<p><strong>ಬೆಂಗಳೂರು</strong>: ರಾಮೋಹಳ್ಳಿ ರೈಲ್ವೆ ಗೇಟ್ ಲೆವೆಲ್ ಕ್ರಾಸಿಂಗ್ ತೆರವುಗೊಳಿಸಲು ನಿರ್ಮಿಸುತ್ತಿರುವ ರೈಲ್ವೆ ಕೆಳಸೇತುವೆ (ಆರ್ಯುಬಿ) ಕಾಮಗಾರಿ ಶೀಘ್ರ ಮುಕ್ತಾಯವಾಗಲಿದ್ದು, ಜೂನ್ 30ಕ್ಕೆ ಉದ್ಘಾಟಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.</p>.<p>ರೈಲ್ವೆ, ಜಿಬಿಎ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಲಕ್ಷಾಂತರ ಜನರು ಸಂಚರಿಸುವ ಈ ಮಾರ್ಗದಲ್ಲಿ ಲೆವೆಲ್ ಕ್ರಾಸಿಂಗ್ ಅನ್ನು ತೆರವುಗೊಳಿಸಲು ಕೆಳಸೇತುವೆ (ಆರ್ಯುಬಿ) ನಿರ್ಮಿಸಲಾಗುತ್ತಿದೆ. ಇದರಿಂದಾಗಿ ಆರೇಳು ತಿಂಗಳಿನಿಂದ ಸಂಚಾರಕ್ಕೆ ತೊಡಕಾಗಿತ್ತು. ಈಗ ಅಂತಿಮ ಹಂತಕ್ಕೆ ಬಂದಿದೆ. ಮುಂದಿನ ತಿಂಗಳು ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.</p>.<p>ಗುಬ್ಬಿ ಬಳಿಕ ಬಿಳಿಪಾಳ್ಯ ಗೇಟ್, ಭೀಮಸಂದ್ರ ರೈಲ್ವೆ ಕೆಳಸೇತುವೆ, ಬಂಡಿಹಳ್ಳಿ ಸಂಪರ್ಕರಸ್ತೆ ಕಾಮಗಾರಿಗಳು ಕೂಡ ಎರಡು ಮೂರು ತಿಂಗಳ ಒಳಗೆ ಪೂರ್ಣಗೊಳ್ಳಲಿವೆ. ಸಹಕಾರನಗರದ ಸಬ್ವೇ ಈ ವರ್ಷ ಸಂಚಾರಕ್ಕೆ ತೆರೆದುಕೊಳ್ಳಲಿದೆ ಎಂದು ವಿವರ ನೀಡಿದರು.</p>.<p>‘ಬೆಂಗಳೂರಿನಿಂದ ನೂರು ಕಿ.ಮೀ. ವ್ಯಾಪ್ತಿಯಲ್ಲಿರುವ 100 ಲೆವೆಲ್ ಕ್ರಾಸಿಂಗ್ (ಎಲ್ಸಿ) ತೆರವುಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ. 46 ಕಡೆಗಳಿಗೆ ರೈಲ್ವೆ ಮೇಲ್ಸೇತುವೆ/ಕೆಳಸೇತುವೆ (ಆರ್ಒಬಿ/ಆರ್ಯುಬಿ) ಮಂಜೂರಾಗಿದೆ. ಎಂಟು ಅಂತಿಮ ಪಟ್ಟಿಯಲ್ಲಿದ್ದು, 24 ಎಲ್ಸಿಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲಾಗುತ್ತಿದೆ. ಜಮೀನು ಸಮಸ್ಯೆಯಿಂದಾಗಿ ಎರಡು ಎಲ್ಸಿಗಳನ್ನು ತೆರವುಗೊಳಿಸುವುದು ಕಷ್ಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ, ಸರ್ಕಾರಿ ಜಮೀನುಗಳನ್ನು ಪಡೆದು ಎಲ್ಸಿ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಈಗಾಗಲೇ 707 ಎಲ್ಸಿ ತೆರವು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ನಗರದ ಕೆಲವು ಕಡೆಗಳಲ್ಲಿ ಜಿಬಿಎ ಸಹಕಾರ ಬೇಕಾಗುತ್ತದೆ. ಇದೇ ರೀತಿ ಯಾವ ಯಾವ ಇಲಾಖೆಯ ಸಹಕಾರ ಬೇಕು ಎಂದು ನೋಡಿ ಪ್ರತಿ ಮೂರು ತಿಂಗಳಿಗೊಮ್ಮೆ ಆ ಇಲಾಖೆಗಳ ಅಧಿಕಾರಿಗಳು ಮತ್ತು ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಸಮನ್ವಯದೊಂದಿಗೆ ಕೆಲಸ ಮಾಡಲಾಗುವುದು’ ಎಂದರು.</p>.<p>‘ವಿವಿಧ ಅಡೆತಡೆಗಳಿಂದಾಗಿ ರೈಲುಗಳ ವೇಗ ಗಂಟೆಗೆ ಸರಾಸರಿ 110 ಕಿ.ಮೀ. ಇತ್ತು. ಅದನ್ನು 130ಕ್ಕೆ ಏರಿಸಲಾಗಿದೆ. ತುಮಕೂರು–ಬೆಂಗಳೂರು ನಡುವೆ ನಾಲ್ಕು ಪಥ ನಿರ್ಮಿಸಲಾಗುವುದು. ತುಮಕೂರು–ಕೋಲಾರಕ್ಕೆ ನೇರ ಮಾರ್ಗವಿಲ್ಲ. ಸುತ್ತು ಹಾಕಿಕೊಂಡು ಹೋಗಲಾಗುತ್ತಿದೆ. ನೇರ ಮಾರ್ಗ ಮಾಡಲು ಚಿಂತನೆ ನಡೆಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಬೆಂಗಳೂರು ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಶೀಘ್ರವೇ ಸಭೆ ನಡೆಸಲಾಗುವುದು ಎಂದರು.</p>.<p>ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-14-744319887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಮೋಹಳ್ಳಿ ರೈಲ್ವೆ ಗೇಟ್ ಲೆವೆಲ್ ಕ್ರಾಸಿಂಗ್ ತೆರವುಗೊಳಿಸಲು ನಿರ್ಮಿಸುತ್ತಿರುವ ರೈಲ್ವೆ ಕೆಳಸೇತುವೆ (ಆರ್ಯುಬಿ) ಕಾಮಗಾರಿ ಶೀಘ್ರ ಮುಕ್ತಾಯವಾಗಲಿದ್ದು, ಜೂನ್ 30ಕ್ಕೆ ಉದ್ಘಾಟಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.</p>.<p>ರೈಲ್ವೆ, ಜಿಬಿಎ ಅಧಿಕಾರಿಗಳೊಂದಿಗೆ ಶನಿವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಲಕ್ಷಾಂತರ ಜನರು ಸಂಚರಿಸುವ ಈ ಮಾರ್ಗದಲ್ಲಿ ಲೆವೆಲ್ ಕ್ರಾಸಿಂಗ್ ಅನ್ನು ತೆರವುಗೊಳಿಸಲು ಕೆಳಸೇತುವೆ (ಆರ್ಯುಬಿ) ನಿರ್ಮಿಸಲಾಗುತ್ತಿದೆ. ಇದರಿಂದಾಗಿ ಆರೇಳು ತಿಂಗಳಿನಿಂದ ಸಂಚಾರಕ್ಕೆ ತೊಡಕಾಗಿತ್ತು. ಈಗ ಅಂತಿಮ ಹಂತಕ್ಕೆ ಬಂದಿದೆ. ಮುಂದಿನ ತಿಂಗಳು ಕಾಮಗಾರಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು.</p>.<p>ಗುಬ್ಬಿ ಬಳಿಕ ಬಿಳಿಪಾಳ್ಯ ಗೇಟ್, ಭೀಮಸಂದ್ರ ರೈಲ್ವೆ ಕೆಳಸೇತುವೆ, ಬಂಡಿಹಳ್ಳಿ ಸಂಪರ್ಕರಸ್ತೆ ಕಾಮಗಾರಿಗಳು ಕೂಡ ಎರಡು ಮೂರು ತಿಂಗಳ ಒಳಗೆ ಪೂರ್ಣಗೊಳ್ಳಲಿವೆ. ಸಹಕಾರನಗರದ ಸಬ್ವೇ ಈ ವರ್ಷ ಸಂಚಾರಕ್ಕೆ ತೆರೆದುಕೊಳ್ಳಲಿದೆ ಎಂದು ವಿವರ ನೀಡಿದರು.</p>.<p>‘ಬೆಂಗಳೂರಿನಿಂದ ನೂರು ಕಿ.ಮೀ. ವ್ಯಾಪ್ತಿಯಲ್ಲಿರುವ 100 ಲೆವೆಲ್ ಕ್ರಾಸಿಂಗ್ (ಎಲ್ಸಿ) ತೆರವುಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ. 46 ಕಡೆಗಳಿಗೆ ರೈಲ್ವೆ ಮೇಲ್ಸೇತುವೆ/ಕೆಳಸೇತುವೆ (ಆರ್ಒಬಿ/ಆರ್ಯುಬಿ) ಮಂಜೂರಾಗಿದೆ. ಎಂಟು ಅಂತಿಮ ಪಟ್ಟಿಯಲ್ಲಿದ್ದು, 24 ಎಲ್ಸಿಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲಾಗುತ್ತಿದೆ. ಜಮೀನು ಸಮಸ್ಯೆಯಿಂದಾಗಿ ಎರಡು ಎಲ್ಸಿಗಳನ್ನು ತೆರವುಗೊಳಿಸುವುದು ಕಷ್ಟ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿ, ಸರ್ಕಾರಿ ಜಮೀನುಗಳನ್ನು ಪಡೆದು ಎಲ್ಸಿ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ಈಗಾಗಲೇ 707 ಎಲ್ಸಿ ತೆರವು ಮಾಡಲಾಗಿದೆ’ ಎಂದು ತಿಳಿಸಿದರು.</p>.<p>‘ನಗರದ ಕೆಲವು ಕಡೆಗಳಲ್ಲಿ ಜಿಬಿಎ ಸಹಕಾರ ಬೇಕಾಗುತ್ತದೆ. ಇದೇ ರೀತಿ ಯಾವ ಯಾವ ಇಲಾಖೆಯ ಸಹಕಾರ ಬೇಕು ಎಂದು ನೋಡಿ ಪ್ರತಿ ಮೂರು ತಿಂಗಳಿಗೊಮ್ಮೆ ಆ ಇಲಾಖೆಗಳ ಅಧಿಕಾರಿಗಳು ಮತ್ತು ರೈಲ್ವೆ ಅಧಿಕಾರಿಗಳ ಸಭೆ ನಡೆಸಿ ಸಮನ್ವಯದೊಂದಿಗೆ ಕೆಲಸ ಮಾಡಲಾಗುವುದು’ ಎಂದರು.</p>.<p>‘ವಿವಿಧ ಅಡೆತಡೆಗಳಿಂದಾಗಿ ರೈಲುಗಳ ವೇಗ ಗಂಟೆಗೆ ಸರಾಸರಿ 110 ಕಿ.ಮೀ. ಇತ್ತು. ಅದನ್ನು 130ಕ್ಕೆ ಏರಿಸಲಾಗಿದೆ. ತುಮಕೂರು–ಬೆಂಗಳೂರು ನಡುವೆ ನಾಲ್ಕು ಪಥ ನಿರ್ಮಿಸಲಾಗುವುದು. ತುಮಕೂರು–ಕೋಲಾರಕ್ಕೆ ನೇರ ಮಾರ್ಗವಿಲ್ಲ. ಸುತ್ತು ಹಾಕಿಕೊಂಡು ಹೋಗಲಾಗುತ್ತಿದೆ. ನೇರ ಮಾರ್ಗ ಮಾಡಲು ಚಿಂತನೆ ನಡೆಸಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಬೆಂಗಳೂರು ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಶೀಘ್ರವೇ ಸಭೆ ನಡೆಸಲಾಗುವುದು ಎಂದರು.</p>.<p>ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅಶುತೋಷ್ ಕುಮಾರ್ ಸಿಂಗ್, ಮುಖ್ಯ ಆಡಳಿತಾಧಿಕಾರಿ ಅಜಯ್ ಶರ್ಮ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-14-744319887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>