<p><strong>ಬೆಂಗಳೂರು:</strong> ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮುಂಗಾರು ಸನ್ನದ್ಧತೆಯನ್ನು ಮತ್ತಷ್ಟು ಬಲಪಡಿಸಲು ‘ಪ್ರಹರಿ’ ವಾಹನಗಳ ಪರೇಡ್ ಆಯೋಜಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದರು.</p>.<p>ಗುರುವಾರ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಹರಿ ವಾಹನಗಳಲ್ಲಿರುವ ಎಲ್ಲ ಅಗತ್ಯ ಉಪಕರಣಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಮಳೆ ಸಂಬಂಧಿತ ತುರ್ತು ಪರಿಸ್ಥಿತಿ ಎದುರಿಸಲು ಸಂಪೂರ್ಣ ಕಾರ್ಯ ಸನ್ನದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ನಿರ್ದೇಶಿಸಿದರು.</p>.<p>ಮರ ಕಟಾವು ಯಂತ್ರೋಪಕರಣ ಗಳು, ವಾಹನಗಳು, ಹಾಗೂ ಸಂಬಂಧಿತ ತುರ್ತು ಸೇವಾ ಸಾಧನಗಳನ್ನು ಕೂಡ ವಿವರವಾಗಿ ಪರಿಶೀಲಿಸಿ, ಒಂದು ವಾರದೊಳಗಾಗಿ ಸಮಗ್ರ ಸಿದ್ಧತಾ ವರದಿಯನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪ್ರವಾಹ ಉಂಟಾಗುವ ಮತ್ತು ನೀರು ನಿಲ್ಲುವ ರೈಲ್ವೆ ತಗ್ಗು ಪ್ರದೇಶಗಳಿಗೆ ಸಂಬಂಧಿತ ನಗರ ಪಾಲಿಕೆ ಅಧಿಕಾರಿಗಳು ಹಾಗೂ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಜಂಟಿಯಾಗಿ ಪರಿಶೀಲಿಸಬೇಕು. ಸಮಸ್ಯೆಗಳನ್ನು ಸಮನ್ವಯದಿಂದ ಪರಿಹರಿಸಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.</p>.<p>ನಿಯಂತ್ರಣ ಕೊಠಡಿಗಳನ್ನು ಪರಿಶೀಲಿಸಿ, ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಅಗತ್ಯ ಸೌಲಭ್ಯಗಳು, ತುರ್ತು ವ್ಯವಸ್ಥೆಗಳು ಹಾಗೂ ಸಿಬ್ಬಂದಿ ಸಿದ್ಧವಾಗಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ನಗರದ ಎಲ್ಲ ಪ್ರವಾಹ ಪೀಡಿತ ಪ್ರದೇಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು. ಪ್ರವಾಹ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಒ ಕರೀಗೌಡ, ನಗರ ಪಾಲಿಕೆಗಳ ಆಯುಕ್ತರು, ಮುಖ್ಯ ಎಂಜಿನಿಯರ್ಗಳು, ರೈಲ್ವೆ, ಜಲಮಂಡಳಿ, ಬಿಡಿಎ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><strong>‘ಅಗತ್ಯವಿದ್ದರೆ ಇನ್ನಷ್ಟು ಖರೀದಿಸಿ’</strong></p><p>ನಗರದ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಸಂಖ್ಯೆಯಲ್ಲಿ ಲಿಟ್ಟರ್ ಪಿಕ್ಕರ್ಗಳನ್ನು (ಕಸ ಎತ್ತುವ ಯಂತ್ರ) ಖರೀದಿಸುವ ಕುರಿತು ಪರಿಶೀಲನೆ ನಡೆಸಬೇಕು. ರಸ್ತೆ ತಡೆ ಗೋಡೆಗಳ ಸ್ವಚ್ಛತೆ, ಸಮರ್ಪಕ ನಿರ್ವಹಣೆ ಹಾಗೂ ಅಗತ್ಯವಿದ್ದಲ್ಲಿ ಹೂಳೆತ್ತುವಿಕೆ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳು ಹಾಗೂ ಅಪಾಯಕಾರಿ ಕಾಂಪೌಂಡ್ಗಳನ್ನು ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.</p>.<div><blockquote>ರಸ್ತೆಗಳ ಗುಣಮಟ್ಟ ಕಾಪಾಡಲು, ಸಮನ್ವಯದ ಮೂಲಕ ಕಾಮಗಾರಿಗಳನ್ನು ಖಚಿತಪಡಿಸಲು ಪೂರ್ವಾನುಮತಿ ಇಲ್ಲದೆ ರಸ್ತೆ ಕತ್ತರಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಎಂ. ಮಹೇಶ್ವರ ರಾವ್, ಜಿಬಿಎ ಮುಖ್ಯ ಆಯುಕ್ತ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-4-1813393535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮುಂಗಾರು ಸನ್ನದ್ಧತೆಯನ್ನು ಮತ್ತಷ್ಟು ಬಲಪಡಿಸಲು ‘ಪ್ರಹರಿ’ ವಾಹನಗಳ ಪರೇಡ್ ಆಯೋಜಿಸಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ತಿಳಿಸಿದರು.</p>.<p>ಗುರುವಾರ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಹರಿ ವಾಹನಗಳಲ್ಲಿರುವ ಎಲ್ಲ ಅಗತ್ಯ ಉಪಕರಣಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಮಳೆ ಸಂಬಂಧಿತ ತುರ್ತು ಪರಿಸ್ಥಿತಿ ಎದುರಿಸಲು ಸಂಪೂರ್ಣ ಕಾರ್ಯ ಸನ್ನದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ನಿರ್ದೇಶಿಸಿದರು.</p>.<p>ಮರ ಕಟಾವು ಯಂತ್ರೋಪಕರಣ ಗಳು, ವಾಹನಗಳು, ಹಾಗೂ ಸಂಬಂಧಿತ ತುರ್ತು ಸೇವಾ ಸಾಧನಗಳನ್ನು ಕೂಡ ವಿವರವಾಗಿ ಪರಿಶೀಲಿಸಿ, ಒಂದು ವಾರದೊಳಗಾಗಿ ಸಮಗ್ರ ಸಿದ್ಧತಾ ವರದಿಯನ್ನು ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಪ್ರವಾಹ ಉಂಟಾಗುವ ಮತ್ತು ನೀರು ನಿಲ್ಲುವ ರೈಲ್ವೆ ತಗ್ಗು ಪ್ರದೇಶಗಳಿಗೆ ಸಂಬಂಧಿತ ನಗರ ಪಾಲಿಕೆ ಅಧಿಕಾರಿಗಳು ಹಾಗೂ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಜಂಟಿಯಾಗಿ ಪರಿಶೀಲಿಸಬೇಕು. ಸಮಸ್ಯೆಗಳನ್ನು ಸಮನ್ವಯದಿಂದ ಪರಿಹರಿಸಬೇಕು. ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.</p>.<p>ನಿಯಂತ್ರಣ ಕೊಠಡಿಗಳನ್ನು ಪರಿಶೀಲಿಸಿ, ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಅಗತ್ಯ ಸೌಲಭ್ಯಗಳು, ತುರ್ತು ವ್ಯವಸ್ಥೆಗಳು ಹಾಗೂ ಸಿಬ್ಬಂದಿ ಸಿದ್ಧವಾಗಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ನಗರದ ಎಲ್ಲ ಪ್ರವಾಹ ಪೀಡಿತ ಪ್ರದೇಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಬೇಕು. ಪ್ರವಾಹ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದರು.</p>.<p>ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಒ ಕರೀಗೌಡ, ನಗರ ಪಾಲಿಕೆಗಳ ಆಯುಕ್ತರು, ಮುಖ್ಯ ಎಂಜಿನಿಯರ್ಗಳು, ರೈಲ್ವೆ, ಜಲಮಂಡಳಿ, ಬಿಡಿಎ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><strong>‘ಅಗತ್ಯವಿದ್ದರೆ ಇನ್ನಷ್ಟು ಖರೀದಿಸಿ’</strong></p><p>ನಗರದ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಸಂಖ್ಯೆಯಲ್ಲಿ ಲಿಟ್ಟರ್ ಪಿಕ್ಕರ್ಗಳನ್ನು (ಕಸ ಎತ್ತುವ ಯಂತ್ರ) ಖರೀದಿಸುವ ಕುರಿತು ಪರಿಶೀಲನೆ ನಡೆಸಬೇಕು. ರಸ್ತೆ ತಡೆ ಗೋಡೆಗಳ ಸ್ವಚ್ಛತೆ, ಸಮರ್ಪಕ ನಿರ್ವಹಣೆ ಹಾಗೂ ಅಗತ್ಯವಿದ್ದಲ್ಲಿ ಹೂಳೆತ್ತುವಿಕೆ ಕಾರ್ಯ ಕೈಗೊಳ್ಳಬೇಕು. ನಗರದಲ್ಲಿರುವ ಶಿಥಿಲಾವಸ್ಥೆಯ ಕಟ್ಟಡಗಳು ಹಾಗೂ ಅಪಾಯಕಾರಿ ಕಾಂಪೌಂಡ್ಗಳನ್ನು ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.</p>.<div><blockquote>ರಸ್ತೆಗಳ ಗುಣಮಟ್ಟ ಕಾಪಾಡಲು, ಸಮನ್ವಯದ ಮೂಲಕ ಕಾಮಗಾರಿಗಳನ್ನು ಖಚಿತಪಡಿಸಲು ಪೂರ್ವಾನುಮತಿ ಇಲ್ಲದೆ ರಸ್ತೆ ಕತ್ತರಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಎಂ. ಮಹೇಶ್ವರ ರಾವ್, ಜಿಬಿಎ ಮುಖ್ಯ ಆಯುಕ್ತ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-4-1813393535</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>