<p><strong>ಬೆಂಗಳೂರು:</strong> 'ನಗರದಲ್ಲಿ ಏಳು ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ ಐದು ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.ರಸ್ತೆ ಗುಂಡಿ ಮುಚ್ಚಲು ಆದ್ಯತೆ ನೀಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ’ ಎಂದರು.</p><p>'ಯಾರೂ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ" ಎಂದು ತಿಳಿಸಿದರು.</p>.ಸಂಚಾರ ದಟ್ಟಣೆ, ರಸ್ತೆಗುಂಡಿ: ಬೆಳ್ಳಂದೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿ.<p><strong>ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ:</strong> 'ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ ₹ 25 ಕೋಟಿ ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ' ಎಙದು ಶಿವಕುಮಾರ್ ಪ್ರಶ್ನಿಸಿದರು.</p><p>'ಬಿಜೆಪಿಯವರು ಮೊದಲು ತಮ್ಮಪಾಲಿನ ಕೆಲಸ ಮಾಡಲಿ. ಅನಂತರ ರಾಜಕೀಯ ಮಾಡಲಿ. ನಾವು ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾವು ರಾಜಕೀಯ ಮಾಡುವುದು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.</p> .ಬೆಂಗಳೂರು: 14,307 ರಸ್ತೆ ಗುಂಡಿ ದುರಸ್ತಿ; ನಗರ ಸಂಚಾರ ಮಾಡಿ ಡಿಕೆಶಿ ಪರಿಶೀಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 'ನಗರದಲ್ಲಿ ಏಳು ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ ಐದು ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ' ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.ರಸ್ತೆ ಗುಂಡಿ ಮುಚ್ಚಲು ಆದ್ಯತೆ ನೀಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್.<p>ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ರಸ್ತೆ ಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ’ ಎಂದರು.</p><p>'ಯಾರೂ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ" ಎಂದು ತಿಳಿಸಿದರು.</p>.ಸಂಚಾರ ದಟ್ಟಣೆ, ರಸ್ತೆಗುಂಡಿ: ಬೆಳ್ಳಂದೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿ.<p><strong>ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ:</strong> 'ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ, ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ ₹ 25 ಕೋಟಿ ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ಏಕೆ ರಸ್ತೆಗುಂಡಿಗಳನ್ನು ಮುಚ್ಚಿಸಿಲ್ಲ' ಎಙದು ಶಿವಕುಮಾರ್ ಪ್ರಶ್ನಿಸಿದರು.</p><p>'ಬಿಜೆಪಿಯವರು ಮೊದಲು ತಮ್ಮಪಾಲಿನ ಕೆಲಸ ಮಾಡಲಿ. ಅನಂತರ ರಾಜಕೀಯ ಮಾಡಲಿ. ನಾವು ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸುತ್ತೇವೆ. ನಾವು ರಾಜಕೀಯ ಮಾಡುವುದು ಬಿಟ್ಟು ಜನರ ಅನುಕೂಲಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಅವರು ಕೇವಲ ರಾಜಕೀಯ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.</p> .ಬೆಂಗಳೂರು: 14,307 ರಸ್ತೆ ಗುಂಡಿ ದುರಸ್ತಿ; ನಗರ ಸಂಚಾರ ಮಾಡಿ ಡಿಕೆಶಿ ಪರಿಶೀಲನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>