<p><strong>ಬೆಂಗಳೂರು</strong>: ಪರೀಕ್ಷಾ ಸಮಯದಲ್ಲಿ ಆಯೋಜಿಸಿರುವ ನೇರಳೆ ಹಬ್ಬವನ್ನು (ಪರ್ಪಲ್ ಫೆಸ್ಟ್) ಮುಂದೂಡುವಂತೆ ಕೋರಿ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಪದಾಧಿಕಾರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</p><p>ಫೆ.27, 28 ಹಾಗೂ 1ರಂದು ನೇರಳೆ ಹಬ್ಬವನ್ನು ಆಯೋಜಿಸಲಾಗಿದೆ. ಪರೀಕ್ಷಾ ಸಮಯ ಆಗಿರುವ ಕಾರಣ ವಿದ್ಯಾರ್ಥಿಗಳು ಪಾಲ್ಗೊಳ್ಳಲು<br>ಸಾಧ್ಯವಾಗುವುದಿಲ್ಲ. ಹಬ್ಬದ ಉದ್ದೇಶವೂ ಈಡೇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p><p>ಶೈಕ್ಷಣಿಕ, ಆರ್ಥಿಕ ಹಾಗೂ ವೈದ್ಯಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಹಬ್ಬವನ್ನು ಆಯೋಜಿಸಲಾಗಿದೆ. ನಿಗದಿಯಂತೆ ಹಬ್ಬ ನಡೆದರೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂಗವಿಕಲ ಮಕ್ಕಳು ಹಾಗೂ ಅವರ ಪೋಷಕರಿಗೆ ಆ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಪರೀಕ್ಷಾ ಕಾಲ ಮುಗಿದ ಮೇಲೆ ಅಂದರೆ ಏಪ್ರಿಲ್– ಮೇ ತಿಂಗಳಲ್ಲಿ ನೇರಳೆ ಹಬ್ಬವನ್ನು ಆಯೋಜಿಸಬೇಕು ಎಂದು ಕಾರ್ಯಾಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪರೀಕ್ಷಾ ಸಮಯದಲ್ಲಿ ಆಯೋಜಿಸಿರುವ ನೇರಳೆ ಹಬ್ಬವನ್ನು (ಪರ್ಪಲ್ ಫೆಸ್ಟ್) ಮುಂದೂಡುವಂತೆ ಕೋರಿ ಕರ್ನಾಟಕ ರಾಜ್ಯ ವಿಕಲಚೇತನರ ರಕ್ಷಣಾ ಸಮಿತಿ ಪದಾಧಿಕಾರಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.</p><p>ಫೆ.27, 28 ಹಾಗೂ 1ರಂದು ನೇರಳೆ ಹಬ್ಬವನ್ನು ಆಯೋಜಿಸಲಾಗಿದೆ. ಪರೀಕ್ಷಾ ಸಮಯ ಆಗಿರುವ ಕಾರಣ ವಿದ್ಯಾರ್ಥಿಗಳು ಪಾಲ್ಗೊಳ್ಳಲು<br>ಸಾಧ್ಯವಾಗುವುದಿಲ್ಲ. ಹಬ್ಬದ ಉದ್ದೇಶವೂ ಈಡೇರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.</p><p>ಶೈಕ್ಷಣಿಕ, ಆರ್ಥಿಕ ಹಾಗೂ ವೈದ್ಯಕೀಯ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಹಬ್ಬವನ್ನು ಆಯೋಜಿಸಲಾಗಿದೆ. ನಿಗದಿಯಂತೆ ಹಬ್ಬ ನಡೆದರೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಂಗವಿಕಲ ಮಕ್ಕಳು ಹಾಗೂ ಅವರ ಪೋಷಕರಿಗೆ ಆ ಹಬ್ಬದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ. ಪರೀಕ್ಷಾ ಕಾಲ ಮುಗಿದ ಮೇಲೆ ಅಂದರೆ ಏಪ್ರಿಲ್– ಮೇ ತಿಂಗಳಲ್ಲಿ ನೇರಳೆ ಹಬ್ಬವನ್ನು ಆಯೋಜಿಸಬೇಕು ಎಂದು ಕಾರ್ಯಾಧ್ಯಕ್ಷ ಚಂದ್ರಶೇಖರ್ ಪುಟ್ಟಪ್ಪ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>