ಬೆಂಗಳೂರು: ‘ಎಚ್. ಕಾಂತರಾಜ ಆಯೋಗದ ವರದಿ ಜಾರಿಗೊಳಿಸಬೇಕು’ ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿ ಹಿಂದುಳಿದ ಮಠಾಧೀಶರ ಮಹಾಸಭಾದಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಮಠಾಧೀಶರು, ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು.
‘ಅತಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸ್ಥಾಪಿಸಿರುವ ಎಲ್ಲ ನಿಗಮಗಳಿಗೆ ತಲಾ ₹ 500 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಸಮಾಜದ ಜನರ ಕುಲ ಕಸುಬುಗಳನ್ನು ರಕ್ಷಣೆ ಮಾಡಿ, ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು’ ಎಂದು ಮಠಾಧೀಶರು ಒತ್ತಾಯಿಸಿದರು.