<p>ಬೆಂಗಳೂರು: ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಹಣ ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಬಾಲಕರೂ ಸೇರಿ ಐವರನ್ನು ರಾಮಮೂರ್ತಿನಗರ ಹಾಗೂ ಬಾಣಸವಾಡಿ ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.</p>.<p>ಬಾಣಸವಾಡಿ ಉಪ ವಿಭಾಗದ ರಾಮಮೂರ್ತಿನಗರ ಹಾಗೂ ಬಾಣಸವಾಡಿ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.</p>.<p>ಮಿಥುನ್, ಸುಹಾಸ್ ಹಾಗೂ ಸ್ವೀಫನ್ ರಾಜ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಾಲಕರನ್ನು ಬಾಲಮಂದಿರಕ್ಕೆ ಒಪ್ಪಿಸಲಾಗಿದೆ.</p>.<p>ಮೇ 17ರ ರಾತ್ರಿ ಕೆಲವೇ ಗಂಟೆಗಳ ಅಂತರದಲ್ಲಿ ಆರೋಪಿತರು ಇಬ್ಬರು ದ್ವಿಚಕ್ರ ವಾಹನ ಸವಾರರ ಮೇಲೆ ಹಲ್ಲೆ ಮಾಡಿ ಸುಲಿಗೆ ಮಾಡಿದ್ದರು.</p>.<p>ರಾತ್ರಿ 12.15ರ ಸುಮಾರಿಗೆ ಬರ್ಖಾತ್ ಅವರು ಔಷಧ ತರಲು ಮೆಡಿಕಲ್ ಶಾಪ್ಗೆ ಬೈಕ್ನಲ್ಲಿ ಹೋಗುವಾಗ ಅಡ್ಡಗಟ್ಟಿದ ಆರೋಪಿಗಳು, ಹಲ್ಲೆ ಮಾಡಿದ್ದರು. ಪ್ರತಿರೋಧ ವ್ಯಕ್ತಪಡಿಸಿದರೂ ಹಲ್ಲೆ ಮುಂದುವರೆಸಿದ್ದರು. ಈ ವೇಳೆ ಬರ್ಖಾತ್ ಬಳಿಯಿದ್ದ ₹600 ಕಸಿದು ಪರಾರಿ ಆಗಿದ್ದರು. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರನ ಮೇಲೆ ಹಲ್ಲೆ ಮಾಡಿದ್ದರು.</p>.<p>ಬಂಜಾರ ಲೇಔಟ್ ನಿವಾಸಿ ಧೀರಜ್ ಹೊಸಕೋಟೆ ಬಿರಿಯಾನಿ ತಿನ್ನಲು ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಆರೋಪಿಗಳು ಅಡ್ಡಗಟ್ಟಿ ಡ್ರಾಪ್ ನೀಡುವಂತೆ ಕೇಳಿದ್ದರು. ಆಗ ಧೀರಜ್ ನಿರಾಕರಿಸಿದ್ದರು. ಧೀರಜ್ ವಾಪಸ್ ಬರುವಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.</p>.<p>ಬಂಧಿತ ಆರೋಪಿಗಳ ಪೈಕಿ ಮೂವರು ಬಾಣಸವಾಡಿ ಸುತ್ತಮುತ್ತಲಿನ ನಿವಾಸಿಗಳಾಗಿದ್ದು,ಡೆಲಿವರಿ ಬಾಯ್ಗಳಾಗಿ ಕೆಲಸ ಮಾಡುತ್ತಿದ್ದರು. ಹಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ. ಆರೋಪಿ ಮಿಥುನ್ ವಿರುದ್ಧ ಈ ಹಿಂದೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-4-1315182604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಹಣ ಹಾಗೂ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಬಾಲಕರೂ ಸೇರಿ ಐವರನ್ನು ರಾಮಮೂರ್ತಿನಗರ ಹಾಗೂ ಬಾಣಸವಾಡಿ ಠಾಣೆಗಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.</p>.<p>ಬಾಣಸವಾಡಿ ಉಪ ವಿಭಾಗದ ರಾಮಮೂರ್ತಿನಗರ ಹಾಗೂ ಬಾಣಸವಾಡಿ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದೆ.</p>.<p>ಮಿಥುನ್, ಸುಹಾಸ್ ಹಾಗೂ ಸ್ವೀಫನ್ ರಾಜ್ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಾಲಕರನ್ನು ಬಾಲಮಂದಿರಕ್ಕೆ ಒಪ್ಪಿಸಲಾಗಿದೆ.</p>.<p>ಮೇ 17ರ ರಾತ್ರಿ ಕೆಲವೇ ಗಂಟೆಗಳ ಅಂತರದಲ್ಲಿ ಆರೋಪಿತರು ಇಬ್ಬರು ದ್ವಿಚಕ್ರ ವಾಹನ ಸವಾರರ ಮೇಲೆ ಹಲ್ಲೆ ಮಾಡಿ ಸುಲಿಗೆ ಮಾಡಿದ್ದರು.</p>.<p>ರಾತ್ರಿ 12.15ರ ಸುಮಾರಿಗೆ ಬರ್ಖಾತ್ ಅವರು ಔಷಧ ತರಲು ಮೆಡಿಕಲ್ ಶಾಪ್ಗೆ ಬೈಕ್ನಲ್ಲಿ ಹೋಗುವಾಗ ಅಡ್ಡಗಟ್ಟಿದ ಆರೋಪಿಗಳು, ಹಲ್ಲೆ ಮಾಡಿದ್ದರು. ಪ್ರತಿರೋಧ ವ್ಯಕ್ತಪಡಿಸಿದರೂ ಹಲ್ಲೆ ಮುಂದುವರೆಸಿದ್ದರು. ಈ ವೇಳೆ ಬರ್ಖಾತ್ ಬಳಿಯಿದ್ದ ₹600 ಕಸಿದು ಪರಾರಿ ಆಗಿದ್ದರು. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಸವಾರನ ಮೇಲೆ ಹಲ್ಲೆ ಮಾಡಿದ್ದರು.</p>.<p>ಬಂಜಾರ ಲೇಔಟ್ ನಿವಾಸಿ ಧೀರಜ್ ಹೊಸಕೋಟೆ ಬಿರಿಯಾನಿ ತಿನ್ನಲು ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಆರೋಪಿಗಳು ಅಡ್ಡಗಟ್ಟಿ ಡ್ರಾಪ್ ನೀಡುವಂತೆ ಕೇಳಿದ್ದರು. ಆಗ ಧೀರಜ್ ನಿರಾಕರಿಸಿದ್ದರು. ಧೀರಜ್ ವಾಪಸ್ ಬರುವಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.</p>.<p>ಬಂಧಿತ ಆರೋಪಿಗಳ ಪೈಕಿ ಮೂವರು ಬಾಣಸವಾಡಿ ಸುತ್ತಮುತ್ತಲಿನ ನಿವಾಸಿಗಳಾಗಿದ್ದು,ಡೆಲಿವರಿ ಬಾಯ್ಗಳಾಗಿ ಕೆಲಸ ಮಾಡುತ್ತಿದ್ದರು. ಹಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ. ಆರೋಪಿ ಮಿಥುನ್ ವಿರುದ್ಧ ಈ ಹಿಂದೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು ಎಂದು ಪೊಲೀಸರು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-4-1315182604</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>