<p><strong>ಬೆಂಗಳೂರು:</strong> ಹೊಸಕೆರೆಹಳ್ಳಿ ಬಳಿಯ ಈಶ್ವರಿನಗರದಲ್ಲಿ ಇಬ್ಬರು ಮಹಿಳೆಯರನ್ನು ಮಾರಕಾಸ್ತ್ರಗಳಿಂದ ಬೆದರಿಸಿ 54 ಗ್ರಾಂ ಚಿನ್ನಾಭರಣವನ್ನು ದೋಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.</p>.<p>ವರಲಕ್ಷ್ಮಿ ಹಾಗೂ ಅವರ ಸ್ನೇಹಿತೆ ಬಿ.ಎಂ.ಉಷಾ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ.13ರಂದು ಈ ಘಟನೆ ನಡೆದಿದೆ.</p>.<p>ಚಿನ್ನದ ಸರ ಕಸಿದುಕೊಳ್ಳುವ ಸಂದರ್ಭದಲ್ಲಿ ಪ್ರತಿರೋಧ ತೋರಿದ ವರಲಕ್ಷ್ಮಿ ಎಂಬುವವರ ಕೈಗೆ ಆರೋಪಿಗಳು ಲಾಂಗ್ನಿಂದ ಹೊಡೆದು ಗಾಯಗೊಳಿಸಿದ್ದಾರೆ. ವರಲಕ್ಷ್ಮಿಅವರ ಬಲಗೈನ ಬೆರಳು ತುಂಡಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಋಷಿಕೇಶ ನಗರದ ನಿವಾಸಿಗಳಾದ ಉಷಾ ಮತ್ತು ವರಲಕ್ಷ್ಮಿ ಅವರು ಈಶ್ವರಿನಗರದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಿದ್ದ ಸ್ಥಳದಲ್ಲಿ ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮ ವೀಕ್ಷಿಸಲು ತೆರಳಿದ್ದರು. ಆಗ ಇಬ್ಬರು ದುಷ್ಕರ್ಮಿಗಳು ಅವರನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಉಷಾ ಅವರ 9 ಗ್ರಾಂ ಚಿನ್ನದ ಸರ ಕಿತ್ತುಕೊಂಡಿದ್ದಾರೆ. ನಂತರ, ವರಲಕ್ಷ್ಮಿ ಅವರ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು. ಇದಕ್ಕೆ ವರಲಕ್ಷ್ಮಿಅವರು ಪ್ರತಿರೋಧ ತೋರಿದಾಗ ದುಷ್ಕರ್ಮಿಗಳು ಅವರ ಬಲಗೈಗೆ ಮಾರಕಾಸ್ತ್ರದಿಂದ ಹೊಡೆದು 45 ಗ್ರಾಂ ಚಿನ್ನದ ಸರ ದೋಚಿ ಪರಾರಿ ಆಗಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹೊಸಕೆರೆಹಳ್ಳಿ ಬಳಿಯ ಈಶ್ವರಿನಗರದಲ್ಲಿ ಇಬ್ಬರು ಮಹಿಳೆಯರನ್ನು ಮಾರಕಾಸ್ತ್ರಗಳಿಂದ ಬೆದರಿಸಿ 54 ಗ್ರಾಂ ಚಿನ್ನಾಭರಣವನ್ನು ದೋಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.</p>.<p>ವರಲಕ್ಷ್ಮಿ ಹಾಗೂ ಅವರ ಸ್ನೇಹಿತೆ ಬಿ.ಎಂ.ಉಷಾ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆ.13ರಂದು ಈ ಘಟನೆ ನಡೆದಿದೆ.</p>.<p>ಚಿನ್ನದ ಸರ ಕಸಿದುಕೊಳ್ಳುವ ಸಂದರ್ಭದಲ್ಲಿ ಪ್ರತಿರೋಧ ತೋರಿದ ವರಲಕ್ಷ್ಮಿ ಎಂಬುವವರ ಕೈಗೆ ಆರೋಪಿಗಳು ಲಾಂಗ್ನಿಂದ ಹೊಡೆದು ಗಾಯಗೊಳಿಸಿದ್ದಾರೆ. ವರಲಕ್ಷ್ಮಿಅವರ ಬಲಗೈನ ಬೆರಳು ತುಂಡಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಋಷಿಕೇಶ ನಗರದ ನಿವಾಸಿಗಳಾದ ಉಷಾ ಮತ್ತು ವರಲಕ್ಷ್ಮಿ ಅವರು ಈಶ್ವರಿನಗರದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಿದ್ದ ಸ್ಥಳದಲ್ಲಿ ನಡೆಯುತ್ತಿದ್ದ ರಸಮಂಜರಿ ಕಾರ್ಯಕ್ರಮ ವೀಕ್ಷಿಸಲು ತೆರಳಿದ್ದರು. ಆಗ ಇಬ್ಬರು ದುಷ್ಕರ್ಮಿಗಳು ಅವರನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿ, ಲಾಂಗ್ನಿಂದ ಬೆದರಿಸಿ ಉಷಾ ಅವರ 9 ಗ್ರಾಂ ಚಿನ್ನದ ಸರ ಕಿತ್ತುಕೊಂಡಿದ್ದಾರೆ. ನಂತರ, ವರಲಕ್ಷ್ಮಿ ಅವರ ಸರ ಕಿತ್ತುಕೊಳ್ಳಲು ಯತ್ನಿಸಿದ್ದರು. ಇದಕ್ಕೆ ವರಲಕ್ಷ್ಮಿಅವರು ಪ್ರತಿರೋಧ ತೋರಿದಾಗ ದುಷ್ಕರ್ಮಿಗಳು ಅವರ ಬಲಗೈಗೆ ಮಾರಕಾಸ್ತ್ರದಿಂದ ಹೊಡೆದು 45 ಗ್ರಾಂ ಚಿನ್ನದ ಸರ ದೋಚಿ ಪರಾರಿ ಆಗಿದ್ದಾರೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>