕಿ ಮಾರಾಟ ನಡೆಸುತ್ತಿರುವುದು ಕಂಡುಬಂತು. ಅಂತಹವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಬೇಡಿಕೆ ಹೆಚ್ಚಿದೆ ಎನ್ನುವ ಕಾರಣಕ್ಕೆ ಪಟಾಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡಿದ್ದರೆ, ಅಂತಹ ಮಾಲೀಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ದೀಪಾವಳಿ ಹಬ್ಬಕ್ಕೂ ಮುನ್ನ ನಡೆದ ಸಭೆಯಲ್ಲಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದರು.</p><p>‘ಮಂಗಳವಾರ ಹಾಗೂ ಬುಧವಾರ ಸಹ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿಗದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಪಟಾಕಿ ದಾಸ್ತಾನು ಮಾಡಿಕೊಂಡಿದ್ದ ಮಳಿಗೆಗಳ ಮೇಲೆ ಪೊಲೀಸರು ದಾಳಿ ನಡೆಸಿ, ಮಳಿಗೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.</p><p>ಕಾಟನ್ಪೇಟೆ, ಚಿಕ್ಕಪೇಟೆ, ಕೆಆರ್ ಮಾರುಕಟ್ಟೆ ಹಾಗೂ ಹೊಸೂರು ಭಾಗದಲ್ಲಿ ಪೊಲೀಸರು ಸೋಮವಾರ ಮಧ್ಯಾಹ್ನ ಕಾರ್ಯಾಚರಣೆ ನಡೆಸಿದರು. ಈ ವೇಳೆ ಪರವಾನಗಿ ಪಡೆದ ಪ್ರಮಾಣಕ್ಕಿಂತಲೂ ಹೆಚ್ಚಿನ ದಾಸ್ತಾನು ಮಾಡಿಕೊಂಡಿರುವುದು ಕಂಡುಬಂತು. ಹೆಚ್ಚುವರಿ ಪಟಾಕಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು ಎಂದು ಗೊತ್ತಾಗಿದೆ.</p><p>ಹಸಿರು ಪಟಾಕಿ ಹೆಸರಿನಲ್ಲಿ ಸಾಂಪ್ರದಾಯಿಕ ಪಟಾಕಿಗಳ ಮಾರಾಟ ಮಾಡುತ್ತಿರುವುದು, ಪರವಾನಗಿ ಪಡೆಯದವರೂ ಪಟಾಕಿ ಮಾರಾಟ ನಡೆಸುತ್ತಿರುವುದು ಕಂಡುಬಂತು. ಅಂತಹವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>ಬೇಡಿಕೆ ಹೆಚ್ಚಿದೆ ಎನ್ನುವ ಕಾರಣಕ್ಕೆ ಪಟಾಕಿಯನ್ನು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಂಡಿದ್ದರೆ, ಅಂತಹ ಮಾಲೀಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರು ದೀಪಾವಳಿ ಹಬ್ಬಕ್ಕೂ ಮುನ್ನ ನಡೆದ ಸಭೆಯಲ್ಲಿ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದರು.</p><p>‘ಮಂಗಳವಾರ ಹಾಗೂ ಬುಧವಾರ ಸಹ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>