<p><strong>ಬೆಂಗಳೂರು</strong>: ನಗರದಲ್ಲಿ ಮೇ 25ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.</p><p>ನಗರದಲ್ಲಿ ಮೇ 21ರಂದು (ಗುರುವಾರ) ಭಾರಿ ಮಳೆ ಸುರಿದು ಹಲವೆಡೆ ಮರಗಳು ಉರುಳಿ, ವಿದ್ಯುತ್ ವ್ಯತ್ಯಯವಾಗಿದೆ. ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಸಂಚಾರದ ಮೇಲೂ ಪರಿಣಾಮ ಉಂಟಾಗಿತ್ತು. ಬೆಂಗಳೂರಿನಲ್ಲಿ ಗುರುವಾರ ರಾತ್ರಿ 8.30 ರವರೆಗೆ 4.42 ಸೆಂ.ಮೀ ಮಳೆಯಾಗಿದೆ ಎಂದು ಐಎಂಡಿ ಮಾಹಿತಿ ನೀಡಿದೆ.</p><p>ಹಲವು ಪ್ರದೇಶಗಳಲ್ಲಿ ಮಧ್ಯರಾತ್ರಿ ವೇಳೆಗೆ ಮಳೆ ತೀವ್ರಗೊಂಡಿದ್ದು, ಬೆಳಗಿನ ಜಾವ 3ರವರೆಗೂ ಸುರಿದಿದೆ. ಬಿರುಗಾಳಿಗೆ ಮರಗಳು ಉರುಳಿವೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇಂದಿರಾನಗರ ಸುತ್ತಮುತ್ತ ನಾಲ್ಕು ಮರಗಳು, ಮಡಿವಾಳ ಬಿಟಿಎಂ ಬಡಾವಣೆ, ಮಹಾಲಕ್ಷ್ಮೀ ಲೇಔಟ್ ಸಹಿತ ಅನೇಕ ಕಡೆಗಳಲ್ಲಿ ಮರಗಳು ಮುರಿದು ರಸ್ತೆ ಮೇಲೆ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಶಾಂತಲಾ ನಗರದಲ್ಲಿ ಬ್ರಿಗೇಡ್ ರಸ್ತೆ ಬಳಿ ಪಾರ್ಕಿಂಗ್ ಸ್ಥಳದಲ್ಲಿ ಮರದ ಕೊಂಬೆ ಮುರಿದು ಬಿದ್ದು ಕಾರು ಹಾಗೂ ಹಲವು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ. ರಾಜಾಜಿನಗರದಲ್ಲಿ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಶಿವಾನಂದ ಸರ್ಕಲ್ ಸಹಿತ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ.</p><p>ಹಲವು ಕಡೆಗಳಲ್ಲಿ ಪರ್ಯಾಯ ರಸ್ತೆಗಳಲ್ಲಿ ವಾಹನಗಳು ಸಂಚರಿಸುವಂತಾಯಿತು.</p><p>ಚರಂಡಿ ವ್ಯವಸ್ಥೆ ಸರಿ ಇಲ್ಲದೇ ಹಲವು ಕಡೆಗಳಲ್ಲಿ ನೀರು ರಸ್ತೆಯಲ್ಲೇ ನಿಂತಿತ್ತು. ಕೆಲವು ಕಡೆ ವಾಹನಗಳು ನೀರಿನ ಮೇಲೆಯೇ ಸಾಗಿದವು. ಕೆಲವೆಡೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಮೇ 25ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.</p><p>ನಗರದಲ್ಲಿ ಮೇ 21ರಂದು (ಗುರುವಾರ) ಭಾರಿ ಮಳೆ ಸುರಿದು ಹಲವೆಡೆ ಮರಗಳು ಉರುಳಿ, ವಿದ್ಯುತ್ ವ್ಯತ್ಯಯವಾಗಿದೆ. ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿ ಸಂಚಾರದ ಮೇಲೂ ಪರಿಣಾಮ ಉಂಟಾಗಿತ್ತು. ಬೆಂಗಳೂರಿನಲ್ಲಿ ಗುರುವಾರ ರಾತ್ರಿ 8.30 ರವರೆಗೆ 4.42 ಸೆಂ.ಮೀ ಮಳೆಯಾಗಿದೆ ಎಂದು ಐಎಂಡಿ ಮಾಹಿತಿ ನೀಡಿದೆ.</p><p>ಹಲವು ಪ್ರದೇಶಗಳಲ್ಲಿ ಮಧ್ಯರಾತ್ರಿ ವೇಳೆಗೆ ಮಳೆ ತೀವ್ರಗೊಂಡಿದ್ದು, ಬೆಳಗಿನ ಜಾವ 3ರವರೆಗೂ ಸುರಿದಿದೆ. ಬಿರುಗಾಳಿಗೆ ಮರಗಳು ಉರುಳಿವೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇಂದಿರಾನಗರ ಸುತ್ತಮುತ್ತ ನಾಲ್ಕು ಮರಗಳು, ಮಡಿವಾಳ ಬಿಟಿಎಂ ಬಡಾವಣೆ, ಮಹಾಲಕ್ಷ್ಮೀ ಲೇಔಟ್ ಸಹಿತ ಅನೇಕ ಕಡೆಗಳಲ್ಲಿ ಮರಗಳು ಮುರಿದು ರಸ್ತೆ ಮೇಲೆ ಬಿದ್ದಿದ್ದರಿಂದ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಶಾಂತಲಾ ನಗರದಲ್ಲಿ ಬ್ರಿಗೇಡ್ ರಸ್ತೆ ಬಳಿ ಪಾರ್ಕಿಂಗ್ ಸ್ಥಳದಲ್ಲಿ ಮರದ ಕೊಂಬೆ ಮುರಿದು ಬಿದ್ದು ಕಾರು ಹಾಗೂ ಹಲವು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ. ರಾಜಾಜಿನಗರದಲ್ಲಿ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಶಿವಾನಂದ ಸರ್ಕಲ್ ಸಹಿತ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ.</p><p>ಹಲವು ಕಡೆಗಳಲ್ಲಿ ಪರ್ಯಾಯ ರಸ್ತೆಗಳಲ್ಲಿ ವಾಹನಗಳು ಸಂಚರಿಸುವಂತಾಯಿತು.</p><p>ಚರಂಡಿ ವ್ಯವಸ್ಥೆ ಸರಿ ಇಲ್ಲದೇ ಹಲವು ಕಡೆಗಳಲ್ಲಿ ನೀರು ರಸ್ತೆಯಲ್ಲೇ ನಿಂತಿತ್ತು. ಕೆಲವು ಕಡೆ ವಾಹನಗಳು ನೀರಿನ ಮೇಲೆಯೇ ಸಾಗಿದವು. ಕೆಲವೆಡೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>