<p><strong>ಬೆಂಗಳೂರು:</strong> ಕುರಿ ಮಾಂಸದ ಹೆಸರಿನಲ್ಲಿ ದನದ ಮಾಂಸದ ಖಾದ್ಯ ನೀಡಿ ಗ್ರಾಹಕರನ್ನು ವಂಚಿಸುತ್ತಿದ್ದ ರೆಸ್ಟೋರೆಂಟ್ ಮಾಲೀಕರಿಬ್ಬರನ್ನು ಆವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೇರಳದ ಜೀಜು (45), ಶೀಬು (44) ಬಂಧಿತರು. ಮತ್ತೊಬ್ಬ ಆರೋಪಿ ಅಭಿಲಾಷ್ ತಲೆ ಮರೆಸಿಕೊಂಡಿದ್ದು, ಇವರ ವಿರುದ್ಧ ಆವಲಹಳ್ಳಿ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.</p>.<p>ಆರೋಪಿಗಳು, ಬೊಮ್ಮೇನಹಳ್ಳಿಯ ಐಸಿರಿ ಹಬ್ನಲ್ಲಿರುವ ಕಾಯಲೋರಂ ರೆಸ್ಟೋರೆಂಟ್ನಲ್ಲಿ ದನದ ಮಾಂಸ ಖಾದ್ಯವನ್ನು ಗ್ರಾಹಕರಿಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>ಈಚೆಗೆ ರೆಸ್ಟೋರೆಂಟ್ಗೆ ಊಟಕ್ಕೆ ಹೋಗಿದ್ದ ಯುವಕರ ಗುಂಪಿಗೆ ಕುರಿ ಮಾಂಸದ ಖಾದ್ಯದ ಬದಲಿಗೆ ದನದ ಮಾಂಸ ನೀಡಲಾಗಿತ್ತು. ಇದನ್ನು ಸೇವಿಸಿದ ಯುವಕರಿಗೆ ಅನುಮಾನ ಬಂದು ಮಾಲೀಕರನ್ನು ಪ್ರಶ್ನಿಸಿದ್ದಲ್ಲದೇ, ಪೊಲೀಸರಿಗೂ ಮಾಹಿತಿ ನೀಡಿದ್ದರು.</p>.<p>ಮೇ 19ರಂದು ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ, ಬಂದ್ ಮಾಡಿಸಿದ್ದಾರೆ. ತನಿಖೆ ವೇಳೆ ಕೊತ್ತನೂರು ಕಡೆಯಿಂದ ದನದ ಮಾಂಸ ಸರಬರಾಜು ಆಗುತ್ತಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅಲ್ಲಿಯೂ ದಾಳಿ ನಡೆಸಲಾಗಿತ್ತು.</p>.<p>ವಿಚಾರಣೆ ವೇಳೆ ಆರೋಪಿಗಳು ಗ್ರಾಹಕರಿಗೆ ದನದ ಮಾಂಸ ಖಾದ್ಯ ನೀಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕುರಿ ಮಾಂಸದ ಹೆಸರಿನಲ್ಲಿ ದನದ ಮಾಂಸದ ಖಾದ್ಯ ನೀಡಿ ಗ್ರಾಹಕರನ್ನು ವಂಚಿಸುತ್ತಿದ್ದ ರೆಸ್ಟೋರೆಂಟ್ ಮಾಲೀಕರಿಬ್ಬರನ್ನು ಆವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೇರಳದ ಜೀಜು (45), ಶೀಬು (44) ಬಂಧಿತರು. ಮತ್ತೊಬ್ಬ ಆರೋಪಿ ಅಭಿಲಾಷ್ ತಲೆ ಮರೆಸಿಕೊಂಡಿದ್ದು, ಇವರ ವಿರುದ್ಧ ಆವಲಹಳ್ಳಿ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.</p>.<p>ಆರೋಪಿಗಳು, ಬೊಮ್ಮೇನಹಳ್ಳಿಯ ಐಸಿರಿ ಹಬ್ನಲ್ಲಿರುವ ಕಾಯಲೋರಂ ರೆಸ್ಟೋರೆಂಟ್ನಲ್ಲಿ ದನದ ಮಾಂಸ ಖಾದ್ಯವನ್ನು ಗ್ರಾಹಕರಿಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು.</p>.<p>ಈಚೆಗೆ ರೆಸ್ಟೋರೆಂಟ್ಗೆ ಊಟಕ್ಕೆ ಹೋಗಿದ್ದ ಯುವಕರ ಗುಂಪಿಗೆ ಕುರಿ ಮಾಂಸದ ಖಾದ್ಯದ ಬದಲಿಗೆ ದನದ ಮಾಂಸ ನೀಡಲಾಗಿತ್ತು. ಇದನ್ನು ಸೇವಿಸಿದ ಯುವಕರಿಗೆ ಅನುಮಾನ ಬಂದು ಮಾಲೀಕರನ್ನು ಪ್ರಶ್ನಿಸಿದ್ದಲ್ಲದೇ, ಪೊಲೀಸರಿಗೂ ಮಾಹಿತಿ ನೀಡಿದ್ದರು.</p>.<p>ಮೇ 19ರಂದು ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿ, ಬಂದ್ ಮಾಡಿಸಿದ್ದಾರೆ. ತನಿಖೆ ವೇಳೆ ಕೊತ್ತನೂರು ಕಡೆಯಿಂದ ದನದ ಮಾಂಸ ಸರಬರಾಜು ಆಗುತ್ತಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಅಲ್ಲಿಯೂ ದಾಳಿ ನಡೆಸಲಾಗಿತ್ತು.</p>.<p>ವಿಚಾರಣೆ ವೇಳೆ ಆರೋಪಿಗಳು ಗ್ರಾಹಕರಿಗೆ ದನದ ಮಾಂಸ ಖಾದ್ಯ ನೀಡುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>