<p><strong>ಬೆಂಗಳೂರು:</strong> ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ಆ ಪೈಕಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗ ನಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.</p><p>ತಂದೆ ಕುಮಾರಪ್ಪ (60) ಹಾಗೂ ಅವರ ಪುತ್ರ ಅರುಣ್ ಕುಮಾರ್ (30) ಮೃತಪಟ್ಟಿದ್ದಾರೆ. ಕುಮಾರಪ್ಪ ಅವರ ಪತ್ನಿ ರಮಾ (55) ಹಾಗೂ ಅಕ್ಷಯ್ ಕುಮಾರ್ (25) ಅವರ ಸ್ಥಿತಿ ಗಂಭೀರವಾಗಿದ್ದು ಹೆಬ್ಬಾಳದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.</p><p>ಅರುಣ್ ನೇಣು ಹಾಕಿಕೊಂಡಿದ್ದರೆ, ಉಳಿದ ಮೂವರು ವಿಷ ಕುಡಿದಿದ್ದರು ಎಂದು ಪೊಲೀಸರು ಹೇಳಿದರು.</p><p>ಸ್ಥಳಕ್ಕೆ ಚಿಕ್ಕಜಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p><p>ಕುಮಾರ್ ಅವರು ದೇವನಹಳ್ಳಿ ತಾಲ್ಲೂಕಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿದ್ದರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ಹೇಳಿವೆ.</p><p>ಘಟನೆ ನಡೆದ ಮನೆಯಲ್ಲಿ ಮದ್ಯದ ಹಾಗೂ ವಿಷದ ಬಾಟಲಿಗಳು ಪತ್ತೆಯಾಗಿವೆ. ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ಆ ಪೈಕಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆಗ್ಗ ನಹಳ್ಳಿಯಲ್ಲಿ ಗುರುವಾರ ರಾತ್ರಿ ನಡೆದಿದೆ.</p><p>ತಂದೆ ಕುಮಾರಪ್ಪ (60) ಹಾಗೂ ಅವರ ಪುತ್ರ ಅರುಣ್ ಕುಮಾರ್ (30) ಮೃತಪಟ್ಟಿದ್ದಾರೆ. ಕುಮಾರಪ್ಪ ಅವರ ಪತ್ನಿ ರಮಾ (55) ಹಾಗೂ ಅಕ್ಷಯ್ ಕುಮಾರ್ (25) ಅವರ ಸ್ಥಿತಿ ಗಂಭೀರವಾಗಿದ್ದು ಹೆಬ್ಬಾಳದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು.</p><p>ಅರುಣ್ ನೇಣು ಹಾಕಿಕೊಂಡಿದ್ದರೆ, ಉಳಿದ ಮೂವರು ವಿಷ ಕುಡಿದಿದ್ದರು ಎಂದು ಪೊಲೀಸರು ಹೇಳಿದರು.</p><p>ಸ್ಥಳಕ್ಕೆ ಚಿಕ್ಕಜಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p><p>ಕುಮಾರ್ ಅವರು ದೇವನಹಳ್ಳಿ ತಾಲ್ಲೂಕಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು. ಉದ್ಯಮದಲ್ಲಿ ನಷ್ಟಕ್ಕೆ ಒಳಗಾಗಿದ್ದರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಮೂಲಗಳು ಹೇಳಿವೆ.</p><p>ಘಟನೆ ನಡೆದ ಮನೆಯಲ್ಲಿ ಮದ್ಯದ ಹಾಗೂ ವಿಷದ ಬಾಟಲಿಗಳು ಪತ್ತೆಯಾಗಿವೆ. ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>