<p><strong>ನೆಲಮಂಗಲ</strong>: ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ₹4.05 ಕೋಟಿ ವೆಚ್ಚದ ಗ್ರಾಮಾಂತರ ಠಾಣೆ, ಸಂಚಾರಿ ಠಾಣೆ, ಇನ್ಸ್ಪೆಕ್ಟರ್ ಕಚೇರಿಯ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಗುರುವಾರ ನೆರವೇರಿಸಲಾಯಿತು ಎಂದು ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ಠಾಣೆಯಲ್ಲಿ ನೆಲಮಂಗಲ ಉಪವಿಭಾಗದಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ವಿತರಿಸಿ ಮಾತನಾಡಿದ ಅವರು, ‘ನಿರಂತರವಾಗಿ ದುಷ್ಕೃತ್ಯಗಳಲ್ಲಿ ತೊಡಗುತ್ತಿರುವ ಆರೋಪಿಗಳ ಜಾಮೀನನ್ನು ರದ್ದು ಮಾಡುವ, ಜಾಮೀನು ಪಡೆದು ನ್ಯಾಯಾಲಯಗಳಿಗೆ ಹಾಜರಾಗದವರ ಮತ್ತು ಜಾಮೀನು ಹಾಕಿದವರ ಸ್ವತ್ತುಗಳನ್ನು ವಶಪಡಿಸಿಕೊಳ್ಳುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ರಾಜಕಾಲುವೆ, ನಾಲೆಗಳಿಗೆ ಕಟ್ಟಡ ನಿರ್ಮಾಣದ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯಗಳನ್ನು ಸುರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿದರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು’ ಎಂದರು.</p>.<p>ನೆಲಮಂಗಲ ಉಪ ವಿಭಾಗದ ವ್ಯಾಪ್ತಿಯಲ್ಲಿ ಮೂರು ತಿಂಗಳಲ್ಲಿ 15 ಆರೋಪಿಗಳನ್ನು ಬಂಧಿಸಿ ಅವರಿಂದ 423 ಗ್ರಾಂ ಚಿನ್ನಾಭರಣ, 1.41 ಕೆ.ಜಿ ಬೆಳ್ಳಿ ಆಭರಣ, 855 ಮೊಬೈಲ್, 11 ದ್ವಿಚಕ್ರ ವಾಹನ, 2 ಲಗೇಜ್ ಆಟೊ, 25 ಸಾವಿರ ನಗದು ಸೇರಿದಂತೆ ಒಟ್ಟು ₹95 ಲಕ್ಷ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.</p>.<p>ಕಾರ್ಯಾಚರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು. ಎಸ್ಪಿ ಡಾ.ಕೋನ ವಂಸಿ ಕೃಷ್ಣ, ಹೆಚ್ಚುವರಿ ಎಸ್ಪಿ ಲಕ್ಷ್ಮೀಗಣೇಶ್, ಡಿವೈಎಸ್ಪಿ ಎಚ್.ಸಿ.ಜಗದೀಶ್, ಇನ್ಸ್ಪೆಕ್ಟರ್ ಹರೀಶ್, ಇನ್ಸ್ಪೆಕ್ಟರ್ಗಳಾದ ಎ.ವಿ.ಕುಮಾರ್, ಬಿ.ಎಸ್.ಮಂಜುನಾಥ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ₹4.05 ಕೋಟಿ ವೆಚ್ಚದ ಗ್ರಾಮಾಂತರ ಠಾಣೆ, ಸಂಚಾರಿ ಠಾಣೆ, ಇನ್ಸ್ಪೆಕ್ಟರ್ ಕಚೇರಿಯ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಗುರುವಾರ ನೆರವೇರಿಸಲಾಯಿತು ಎಂದು ಕೇಂದ್ರ ವಲಯ ಐಜಿಪಿ ಎಂ.ಚಂದ್ರಶೇಖರ್ ತಿಳಿಸಿದರು.</p>.<p>ಪಟ್ಟಣದ ಠಾಣೆಯಲ್ಲಿ ನೆಲಮಂಗಲ ಉಪವಿಭಾಗದಲ್ಲಿ ವಶಪಡಿಸಿಕೊಂಡ ಸ್ವತ್ತುಗಳನ್ನು ವಾರಸುದಾರರಿಗೆ ವಿತರಿಸಿ ಮಾತನಾಡಿದ ಅವರು, ‘ನಿರಂತರವಾಗಿ ದುಷ್ಕೃತ್ಯಗಳಲ್ಲಿ ತೊಡಗುತ್ತಿರುವ ಆರೋಪಿಗಳ ಜಾಮೀನನ್ನು ರದ್ದು ಮಾಡುವ, ಜಾಮೀನು ಪಡೆದು ನ್ಯಾಯಾಲಯಗಳಿಗೆ ಹಾಜರಾಗದವರ ಮತ್ತು ಜಾಮೀನು ಹಾಕಿದವರ ಸ್ವತ್ತುಗಳನ್ನು ವಶಪಡಿಸಿಕೊಳ್ಳುವ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.</p>.<p>‘ರಾಜಕಾಲುವೆ, ನಾಲೆಗಳಿಗೆ ಕಟ್ಟಡ ನಿರ್ಮಾಣದ ತ್ಯಾಜ್ಯ ಹಾಗೂ ಇತರೆ ತ್ಯಾಜ್ಯಗಳನ್ನು ಸುರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿದರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು’ ಎಂದರು.</p>.<p>ನೆಲಮಂಗಲ ಉಪ ವಿಭಾಗದ ವ್ಯಾಪ್ತಿಯಲ್ಲಿ ಮೂರು ತಿಂಗಳಲ್ಲಿ 15 ಆರೋಪಿಗಳನ್ನು ಬಂಧಿಸಿ ಅವರಿಂದ 423 ಗ್ರಾಂ ಚಿನ್ನಾಭರಣ, 1.41 ಕೆ.ಜಿ ಬೆಳ್ಳಿ ಆಭರಣ, 855 ಮೊಬೈಲ್, 11 ದ್ವಿಚಕ್ರ ವಾಹನ, 2 ಲಗೇಜ್ ಆಟೊ, 25 ಸಾವಿರ ನಗದು ಸೇರಿದಂತೆ ಒಟ್ಟು ₹95 ಲಕ್ಷ ಮೌಲ್ಯದ ಕಳವು ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.</p>.<p>ಕಾರ್ಯಾಚರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಪ್ರಶಂಸಾ ಪತ್ರ ವಿತರಿಸಿದರು. ಎಸ್ಪಿ ಡಾ.ಕೋನ ವಂಸಿ ಕೃಷ್ಣ, ಹೆಚ್ಚುವರಿ ಎಸ್ಪಿ ಲಕ್ಷ್ಮೀಗಣೇಶ್, ಡಿವೈಎಸ್ಪಿ ಎಚ್.ಸಿ.ಜಗದೀಶ್, ಇನ್ಸ್ಪೆಕ್ಟರ್ ಹರೀಶ್, ಇನ್ಸ್ಪೆಕ್ಟರ್ಗಳಾದ ಎ.ವಿ.ಕುಮಾರ್, ಬಿ.ಎಸ್.ಮಂಜುನಾಥ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>