<p>ಬೆಂಗಳೂರು: ಮಳೆ-ಗಾಳಿಗೆ ಬಿದ್ದಿರುವ ಮರಗಳು ಹಾಗೂ ರೆಂಬೆ-ಕೊಂಬೆ ತೆರವು ಕಾರ್ಯಾಚರಣೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದುವರಿದಿದ್ದು, ಈವರೆಗೂ 136 ಮರ, 264 ರೆಂಬೆ– ಕೊಂಬೆ ತೆರವುಗೊಳಿಸಲಾಗಿದೆ.</p>.<p>ಪಾಲಿಕೆ ವ್ಯಾಪ್ತಿಯಲ್ಲಿ ಎರಡು ವಾರದಲ್ಲಿ ಮಳೆ- ಗಾಳಿಗೆ 136 ಮರಗಳು ಹಾಗೂ 269 ರೆಂಬೆ-ಕೊಂಬೆಗಳು ಬಿದ್ದಿದ್ದವು. ರಸ್ತೆಯಲ್ಲಿ ಬಿದ್ದ ಮರ, ರೆಂಬೆ- ಕೊಂಬೆಗಳನ್ನು ಕತ್ತರಿಸಿ ರಸ್ತೆ ಪಕ್ಕದಲ್ಲಿ ಹಾಕಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ನಂತರ, ಆದ್ಯತೆ ಮೇರೆಗೆ ಎಲ್ಲ ಮರ, ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೇಂದ್ರ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.</p>.<p>ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕಾರಿ ಮರ, ರೆಂಬೆ-ಕೊಂಬೆಗಳು ಕಂಡುಬಂದಲ್ಲಿ ಅವುಗಳನ್ನು ತೆರವುಗೊಳಿಸಲಾಗುವುದು. ಈ ಬಗ್ಗೆ ಪಾಲಿಕೆ ಅರಣ್ಯ ವಿಭಾಗದ ಅಧಿಕಾರಿಗಳು ಇಲ್ಲವೇ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-4-158613738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಳೆ-ಗಾಳಿಗೆ ಬಿದ್ದಿರುವ ಮರಗಳು ಹಾಗೂ ರೆಂಬೆ-ಕೊಂಬೆ ತೆರವು ಕಾರ್ಯಾಚರಣೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದುವರಿದಿದ್ದು, ಈವರೆಗೂ 136 ಮರ, 264 ರೆಂಬೆ– ಕೊಂಬೆ ತೆರವುಗೊಳಿಸಲಾಗಿದೆ.</p>.<p>ಪಾಲಿಕೆ ವ್ಯಾಪ್ತಿಯಲ್ಲಿ ಎರಡು ವಾರದಲ್ಲಿ ಮಳೆ- ಗಾಳಿಗೆ 136 ಮರಗಳು ಹಾಗೂ 269 ರೆಂಬೆ-ಕೊಂಬೆಗಳು ಬಿದ್ದಿದ್ದವು. ರಸ್ತೆಯಲ್ಲಿ ಬಿದ್ದ ಮರ, ರೆಂಬೆ- ಕೊಂಬೆಗಳನ್ನು ಕತ್ತರಿಸಿ ರಸ್ತೆ ಪಕ್ಕದಲ್ಲಿ ಹಾಕಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ನಂತರ, ಆದ್ಯತೆ ಮೇರೆಗೆ ಎಲ್ಲ ಮರ, ರೆಂಬೆ-ಕೊಂಬೆಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೇಂದ್ರ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್ ತಿಳಿಸಿದ್ದಾರೆ.</p>.<p>ಮುಂಜಾಗ್ರತಾ ಕ್ರಮವಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕಾರಿ ಮರ, ರೆಂಬೆ-ಕೊಂಬೆಗಳು ಕಂಡುಬಂದಲ್ಲಿ ಅವುಗಳನ್ನು ತೆರವುಗೊಳಿಸಲಾಗುವುದು. ಈ ಬಗ್ಗೆ ಪಾಲಿಕೆ ಅರಣ್ಯ ವಿಭಾಗದ ಅಧಿಕಾರಿಗಳು ಇಲ್ಲವೇ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-4-158613738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>