<p><strong>ಬೆಂಗಳೂರು:</strong> ನಗರದ ಹಲವೆಡೆ ಗುರುವಾರ ರಾತ್ರಿಯೂ ಜೋರು ಮಳೆ ಆಯಿತು.</p>.<p>ಕೆಲ ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುತ್ತಿದ್ದು, ಬುಧವಾರ ಸಂಜೆಯಿಂದ ರಾತ್ರಿಯವರೆಗೂ ಮಳೆ ಆಗಿತ್ತು.</p>.<p>ಗುರುವಾರವೂ ಮೋಡ ಕವಿದ ವಾತಾವರಣವಿತ್ತು. ಸಂಜೆಯಿಂದ ಆರಂಭವಾದ ಮಳೆ ಕೆಲವೆಡೆ ಜೋರಾಗಿ ಸುರಿಯಿತು. ಹಲವೆಡೆ ತುಂತುರು ಮಳೆಯಾಯಿತು.</p>.<p>ನಗರದಲ್ಲಿ ನಿತ್ಯ ರಾತ್ರಿ 8 ಗಂಟೆ ನಂತರ ಕರ್ಫ್ಯೂ ಜಾರಿಯಲ್ಲಿದ್ದು, ಹೀಗಾಗಿ ಜನರ ಓಡಾಟ ಕಡಿಮೆ ಇತ್ತು. ಅದೇ ಸಂದರ್ಭದಲ್ಲೇ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯಿತು. ಪ್ರಮುಖ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ನಂದಿನಿ ಲೇಔಟ್, ಹೆಬ್ಬಾಳ, ಅಶೋಕನಗರ, ಶಿವಾಜಿನಗರ, ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಹೆಣ್ಣೂರು, ಬಾಣಸವಾಡಿ ಹಾಗೂ ಹಲವು ಪ್ರದೇಶಗಳಲ್ಲಿ ಮಳೆ ಆಯಿತು.</p>.<p>‘ರಸ್ತೆಯಲ್ಲಿ ನೀರು ಹರಿದಿದ್ದು ಬಿಟ್ಟರೆ ಬೇರೆ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಹಲವೆಡೆ ಗುರುವಾರ ರಾತ್ರಿಯೂ ಜೋರು ಮಳೆ ಆಯಿತು.</p>.<p>ಕೆಲ ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುತ್ತಿದ್ದು, ಬುಧವಾರ ಸಂಜೆಯಿಂದ ರಾತ್ರಿಯವರೆಗೂ ಮಳೆ ಆಗಿತ್ತು.</p>.<p>ಗುರುವಾರವೂ ಮೋಡ ಕವಿದ ವಾತಾವರಣವಿತ್ತು. ಸಂಜೆಯಿಂದ ಆರಂಭವಾದ ಮಳೆ ಕೆಲವೆಡೆ ಜೋರಾಗಿ ಸುರಿಯಿತು. ಹಲವೆಡೆ ತುಂತುರು ಮಳೆಯಾಯಿತು.</p>.<p>ನಗರದಲ್ಲಿ ನಿತ್ಯ ರಾತ್ರಿ 8 ಗಂಟೆ ನಂತರ ಕರ್ಫ್ಯೂ ಜಾರಿಯಲ್ಲಿದ್ದು, ಹೀಗಾಗಿ ಜನರ ಓಡಾಟ ಕಡಿಮೆ ಇತ್ತು. ಅದೇ ಸಂದರ್ಭದಲ್ಲೇ ಮಳೆ ಹೆಚ್ಚಿನ ಪ್ರಮಾಣದಲ್ಲಿ ಸುರಿಯಿತು. ಪ್ರಮುಖ ರಸ್ತೆಗಳಲ್ಲಿ ನೀರು ಹರಿಯಿತು.</p>.<p>ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ನಂದಿನಿ ಲೇಔಟ್, ಹೆಬ್ಬಾಳ, ಅಶೋಕನಗರ, ಶಿವಾಜಿನಗರ, ಕೋರಮಂಗಲ, ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ, ಹೆಣ್ಣೂರು, ಬಾಣಸವಾಡಿ ಹಾಗೂ ಹಲವು ಪ್ರದೇಶಗಳಲ್ಲಿ ಮಳೆ ಆಯಿತು.</p>.<p>‘ರಸ್ತೆಯಲ್ಲಿ ನೀರು ಹರಿದಿದ್ದು ಬಿಟ್ಟರೆ ಬೇರೆ ಸಮಸ್ಯೆಗಳ ಬಗ್ಗೆ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>