<p><strong>ಬೆಂಗಳೂರು:</strong> ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸಜಾಬಂದಿ ಚೇತನ್ ಕಲ್ಯಾಣಿ (34) ಎಂಬಾತ ಸೆಪ್ಟೆಂಬರ್ 8ರಂದು ಪರಾರಿಯಾಗಿದ್ದು, ಈ ದೃಶ್ಯಾವಳಿ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.</p>.<p>ಕ್ಯಾನ್ಸರ್ ಚಿಕಿತ್ಸೆಗೆಂದು ಕಿದ್ವಾಯಿ ಆಸ್ಪತ್ರೆಗೆ ಸಜಾಬಂದಿಯನ್ನು ದಾಖಲಿಸಲಾಗಿತ್ತು.</p>.<p>ವಿಜಯಪುರ ಜಿಲ್ಲೆಯ ಚೇತನ್ ಕಲ್ಯಾಣಿ, ಕಳವು ಪ್ರಕರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ. ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿದ್ದ ಆತನನ್ನು ಆಗಸ್ಟ್ 3ರಂದು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.</p>.<p>ಚೇತನ್, ಬಾಯಿ ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಾರಣಕ್ಕೆ ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್, ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಪರಾರಿ ಆಗಿದ್ದಾನೆ ಎಂದು ಮೂಲಗಳು ಹೇಳಿವೆ.</p>.<p>ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ರಘು ಅವರನ್ನು ಕಿದ್ವಾಯಿ ಆಸ್ಪತ್ರೆಯಲ್ಲಿ ಚೇತನ್ನ ಕಾವಲಿಗೆ ನಿಯೋಜಿಸಲಾಗಿತ್ತು. ರಘು ಅವರು ಚೇತನ್ನ ವೈದ್ಯಕೀಯ ದಾಖಲೆಗಳನ್ನು ವೈದ್ಯರಿಗೆ ತೋರಿಸಲು ವಾರ್ಡ್ನಿಂದ ಹೊರಗೆ ಹೋಗಿದ್ದರು. ಆಗ ಚೇತನ್ ವಾರ್ಡ್ನಿಂದ ಪರಾರಿ ಆಗಿದ್ದಾನೆ ಎಂದು ಮೂಲಗಳು ಹೇಳಿವೆ.</p>.<p>ಕೈದಿ ಚೇತನ್ ಪರಾರಿಯಾಗಲು ಜೈಲಿನ ವಾರ್ಡನ್ ರಘು ಅವರ ನಿರ್ಲಕ್ಷ್ಯವೇ ಕಾರಣ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಚೇತನ್ನ ಪತ್ತೆ ಕಾರ್ಯ ಮುಂದುವರಿದಿದೆ. ಕಿದ್ವಾಯಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸಜಾಬಂದಿ ಚೇತನ್ ಕಲ್ಯಾಣಿ (34) ಎಂಬಾತ ಸೆಪ್ಟೆಂಬರ್ 8ರಂದು ಪರಾರಿಯಾಗಿದ್ದು, ಈ ದೃಶ್ಯಾವಳಿ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.</p>.<p>ಕ್ಯಾನ್ಸರ್ ಚಿಕಿತ್ಸೆಗೆಂದು ಕಿದ್ವಾಯಿ ಆಸ್ಪತ್ರೆಗೆ ಸಜಾಬಂದಿಯನ್ನು ದಾಖಲಿಸಲಾಗಿತ್ತು.</p>.<p>ವಿಜಯಪುರ ಜಿಲ್ಲೆಯ ಚೇತನ್ ಕಲ್ಯಾಣಿ, ಕಳವು ಪ್ರಕರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ. ವಿಜಯಪುರ ಜಿಲ್ಲಾ ಕಾರಾಗೃಹದಲ್ಲಿದ್ದ ಆತನನ್ನು ಆಗಸ್ಟ್ 3ರಂದು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು.</p>.<p>ಚೇತನ್, ಬಾಯಿ ಕ್ಯಾನ್ಸರ್ನಿಂದ ಬಳಲುತ್ತಿದ್ದ ಕಾರಣಕ್ಕೆ ಜೈಲಿನ ವೈದ್ಯರ ಸಲಹೆ ಮೇರೆಗೆ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಚೇತನ್, ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಪರಾರಿ ಆಗಿದ್ದಾನೆ ಎಂದು ಮೂಲಗಳು ಹೇಳಿವೆ.</p>.<p>ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ರಘು ಅವರನ್ನು ಕಿದ್ವಾಯಿ ಆಸ್ಪತ್ರೆಯಲ್ಲಿ ಚೇತನ್ನ ಕಾವಲಿಗೆ ನಿಯೋಜಿಸಲಾಗಿತ್ತು. ರಘು ಅವರು ಚೇತನ್ನ ವೈದ್ಯಕೀಯ ದಾಖಲೆಗಳನ್ನು ವೈದ್ಯರಿಗೆ ತೋರಿಸಲು ವಾರ್ಡ್ನಿಂದ ಹೊರಗೆ ಹೋಗಿದ್ದರು. ಆಗ ಚೇತನ್ ವಾರ್ಡ್ನಿಂದ ಪರಾರಿ ಆಗಿದ್ದಾನೆ ಎಂದು ಮೂಲಗಳು ಹೇಳಿವೆ.</p>.<p>ಕೈದಿ ಚೇತನ್ ಪರಾರಿಯಾಗಲು ಜೈಲಿನ ವಾರ್ಡನ್ ರಘು ಅವರ ನಿರ್ಲಕ್ಷ್ಯವೇ ಕಾರಣ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಚೇತನ್ನ ಪತ್ತೆ ಕಾರ್ಯ ಮುಂದುವರಿದಿದೆ. ಕಿದ್ವಾಯಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>