<p><strong>ಬೆಂಗಳೂರು:</strong> ‘ಸಾರ್ವಜನಿಕರ ಜೊತೆ ತಾಳ್ಮೆ ಹಾಗೂ ಸಂಯಮದಿಂದ ಮಾತನಾಡಬೇಕು. ಯಾರೂ ಸಹ ಏರುಧ್ವನಿಯಲ್ಲಿ ನಿಂದಿಸುವುದನ್ನು ಮಾಡಬಾರದು. ಆ ಬಗ್ಗೆ ದೂರುಗಳು ಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ.</p>.<p>ನಗರದ ಸಂಚಾರ ಠಾಣೆಗಳ ಇನ್ಸ್ಪೆಕ್ಟರ್ಗಳ ಜೊತೆ ಆನ್ಲೈನ್ನಲ್ಲಿ ಗುರುವಾರ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಜನರ ಜೀವ ರಕ್ಷಣೆ ಹಾಗೂ ಕಾನೂನು ಜಾರಿ ಪೊಲೀಸರ ಕರ್ತವ್ಯ. ಲಾಕ್ಡೌನ್ ನಿಯಮಗಳನ್ನು ಕಡ್ಡಾಯವಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು. ಅನಗತ್ಯ ವಾಹನಗಳ ಓಡಾಟ ನಿಯಂತ್ರಿಸಬೇಕು’ ಎಂದೂ ಸೂಚನೆ ನೀಡಿದರು.</p>.<p>‘ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಲಸಿಕೆ ಪಡೆಯದ ಸಿಬ್ಬಂದಿ ಸೋಂಕು ತಗುಲಿ ಮೃತಪಟ್ಟರೆ, ಸರ್ಕಾರದಿಂದ ₹ 30 ಲಕ್ಷ ಪರಿಹಾರ ಮಂಜೂರಾಗುವ ಸಾಧ್ಯತೆ ಕಡಿಮೆ’ ಎಂದೂ ಹೇಳಿದರು.</p>.<p class="Subhead">ಗೌರವ ನೀಡದ ಸಿಬ್ಬಂದಿ ಅಮಾನತು: ‘ಲಾಕ್ಡೌನ್ ಸಂದರ್ಭದಲ್ಲಿ ಕರ್ತವ್ಯ ಸ್ಥಳಕ್ಕೆ ಕಾನೂನು ಸುವ್ಯವಸ್ಥೆ ಹಿರಿಯ ಅಧಿಕಾರಿಗಳು ಬಂದರೂ ಗೌರವ ನೀಡದ ಕಾರಣ ಕೆಲ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇಂಥ ಘಟನೆಗಳು ಮರುಕಳಿಸದಂತೆ ನೋಡಿ<br />ಕೊಳ್ಳಬೇಕು. ತಪಾಸಣೆಗೆ ಬರುವ ಅಧಿಕಾರಿಗಳಿಗೆ ಗೌರವ ನೀಡಬೇಕು’ ಎಂದರು.</p>.<p><strong>‘ಸಂಚಾರ ನಿಯಮ ಪಾಲಿಸಿ’</strong></p>.<p>‘ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ವಾಹನಗಳ ಭೌತಿಕ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ. ರಸ್ತೆ, ವೃತ್ತಗಳಲ್ಲಿರುವ ಕ್ಯಾಮೆರಾ ಹಾಗೂ ಸಿಬ್ಬಂದಿ ಬಳಿಯ ಟ್ಯಾಬ್ ಮೂಲಕ ಫೋಟೊ ಸಮೇತ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಮಾಡಿ ದಂಡ ವಿಧಿಸಲಾಗುವುದು’ ಎಂದು ರವಿಕಾಂತೇಗೌಡ ಹೇಳಿದರು.</p>.<p>‘ನಗರದಲ್ಲಿ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳಲು ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಪಾಲಿಸಬೇಕು’ ಎಂದೂ ಅವರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾರ್ವಜನಿಕರ ಜೊತೆ ತಾಳ್ಮೆ ಹಾಗೂ ಸಂಯಮದಿಂದ ಮಾತನಾಡಬೇಕು. ಯಾರೂ ಸಹ ಏರುಧ್ವನಿಯಲ್ಲಿ ನಿಂದಿಸುವುದನ್ನು ಮಾಡಬಾರದು. ಆ ಬಗ್ಗೆ ದೂರುಗಳು ಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ.</p>.<p>ನಗರದ ಸಂಚಾರ ಠಾಣೆಗಳ ಇನ್ಸ್ಪೆಕ್ಟರ್ಗಳ ಜೊತೆ ಆನ್ಲೈನ್ನಲ್ಲಿ ಗುರುವಾರ ಸಭೆ ನಡೆಸಿ ಅವರು ಮಾತನಾಡಿದರು.</p>.<p>‘ಜನರ ಜೀವ ರಕ್ಷಣೆ ಹಾಗೂ ಕಾನೂನು ಜಾರಿ ಪೊಲೀಸರ ಕರ್ತವ್ಯ. ಲಾಕ್ಡೌನ್ ನಿಯಮಗಳನ್ನು ಕಡ್ಡಾಯವಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು. ಅನಗತ್ಯ ವಾಹನಗಳ ಓಡಾಟ ನಿಯಂತ್ರಿಸಬೇಕು’ ಎಂದೂ ಸೂಚನೆ ನೀಡಿದರು.</p>.<p>‘ಪ್ರತಿಯೊಬ್ಬರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಲಸಿಕೆ ಪಡೆಯದ ಸಿಬ್ಬಂದಿ ಸೋಂಕು ತಗುಲಿ ಮೃತಪಟ್ಟರೆ, ಸರ್ಕಾರದಿಂದ ₹ 30 ಲಕ್ಷ ಪರಿಹಾರ ಮಂಜೂರಾಗುವ ಸಾಧ್ಯತೆ ಕಡಿಮೆ’ ಎಂದೂ ಹೇಳಿದರು.</p>.<p class="Subhead">ಗೌರವ ನೀಡದ ಸಿಬ್ಬಂದಿ ಅಮಾನತು: ‘ಲಾಕ್ಡೌನ್ ಸಂದರ್ಭದಲ್ಲಿ ಕರ್ತವ್ಯ ಸ್ಥಳಕ್ಕೆ ಕಾನೂನು ಸುವ್ಯವಸ್ಥೆ ಹಿರಿಯ ಅಧಿಕಾರಿಗಳು ಬಂದರೂ ಗೌರವ ನೀಡದ ಕಾರಣ ಕೆಲ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇಂಥ ಘಟನೆಗಳು ಮರುಕಳಿಸದಂತೆ ನೋಡಿ<br />ಕೊಳ್ಳಬೇಕು. ತಪಾಸಣೆಗೆ ಬರುವ ಅಧಿಕಾರಿಗಳಿಗೆ ಗೌರವ ನೀಡಬೇಕು’ ಎಂದರು.</p>.<p><strong>‘ಸಂಚಾರ ನಿಯಮ ಪಾಲಿಸಿ’</strong></p>.<p>‘ಕೊರೊನಾ ಸೋಂಕು ಹರಡುವಿಕೆ ಹೆಚ್ಚಾಗಿರುವುದರಿಂದ ಸಾರ್ವಜನಿಕರ ವಾಹನಗಳ ಭೌತಿಕ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ. ರಸ್ತೆ, ವೃತ್ತಗಳಲ್ಲಿರುವ ಕ್ಯಾಮೆರಾ ಹಾಗೂ ಸಿಬ್ಬಂದಿ ಬಳಿಯ ಟ್ಯಾಬ್ ಮೂಲಕ ಫೋಟೊ ಸಮೇತ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಮಾಡಿ ದಂಡ ವಿಧಿಸಲಾಗುವುದು’ ಎಂದು ರವಿಕಾಂತೇಗೌಡ ಹೇಳಿದರು.</p>.<p>‘ನಗರದಲ್ಲಿ ಅಪಘಾತಗಳು ಸಂಭವಿಸದಂತೆ ನೋಡಿಕೊಳ್ಳಲು ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ಪಾಲಿಸಬೇಕು’ ಎಂದೂ ಅವರು ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>