ಮುಖ್ಯಮಂತ್ರಿಯವರು ನಗರದಲ್ಲಿ ಒಂದಿಷ್ಟು ಕಾಟಾಚಾರಕ್ಕೆ ಸಂಚಾರ ಮಾಡುತ್ತಿದ್ದಾರೆ. ಅವರಿಗೆ ಮಳೆ ಅನಾಹುತ ಬಗೆಹರಿಸುವ ಮನಸ್ಸಿಲ್ಲ. ಬಜೆಟ್ ಅನುಷ್ಠಾನ ಮಾಡಲು ಸಭೆ ಮಾಡಿದ್ದಾರಾ? ಚುನಾವಣೆ ಹತ್ತಿರದಲ್ಲೇ ಇರುವುದರಿಂದ ಪಕ್ಷಕ್ಕೆ ದೇಣಿಗೆ ಸಂಗ್ರಹಿಸಲು, ಕಮಿಷನ್ ಹೊಡೆಯಲು ಈ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.