<p><strong>ಬೆಂಗಳೂರು</strong>: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಮನೆಗೆ ದರೋಡೆಕೋರರು ಸೋಮವಾರ ಮಧ್ಯಾಹ್ನ ಪೊಲೀಸರ ಸೋಗಿನಲ್ಲಿ ನುಗ್ಗಿ ₹20 ಲಕ್ಷ ದೋಚಿ ಪರಾರಿ ಆಗಿದ್ದಾರೆ.</p><p><br>ಬಿಇಎಲ್ ಲೇಔಟ್ ನಿವಾಸಿ ಹೊಂಬಾಳೇಗೌಡ ಅವರ ಮನೆಯಲ್ಲಿ ಕೃತ್ಯ ಎಗಲಾಗಿದೆ.<br>ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸ್ ಸಮವಸ್ತ್ರದಲ್ಲಿ ಬಂದ ಇಬ್ಬರು ಆರೋಪಿಗಳು, ಬೆದರಿಸಿ ₹ 20 ಲಕ್ಷ ನಗದು, 500 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.<br>ರಿಯಲ್ ಎಸ್ಟೇಟ್ ಏಜೆಂಟ್ ಜತೆಗೆ ಗುತ್ತಿಗೆದಾರರಾಗಿರುವ ಹೊಂಬಾಳೇಗೌಡ ಅವರು ಮಧ್ಯಾಹ್ನ 3 ಗಂಟೆಗೆ ಪತ್ನಿ ಮಂಗಳಮ್ಮ ಮತ್ತು ಮೊಮ್ಮಗಳ ಜತೆ ಮನೆಯಲ್ಲಿ ಇದ್ದರು. ಈ ವೇಳೆ ಪೊಲೀಸ್ ಸಮವಸ್ತ್ರದಲ್ಲಿ ಬಂದ ಇಬ್ಬರು ವ್ಯಕ್ತಿಗಳು, ಬಾಗಿಲು ತಟ್ಟಿದ್ದಾರೆ. ಹೊಂಬಳೇಗೌಡ ಬಾಗಿಲು ತೆರೆದಾಗ, ಇಬ್ಬರು ತಾವು ಯಲಹಂಕ ಠಾಣೆಯ ಪಿಎಸ್ಐ ಎಂದು ಪರಿಚಯ ಮಾಡಿಕೊಂಡಿದ್ದರು. ಬಳಿಕ ಚಾಕು ಹಿಡಿದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p><br>ಮನೆಯ ಎಲ್ಲಾ ಕೋಣೆಗಳನ್ನು ಹುಡುಕಾಟ ನಡೆಸಿ, ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ ಆಗಿದ್ದಾರೆ. ದಂಪತಿಯ ಮೊಬೈಲ್ಗಳು ಮತ್ತು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅನ್ನು ತೆಗೆದುಕೊಂಡು ಹೋಗಿದ್ದಾರೆ. ಕೋಣೆಯಲ್ಲಿದ್ದ ಮಗುವಿಗೆ ಯಾವುದೇ ತೊಂದರೆ ಕೊಟ್ಟಿಲ್ಲ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ರಿಯಲ್ ಎಸ್ಟೇಟ್ ಏಜೆಂಟ್ ಮನೆಗೆ ದರೋಡೆಕೋರರು ಸೋಮವಾರ ಮಧ್ಯಾಹ್ನ ಪೊಲೀಸರ ಸೋಗಿನಲ್ಲಿ ನುಗ್ಗಿ ₹20 ಲಕ್ಷ ದೋಚಿ ಪರಾರಿ ಆಗಿದ್ದಾರೆ.</p><p><br>ಬಿಇಎಲ್ ಲೇಔಟ್ ನಿವಾಸಿ ಹೊಂಬಾಳೇಗೌಡ ಅವರ ಮನೆಯಲ್ಲಿ ಕೃತ್ಯ ಎಗಲಾಗಿದೆ.<br>ಮಧ್ಯಾಹ್ನ 3 ಗಂಟೆ ಸುಮಾರಿಗೆ ಪೊಲೀಸ್ ಸಮವಸ್ತ್ರದಲ್ಲಿ ಬಂದ ಇಬ್ಬರು ಆರೋಪಿಗಳು, ಬೆದರಿಸಿ ₹ 20 ಲಕ್ಷ ನಗದು, 500 ಗ್ರಾಂ ಚಿನ್ನಾಭರಣ ಸುಲಿಗೆ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.<br>ರಿಯಲ್ ಎಸ್ಟೇಟ್ ಏಜೆಂಟ್ ಜತೆಗೆ ಗುತ್ತಿಗೆದಾರರಾಗಿರುವ ಹೊಂಬಾಳೇಗೌಡ ಅವರು ಮಧ್ಯಾಹ್ನ 3 ಗಂಟೆಗೆ ಪತ್ನಿ ಮಂಗಳಮ್ಮ ಮತ್ತು ಮೊಮ್ಮಗಳ ಜತೆ ಮನೆಯಲ್ಲಿ ಇದ್ದರು. ಈ ವೇಳೆ ಪೊಲೀಸ್ ಸಮವಸ್ತ್ರದಲ್ಲಿ ಬಂದ ಇಬ್ಬರು ವ್ಯಕ್ತಿಗಳು, ಬಾಗಿಲು ತಟ್ಟಿದ್ದಾರೆ. ಹೊಂಬಳೇಗೌಡ ಬಾಗಿಲು ತೆರೆದಾಗ, ಇಬ್ಬರು ತಾವು ಯಲಹಂಕ ಠಾಣೆಯ ಪಿಎಸ್ಐ ಎಂದು ಪರಿಚಯ ಮಾಡಿಕೊಂಡಿದ್ದರು. ಬಳಿಕ ಚಾಕು ಹಿಡಿದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p><p><br>ಮನೆಯ ಎಲ್ಲಾ ಕೋಣೆಗಳನ್ನು ಹುಡುಕಾಟ ನಡೆಸಿ, ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿ ಆಗಿದ್ದಾರೆ. ದಂಪತಿಯ ಮೊಬೈಲ್ಗಳು ಮತ್ತು ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅನ್ನು ತೆಗೆದುಕೊಂಡು ಹೋಗಿದ್ದಾರೆ. ಕೋಣೆಯಲ್ಲಿದ್ದ ಮಗುವಿಗೆ ಯಾವುದೇ ತೊಂದರೆ ಕೊಟ್ಟಿಲ್ಲ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>