ಈ ಕುರಿತು ‘ಪ್ರಜಾವಾಣಿ’ಯ ಸೋಮವಾರದ ಸಂಚಿಕೆಯ ‘ಕುಂದುಕೊರತೆ’ ಕಾಲಂನಲ್ಲಿ ‘ವಾಹನ ಸವಾರರ ಸಂಕಟ ತಪ್ಪಿಸಿ’ ಶೀರ್ಷಿಕೆಯ ಅಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಸೋಮವಾರ ಮಧ್ಯಾಹ್ನವೇ ಒಳಚರಂಡಿಯ ಮೇಲಿನ ಸಿಮೆಂಟ್ ಚಪ್ಪಡಿಗಳಿಗೆ ಸಮನಾಗಿ ಡಾಂಬರು ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ. ಹೀಗಾಗಿ ವಾಹನ ಸವಾರರು ಹಾಗೂ ಪಾದಚಾರಿಗಳು ನಿರಾಳರಾಗಿದ್ದಾರೆ. ಮುಖ್ಯ ರಸ್ತೆಯಿಂದ ಒಳ ರಸ್ತೆಗೆ ಪ್ರವೇಶಿಸುವ ವಾಹನ ಸವಾರರು ಆಯತಪ್ಪಿ ಬೀಳುವ ಅಪಾಯವೂ ತಪ್ಪಿದೆ.