<p><strong>ಬೆಂಗಳೂರು:</strong> ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾನನ್ನು ಹೆಚ್ಚಿನ ವಿಚಾರಣೆಗಾಗಿ ಪುನಃ ಏಪ್ರಿಲ್ 29ರವರೆಗೆ ಎನ್ಐಎ ಕಸ್ಟಡಿಗೆ ನೀಡಲಾಗಿದೆ.</p>.<p>ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಬ್ಬರನ್ನೂ ಏಪ್ರಿಲ್ 12ರಂದು ಬಂಧಿಸಲಾಗಿತ್ತು. ನಂತರ, ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಏಪ್ರಿಲ್ 22ರವರೆಗೆ ಕಸ್ಟಡಿಗೆ ಪಡೆಯಲಾಗಿತ್ತು.</p>.<p>ಕಸ್ಟಡಿ ಅವಧಿ ಮುಗಿದಿದ್ದರಿಂದ ಇಬ್ಬರನ್ನೂ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಲಾಯಿತು.</p>.<p>‘ಸ್ಫೋಟ ಹಾಗೂ ಸಂಚಿನ ಬಗ್ಗೆ ಶಂಕಿತರು ಹಲವು ಮಾಹಿತಿ ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆಯುತ್ತಿದೆ. ಜೊತೆಗೆ, ಇದು ದೇಶದ ಭದ್ರತೆಗೆ ಸಂಬಂಧಪಟ್ಟ ಪ್ರಕರಣ. ಶಂಕಿತರು ಮತ್ತಷ್ಟು ಕಡೆಗಳಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿರುವ ಮಾಹಿತಿ ಇದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕಿದ್ದು, ಇಬ್ಬರನ್ನೂ ಪುನಃ ಕಸ್ಟಡಿಗೆ ನೀಡಬೇಕು’ ಎಂದು ಎನ್ಐಎ ಅಧಿಕಾರಿಗಳು ಕೋರಿದರು.</p>.<p>ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಶಂಕಿತರನ್ನು ಎನ್ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಾದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾನನ್ನು ಹೆಚ್ಚಿನ ವಿಚಾರಣೆಗಾಗಿ ಪುನಃ ಏಪ್ರಿಲ್ 29ರವರೆಗೆ ಎನ್ಐಎ ಕಸ್ಟಡಿಗೆ ನೀಡಲಾಗಿದೆ.</p>.<p>ಮಾರ್ಚ್ 1ರಂದು ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದಲ್ಲಿ ಇಬ್ಬರನ್ನೂ ಏಪ್ರಿಲ್ 12ರಂದು ಬಂಧಿಸಲಾಗಿತ್ತು. ನಂತರ, ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಏಪ್ರಿಲ್ 22ರವರೆಗೆ ಕಸ್ಟಡಿಗೆ ಪಡೆಯಲಾಗಿತ್ತು.</p>.<p>ಕಸ್ಟಡಿ ಅವಧಿ ಮುಗಿದಿದ್ದರಿಂದ ಇಬ್ಬರನ್ನೂ ನ್ಯಾಯಾಧೀಶರ ಎದುರು ಸೋಮವಾರ ಹಾಜರುಪಡಿಸಲಾಯಿತು.</p>.<p>‘ಸ್ಫೋಟ ಹಾಗೂ ಸಂಚಿನ ಬಗ್ಗೆ ಶಂಕಿತರು ಹಲವು ಮಾಹಿತಿ ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆಯುತ್ತಿದೆ. ಜೊತೆಗೆ, ಇದು ದೇಶದ ಭದ್ರತೆಗೆ ಸಂಬಂಧಪಟ್ಟ ಪ್ರಕರಣ. ಶಂಕಿತರು ಮತ್ತಷ್ಟು ಕಡೆಗಳಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿರುವ ಮಾಹಿತಿ ಇದೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕಿದ್ದು, ಇಬ್ಬರನ್ನೂ ಪುನಃ ಕಸ್ಟಡಿಗೆ ನೀಡಬೇಕು’ ಎಂದು ಎನ್ಐಎ ಅಧಿಕಾರಿಗಳು ಕೋರಿದರು.</p>.<p>ಮನವಿ ಪುರಸ್ಕರಿಸಿದ ನ್ಯಾಯಾಧೀಶರು, ಶಂಕಿತರನ್ನು ಎನ್ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>