<p><strong>‘ಪಾದಚಾರಿ ಮಾರ್ಗದ ಕಾಂಕ್ರೀಟ್ ಕುಸಿತ’</strong></p><p>ಅತ್ತಿಗುಪ್ಪೆ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿದ್ದ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದ್ದು ಜನರಿಗೆ ತೊಂದರೆಯಾಗುತ್ತಿದೆ. ಪಾದಚಾರಿ ಮಾರ್ಗ ಹಾಳಾಗಿರುವುದರಿಂದ ಜನರು ಮುಖ್ಯರಸ್ತೆಯಲ್ಲಿ ಓಡಾಡುತ್ತಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಪಾಲಿಕೆಯ ಸಂಬಂಧಪಟ್ಟ ಸಿಬ್ಬಂದಿ ಪಾದಚಾರಿ ಮಾರ್ಗವನ್ನು ಸರಿಪಡಿಸಬೇಕು.</p><p><strong>-ದಯಾನಂದ, ಅತ್ತಿಗುಪ್ಪೆ</strong></p><p><strong>‘ಕೆಟ್ಟು ನಿಂತಿರುವ ಕಾರು ಸ್ಥಳಾಂತರಿಸಿ’</strong></p><p>ಬನ್ನಪ್ಪ ಪಾರ್ಕ್ ರಸ್ತೆಯಲ್ಲಿ ಹಲವು ತಿಂಗಳಿಂದ ಕೆಟ್ಟು ಹೋಗಿರುವ ಕಾರೊಂದು ನಿಂತಿದೆ. ಈ ರಸ್ತೆಯು ಕೆಂಪೇಗೌಡ ಹಾಗೂ ಕಬ್ಬನ್ಪೇಟೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲಿದ್ದು, ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಹಳೆಯ ಕಾರು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿರುವುದರಿಂದ ವಾಹನ ದಟ್ಟಣೆ ಆಗುತ್ತಿದೆ. ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ. ನಗರದ ಸೌಂದರ್ಯಕ್ಕೆ ಕಪ್ಪು ಚುಕ್ಕೆಯಾಗಿರುವ ಈ ಕಾರನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಾಂತರಿಸಬೇಕು.</p><p><strong>-ಶಿವಪ್ರಸಾದ್ ಎಸ್., ವಾಹನ ಸವಾರ</strong></p><p><strong>‘ರಸ್ತೆ ಗುಂಡಿ ಮುಚ್ಚಿ’</strong></p><p>ಮಲ್ಲತ್ತಹಳ್ಳಿಯ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಆಗಿದೆ. ಮುದ್ದಿನಪಾಳ್ಯದಿಂದ ಜ್ಞಾನಭಾರತಿ ಆರ್ಟಿಒ ರಸ್ತೆ, ಜಯಂತ್ ಕನ್ವೆನ್ಷನ್ ಹಾಲ್ ಮೂಲಕ ವಿದ್ಯಾನಿಕೇತನ್ ಶಾಲೆಗೆ ತಲುಪುವ ರಸ್ತೆ ಗುಂಡಿಮಯವಾಗಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳಾಗಿರುವ ಪರಿಣಾಮ ವಾಹನ ಸಂಚಾರಕ್ಕೆ ಸಂಚಕಾರ ಬಂದಿದೆ. ರಸ್ತೆ ಅಭಿವೃದ್ಧಿಪಡಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ಈ ರಸ್ತೆ ದುರಸ್ತಿಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.</p><p><strong>-ಎಸ್.ಎಂ. ನಾಗರಾಜ್,ಮಲ್ಲತ್ತಹಳ್ಳಿ</strong></p><p>ನಗರದ ಹೃದಯ ಭಾಗದಲ್ಲಿರುವ ಜೆ.ಸಿ. ರಸ್ತೆಯಲ್ಲಿ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮಿನರ್ವ ವೃತ್ತದಿಂದ ಭಾರತ್ ಜಂಕ್ಷನ್ವರೆಗೆ ರಸ್ತೆಯ ಎಡಭಾಗದಲ್ಲಿ ವಾಹನಗಳ ಬಿಡಿ ಭಾಗ ಮಾರಾಟದ ಮಳಿಗೆಗಳಿದ್ದು, ಈ ಮಳಿಗೆಗಳಿಗೆ ಬರುವ ಕಾರುಗಳನ್ನು ರಸ್ತೆ ಹಾಗೂ ಪಾದಚಾರಿ ಮಾರ್ಗದಲ್ಲಿಯೇ ನಿಲ್ಲಿಸಲಾಗುತ್ತಿದೆ.</p><p>ಮಳಿಗೆಗಳ ಮಾಲೀಕರು ಗ್ರಾಹಕರನ್ನು ಕರೆತರಲು ತಮ್ಮ ಪ್ರತಿನಿಧಿಗಳನ್ನು ರಸ್ತೆಯುದ್ದಕ್ಕೂ ನಿಲ್ಲಿಸುತ್ತಿದ್ದು, ಅವರು ಮಾರ್ಗ ಮಧ್ಯದವರೆಗೂ ಬಂದು ಕಾರುಗಳನ್ನು ತಡೆಯಲು ಪ್ರಯತ್ನಿಸುತ್ತಾರೆ. ಇದರಿಂದ ರಸ್ತೆ ಅಪಘಾತಗಳು ಸಂಭವಿಸುವ ಸಾಧ್ಯತೆಯಿದೆ. ವಾಹನಗಳ ದಟ್ಟಣೆ ಇದ್ದು, ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸಂಚಾರ ಪೊಲೀಸರು ಈ ಬಗ್ಗೆ ಗಮನಹರಿಸುತ್ತಿಲ್ಲ.</p><p><strong>-ಮಂಜುನಾಥ್, ವಾಹನ ಸವಾರ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಪಾದಚಾರಿ ಮಾರ್ಗದ ಕಾಂಕ್ರೀಟ್ ಕುಸಿತ’</strong></p><p>ಅತ್ತಿಗುಪ್ಪೆ ಮೆಟ್ರೊ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪಾದಚಾರಿ ಮಾರ್ಗದಲ್ಲಿ ಅಳವಡಿಸಿದ್ದ ಕಾಂಕ್ರೀಟ್ ಸ್ಲ್ಯಾಬ್ ಕುಸಿದಿದ್ದು ಜನರಿಗೆ ತೊಂದರೆಯಾಗುತ್ತಿದೆ. ಪಾದಚಾರಿ ಮಾರ್ಗ ಹಾಳಾಗಿರುವುದರಿಂದ ಜನರು ಮುಖ್ಯರಸ್ತೆಯಲ್ಲಿ ಓಡಾಡುತ್ತಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಪಾಲಿಕೆಯ ಸಂಬಂಧಪಟ್ಟ ಸಿಬ್ಬಂದಿ ಪಾದಚಾರಿ ಮಾರ್ಗವನ್ನು ಸರಿಪಡಿಸಬೇಕು.</p><p><strong>-ದಯಾನಂದ, ಅತ್ತಿಗುಪ್ಪೆ</strong></p><p><strong>‘ಕೆಟ್ಟು ನಿಂತಿರುವ ಕಾರು ಸ್ಥಳಾಂತರಿಸಿ’</strong></p><p>ಬನ್ನಪ್ಪ ಪಾರ್ಕ್ ರಸ್ತೆಯಲ್ಲಿ ಹಲವು ತಿಂಗಳಿಂದ ಕೆಟ್ಟು ಹೋಗಿರುವ ಕಾರೊಂದು ನಿಂತಿದೆ. ಈ ರಸ್ತೆಯು ಕೆಂಪೇಗೌಡ ಹಾಗೂ ಕಬ್ಬನ್ಪೇಟೆ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲಿದ್ದು, ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಹಳೆಯ ಕಾರು ರಸ್ತೆಯ ಪಕ್ಕದಲ್ಲಿ ನಿಲ್ಲಿಸಿರುವುದರಿಂದ ವಾಹನ ದಟ್ಟಣೆ ಆಗುತ್ತಿದೆ. ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ. ನಗರದ ಸೌಂದರ್ಯಕ್ಕೆ ಕಪ್ಪು ಚುಕ್ಕೆಯಾಗಿರುವ ಈ ಕಾರನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳಾಂತರಿಸಬೇಕು.</p><p><strong>-ಶಿವಪ್ರಸಾದ್ ಎಸ್., ವಾಹನ ಸವಾರ</strong></p><p><strong>‘ರಸ್ತೆ ಗುಂಡಿ ಮುಚ್ಚಿ’</strong></p><p>ಮಲ್ಲತ್ತಹಳ್ಳಿಯ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರಕ್ಕೆ ಸಮಸ್ಯೆ ಆಗಿದೆ. ಮುದ್ದಿನಪಾಳ್ಯದಿಂದ ಜ್ಞಾನಭಾರತಿ ಆರ್ಟಿಒ ರಸ್ತೆ, ಜಯಂತ್ ಕನ್ವೆನ್ಷನ್ ಹಾಲ್ ಮೂಲಕ ವಿದ್ಯಾನಿಕೇತನ್ ಶಾಲೆಗೆ ತಲುಪುವ ರಸ್ತೆ ಗುಂಡಿಮಯವಾಗಿದೆ. ಈ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳಾಗಿರುವ ಪರಿಣಾಮ ವಾಹನ ಸಂಚಾರಕ್ಕೆ ಸಂಚಕಾರ ಬಂದಿದೆ. ರಸ್ತೆ ಅಭಿವೃದ್ಧಿಪಡಿಸುವಂತೆ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಕೂಡಲೇ ಈ ರಸ್ತೆ ದುರಸ್ತಿಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು.</p><p><strong>-ಎಸ್.ಎಂ. ನಾಗರಾಜ್,ಮಲ್ಲತ್ತಹಳ್ಳಿ</strong></p><p>ನಗರದ ಹೃದಯ ಭಾಗದಲ್ಲಿರುವ ಜೆ.ಸಿ. ರಸ್ತೆಯಲ್ಲಿ ವೈಟ್ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮಿನರ್ವ ವೃತ್ತದಿಂದ ಭಾರತ್ ಜಂಕ್ಷನ್ವರೆಗೆ ರಸ್ತೆಯ ಎಡಭಾಗದಲ್ಲಿ ವಾಹನಗಳ ಬಿಡಿ ಭಾಗ ಮಾರಾಟದ ಮಳಿಗೆಗಳಿದ್ದು, ಈ ಮಳಿಗೆಗಳಿಗೆ ಬರುವ ಕಾರುಗಳನ್ನು ರಸ್ತೆ ಹಾಗೂ ಪಾದಚಾರಿ ಮಾರ್ಗದಲ್ಲಿಯೇ ನಿಲ್ಲಿಸಲಾಗುತ್ತಿದೆ.</p><p>ಮಳಿಗೆಗಳ ಮಾಲೀಕರು ಗ್ರಾಹಕರನ್ನು ಕರೆತರಲು ತಮ್ಮ ಪ್ರತಿನಿಧಿಗಳನ್ನು ರಸ್ತೆಯುದ್ದಕ್ಕೂ ನಿಲ್ಲಿಸುತ್ತಿದ್ದು, ಅವರು ಮಾರ್ಗ ಮಧ್ಯದವರೆಗೂ ಬಂದು ಕಾರುಗಳನ್ನು ತಡೆಯಲು ಪ್ರಯತ್ನಿಸುತ್ತಾರೆ. ಇದರಿಂದ ರಸ್ತೆ ಅಪಘಾತಗಳು ಸಂಭವಿಸುವ ಸಾಧ್ಯತೆಯಿದೆ. ವಾಹನಗಳ ದಟ್ಟಣೆ ಇದ್ದು, ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಸಂಚಾರ ಪೊಲೀಸರು ಈ ಬಗ್ಗೆ ಗಮನಹರಿಸುತ್ತಿಲ್ಲ.</p><p><strong>-ಮಂಜುನಾಥ್, ವಾಹನ ಸವಾರ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>