<p><strong>ಬೆಂಗಳೂರು</strong>: ನಗರದ ಉತ್ತರ ವಿಭಾಗದ 13 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿಗಳ ಮನೆಗಳ ಮೇಲೆ ಭಾನುವಾರ ಮುಂಜಾನೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ತಪಾಸಣೆ ನಡೆಸಿದರು.</p><p>ಡಿಸಿಪಿ ಬಿ.ಎಸ್.ನೇಮಗೌಡ ಅವರ ಮಾರ್ಗದರ್ಶನದಲ್ಲಿ ಮುಂಜಾನೆ 4 ರಿಂದ 6ರ ವರೆಗೆ ದಾಳಿ ನಡೆದಿದೆ.</p><p>ಎಸಿಪಿ ನೇತೃತ್ವದಲ್ಲಿ 13 ಠಾಣೆಯ ಇನ್ಸ್ಪೆಕ್ಟರ್ಗಳು, ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳು ಮತ್ತು ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿ, ರೌಡಿಗಳ ಚಲನವಲನ, ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಮಾಹಿತಿ ಸಂಗ್ರಹಿಸಿದರು.</p><p>ಯಾವುದೇ ರೀತಿಯ ಅಹಿತಕರ ಘಟನೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಯಿತು.</p><p>ಮಾರಾಮಾರಿ ನಡೆದಿಲ್ಲ: ಆರ್.ಟಿ.ನಗರದ 1ನೇ ಬ್ಲಾಕ್ 18ನೇ ಕ್ರಾಸ್ ರಸ್ತೆಯಲ್ಲಿ ರಾತ್ರಿ ನಡೆದ ಹುಟ್ಟುಹಬ್ಬದ ವೇಳೆ ಮಾರಕಾಸ್ತ್ರಗಳನ್ನು ಬಳಕೆ ಮಾಡಿಲ್ಲ. ಪುಡಿ ರೌಡಿಗಳ ನಡುವೆ ಮಾರಾಮಾರಿ ನಡೆದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p><p>ಸುಮಾರು 10 ರಿಂದ 15 ಬಾಲಕರು ತಮ್ಮ ಸ್ನೇಹಿತನ ಹುಟ್ಟಹಬ್ಬ ಆಚರಿಸಿಕೊಳ್ಳಲು ಕೇಕ್ ಕತ್ತರಿಸುವಾಗ ಅವರಲ್ಲಿ ಒಬ್ಬರ ತಲೆಗೆ ಮೊಟ್ಟೆ ಹೊಡೆದ ವಿಚಾರಕ್ಕೆ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ಎಲ್ಲರೂ ಶಾಲಾ ಬಾಲಕರು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಉತ್ತರ ವಿಭಾಗದ 13 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿಗಳ ಮನೆಗಳ ಮೇಲೆ ಭಾನುವಾರ ಮುಂಜಾನೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ತಪಾಸಣೆ ನಡೆಸಿದರು.</p><p>ಡಿಸಿಪಿ ಬಿ.ಎಸ್.ನೇಮಗೌಡ ಅವರ ಮಾರ್ಗದರ್ಶನದಲ್ಲಿ ಮುಂಜಾನೆ 4 ರಿಂದ 6ರ ವರೆಗೆ ದಾಳಿ ನಡೆದಿದೆ.</p><p>ಎಸಿಪಿ ನೇತೃತ್ವದಲ್ಲಿ 13 ಠಾಣೆಯ ಇನ್ಸ್ಪೆಕ್ಟರ್ಗಳು, ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳು ಮತ್ತು ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿ, ರೌಡಿಗಳ ಚಲನವಲನ, ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸದ ಬಗ್ಗೆ ಮಾಹಿತಿ ಸಂಗ್ರಹಿಸಿದರು.</p><p>ಯಾವುದೇ ರೀತಿಯ ಅಹಿತಕರ ಘಟನೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಲಾಯಿತು.</p><p>ಮಾರಾಮಾರಿ ನಡೆದಿಲ್ಲ: ಆರ್.ಟಿ.ನಗರದ 1ನೇ ಬ್ಲಾಕ್ 18ನೇ ಕ್ರಾಸ್ ರಸ್ತೆಯಲ್ಲಿ ರಾತ್ರಿ ನಡೆದ ಹುಟ್ಟುಹಬ್ಬದ ವೇಳೆ ಮಾರಕಾಸ್ತ್ರಗಳನ್ನು ಬಳಕೆ ಮಾಡಿಲ್ಲ. ಪುಡಿ ರೌಡಿಗಳ ನಡುವೆ ಮಾರಾಮಾರಿ ನಡೆದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.</p><p>ಸುಮಾರು 10 ರಿಂದ 15 ಬಾಲಕರು ತಮ್ಮ ಸ್ನೇಹಿತನ ಹುಟ್ಟಹಬ್ಬ ಆಚರಿಸಿಕೊಳ್ಳಲು ಕೇಕ್ ಕತ್ತರಿಸುವಾಗ ಅವರಲ್ಲಿ ಒಬ್ಬರ ತಲೆಗೆ ಮೊಟ್ಟೆ ಹೊಡೆದ ವಿಚಾರಕ್ಕೆ ಪರಸ್ಪರ ಗಲಾಟೆ ಮಾಡಿಕೊಂಡಿದ್ದಾರೆ. ಎಲ್ಲರೂ ಶಾಲಾ ಬಾಲಕರು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>