<p>ಬೆಂಗಳೂರು: ಆರ್ಟ್ ಆಫ್ ಗಿವಿಂಗ್ನ 13ನೇ ವಾರ್ಷಿಕೋತ್ಸವದ (ಮೇ 17) ಅಂಗವಾಗಿ ಬಸವೇಶ್ವರ ನಗರದ ಇಂಡಿಯನ್ ಹೈಸ್ಕೂಲ್ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಶಾಲೆಯ ಸುತ್ತಮುತ್ತ ಕೆಲಸ ಮಾಡುವ ಪೌರಕಾರ್ಮಿಕರು, ಆಯಾಗಳು, ಬಡ ಮಹಿಳೆಯರಿಗೆ ಸೀರೆ ಮತ್ತು ಹಣ್ಣು ವಿತರಿಸಲಾಯಿತು. ಈ ಬಾರಿಯ ಆರ್ಟ್ ಆಫ್ ಗಿವಿಂಗ್ನ ಘೋಷವಾಕ್ಯ ‘ಶೇರ್ ಟು ಶೈನ್’ ಆಗಿದೆ.</p>.<p>ಶಾಲೆಯ ಕಾರ್ಯದರ್ಶಿ ಎಚ್.ಎಂ. ಸೌಭಾಗ್ಯಲಕ್ಷ್ಮಿ ಮಾತನಾಡಿ, ‘ಬಡ ಮಹಿಳೆಯರು, ಪೌರಕಾರ್ಮಿಕರನ್ನು ಗುರುತಿಸಿ ಗೌರವಿಸಿರುವುದು ಒಳ್ಳೆಯ ಕೆಲಸ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಗೌರವ ಸ್ವೀಕರಿಸಿ ಮಾತನಾಡಿದ ಪೌರಕಾರ್ಮಿಕರು, ‘ಪರಿಸರದ ಸ್ವಚ್ಛತೆಗಾಗಿ ಕೆಲಸ ಮಾಡುತ್ತೇವೆ. ನಮ್ಮ ಸೇವೆಯನ್ನೂ ಆರ್ಟ್ ಆಫ್ ಗಿವಿಂಗ್ ಗುರುತಿಸಿರುವುದಕ್ಕೆ ಧನ್ಯವಾದಗಳು’ ಎಂದರು.</p>.<p>ಇದೇ ವೇಳೆ ವಿಜ್ಞಾನ ಶಿಕ್ಷಕಿ ಜ್ಯೋತಿ ಪ್ರಿಯಾ ಅವರು, ನೀರನ್ನು ಹೇಗೆ ಕುಡಿಯಬೇಕು, ಯಾವ ನೀರು ಕುಡಿಯುಲು ಯೋಗ್ಯ, ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಂಟಿ ಕಾರ್ಯದರ್ಶಿ ಜಯಲಕ್ಷ್ಮಿ, ಸಮನ್ವಯಕಾರರಾದ ಮಮತಾ ಎನ್. ಸ್ವಾಮಿ, ಅನಿತಾ ಗುರು ಪ್ರಸಾದ್, ಶಿಕ್ಷಕಿ ವೀಣಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-4-1163973057</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆರ್ಟ್ ಆಫ್ ಗಿವಿಂಗ್ನ 13ನೇ ವಾರ್ಷಿಕೋತ್ಸವದ (ಮೇ 17) ಅಂಗವಾಗಿ ಬಸವೇಶ್ವರ ನಗರದ ಇಂಡಿಯನ್ ಹೈಸ್ಕೂಲ್ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಶಾಲೆಯ ಸುತ್ತಮುತ್ತ ಕೆಲಸ ಮಾಡುವ ಪೌರಕಾರ್ಮಿಕರು, ಆಯಾಗಳು, ಬಡ ಮಹಿಳೆಯರಿಗೆ ಸೀರೆ ಮತ್ತು ಹಣ್ಣು ವಿತರಿಸಲಾಯಿತು. ಈ ಬಾರಿಯ ಆರ್ಟ್ ಆಫ್ ಗಿವಿಂಗ್ನ ಘೋಷವಾಕ್ಯ ‘ಶೇರ್ ಟು ಶೈನ್’ ಆಗಿದೆ.</p>.<p>ಶಾಲೆಯ ಕಾರ್ಯದರ್ಶಿ ಎಚ್.ಎಂ. ಸೌಭಾಗ್ಯಲಕ್ಷ್ಮಿ ಮಾತನಾಡಿ, ‘ಬಡ ಮಹಿಳೆಯರು, ಪೌರಕಾರ್ಮಿಕರನ್ನು ಗುರುತಿಸಿ ಗೌರವಿಸಿರುವುದು ಒಳ್ಳೆಯ ಕೆಲಸ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಗೌರವ ಸ್ವೀಕರಿಸಿ ಮಾತನಾಡಿದ ಪೌರಕಾರ್ಮಿಕರು, ‘ಪರಿಸರದ ಸ್ವಚ್ಛತೆಗಾಗಿ ಕೆಲಸ ಮಾಡುತ್ತೇವೆ. ನಮ್ಮ ಸೇವೆಯನ್ನೂ ಆರ್ಟ್ ಆಫ್ ಗಿವಿಂಗ್ ಗುರುತಿಸಿರುವುದಕ್ಕೆ ಧನ್ಯವಾದಗಳು’ ಎಂದರು.</p>.<p>ಇದೇ ವೇಳೆ ವಿಜ್ಞಾನ ಶಿಕ್ಷಕಿ ಜ್ಯೋತಿ ಪ್ರಿಯಾ ಅವರು, ನೀರನ್ನು ಹೇಗೆ ಕುಡಿಯಬೇಕು, ಯಾವ ನೀರು ಕುಡಿಯುಲು ಯೋಗ್ಯ, ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಮಾಹಿತಿ ನೀಡಿದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಂಟಿ ಕಾರ್ಯದರ್ಶಿ ಜಯಲಕ್ಷ್ಮಿ, ಸಮನ್ವಯಕಾರರಾದ ಮಮತಾ ಎನ್. ಸ್ವಾಮಿ, ಅನಿತಾ ಗುರು ಪ್ರಸಾದ್, ಶಿಕ್ಷಕಿ ವೀಣಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-4-1163973057</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>