<p><strong>ಬೆಂಗಳೂರು</strong>: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಉಪನ್ಯಾಸಕರೊಬ್ಬರ ಮನೆಗೆ ನುಗ್ಗಿ ₹1.50 ಕೋಟಿ ನಗದು ಹಾಗೂ 50 ಗ್ರಾಂ ಆಭರಣ ದರೋಡೆ ನಡೆಸಲಾಗಿದ್ದು, ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಉಪನ್ಯಾಸಕ ಗಿರಿರಾಜು ಅವರ ಮನೆಯಲ್ಲಿ ದರೋಡೆ ನಡೆದಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡು ಕಾರಿನಲ್ಲಿ ಬಂದಿದ್ದ ದರೋಡೆಕೋರರು, ಉಪನ್ಯಾಸಕರ ಮನೆಗೆ ನುಗ್ಗಿದ್ದರು. ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಆರೋಪಿಗಳು, ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>‘ಮನೆಯಲ್ಲಿದ್ದವರ ಮೊಬೈಲ್ ಕಸಿದುಕೊಂಡಿದ್ದ ದರೋಡೆಕೋರರು, ಎಲ್ಲರನ್ನೂ ಪ್ರತ್ಯೇಕ ಕೋಣೆಯಲ್ಲಿ ಕೂಡಿ ಹಾಕಿದ್ದರು. ಬಳಿಕ ಇಡೀ ಮನೆಯಲ್ಲಿ ಶೋಧ ನಡೆಸಿದ್ದರು. ಬ್ಯಾಗ್ವೊಂದರಲ್ಲಿ ₹1.50 ಕೋಟಿ ನಗದು ಇತ್ತು. ಅದನ್ನು ದರೋಡೆ ಮಾಡಿಕೊಂಡು ಪರಾರಿ ಆಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಗಿರಿರಾಜು ಅವರು ಜಮೀನು ಖರೀದಿಗೆಂದು ಮನೆಯಲ್ಲಿ ನಗದು ಇಟ್ಟುಕೊಂಡಿದ್ದರು ಎಂದು ಹೇಳಲಾಗಿದೆ.</p>.<p>‘ದರೋಡೆಕೋರರು ಬಂದಿರುವ ಮಾರ್ಗದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಬಂದ ಕಾರಿನಲ್ಲೇ ಆರೋಪಿಗಳು ವಾಪಸ್ ಪರಾರಿ ಆಗಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಉಪನ್ಯಾಸಕರೊಬ್ಬರ ಮನೆಗೆ ನುಗ್ಗಿ ₹1.50 ಕೋಟಿ ನಗದು ಹಾಗೂ 50 ಗ್ರಾಂ ಆಭರಣ ದರೋಡೆ ನಡೆಸಲಾಗಿದ್ದು, ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಉಪನ್ಯಾಸಕ ಗಿರಿರಾಜು ಅವರ ಮನೆಯಲ್ಲಿ ದರೋಡೆ ನಡೆದಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡು ಕಾರಿನಲ್ಲಿ ಬಂದಿದ್ದ ದರೋಡೆಕೋರರು, ಉಪನ್ಯಾಸಕರ ಮನೆಗೆ ನುಗ್ಗಿದ್ದರು. ಬಿಳಿ ಬಣ್ಣದ ಶರ್ಟ್ ಧರಿಸಿದ್ದ ಆರೋಪಿಗಳು, ಸರ್ಕಾರಿ ಅಧಿಕಾರಿಗಳೆಂದು ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>‘ಮನೆಯಲ್ಲಿದ್ದವರ ಮೊಬೈಲ್ ಕಸಿದುಕೊಂಡಿದ್ದ ದರೋಡೆಕೋರರು, ಎಲ್ಲರನ್ನೂ ಪ್ರತ್ಯೇಕ ಕೋಣೆಯಲ್ಲಿ ಕೂಡಿ ಹಾಕಿದ್ದರು. ಬಳಿಕ ಇಡೀ ಮನೆಯಲ್ಲಿ ಶೋಧ ನಡೆಸಿದ್ದರು. ಬ್ಯಾಗ್ವೊಂದರಲ್ಲಿ ₹1.50 ಕೋಟಿ ನಗದು ಇತ್ತು. ಅದನ್ನು ದರೋಡೆ ಮಾಡಿಕೊಂಡು ಪರಾರಿ ಆಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಗಿರಿರಾಜು ಅವರು ಜಮೀನು ಖರೀದಿಗೆಂದು ಮನೆಯಲ್ಲಿ ನಗದು ಇಟ್ಟುಕೊಂಡಿದ್ದರು ಎಂದು ಹೇಳಲಾಗಿದೆ.</p>.<p>‘ದರೋಡೆಕೋರರು ಬಂದಿರುವ ಮಾರ್ಗದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ. ಬಂದ ಕಾರಿನಲ್ಲೇ ಆರೋಪಿಗಳು ವಾಪಸ್ ಪರಾರಿ ಆಗಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>