<p><strong>ಬೆಂಗಳೂರು:</strong> ‘ಪತ್ನಿ ಮೋಸ ಮಾಡಿದ್ದಾಳೆ’ ಎಂದು ಆರೋಪಿಸಿ ರೌಡಿಶೀಟರ್ವೊಬ್ಬರು ಸಂಪಿಗೆಹಳ್ಳಿ ಪೊಲೀಸ್ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.</p>.<p>ಮೊಹಮ್ಮದ್ ಸಿದ್ದಿಕಿ ಅಲಿಯಾಸ್ ‘ಬರ್ನ್ ಸಿದ್ದಿಕಿ’ ಆತ್ಮಹತ್ಯೆಗೆ ಯತ್ನಿಸಿದವರು.</p>.<p>ಗುರುವಾರ ರಾತ್ರಿ ಬಾಟಲಿಯೊಂದರಲ್ಲಿ ಪೆಟ್ರೋಲ್ ತುಂಬಿಕೊಂಡು ಠಾಣೆ ಬಳಿಗೆ ಸಿದ್ದಿಕಿ ಬಂದಿದ್ದರು. ಪೆಟ್ರೋಲ್ ಸುರಿದುಕೊಂಡು, ನಂತರ ಲೈಟರ್ನಿಂದ ಬೆಂಕಿ ಹಚ್ಚಿಕೊಂಡಿದ್ದರು. ಸ್ಥಳದಲ್ಲಿದ್ದ ಪೊಲೀಸರು ಸಿದ್ದಿಕಿ ಅವರನ್ನು ರಕ್ಷಣೆ ಮಾಡಿದರು.</p>.<p>ಸಿದ್ದಿಕಿ ಅವರ ದೇಹದ ಶೇ 10ರಷ್ಟು ಭಾಗ ಸುಟ್ಟಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಿದ್ದಿಕಿ ಅವರ ವಿರುದ್ಧ ದೂರು ನೀಡಲು ಠಾಣೆಗೆ ಪತ್ನಿ ಬಂದಿದ್ದರು. ಅದರ ಮಾಹಿತಿ ತಿಳಿದು ಸ್ಥಳಕ್ಕೆ ಬಂದಿದ್ದ ರೌಡಿಶೀಟರ್, ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಮೂಲಗಳು ಹೇಳಿವೆ.</p>.<p>‘ಕರ್ತವ್ಯನಿರತ ಪೊಲೀಸರಿಗೆ ಬೆದರಿಕೆ ಹಾಕಿದ್ದರಿಂದ ಮೊಹಮ್ಮದ್ ಸಿದ್ದಿಕಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಮೊಹಮ್ಮದ್ ಸಿದ್ದಿಕಿ ವಿರುದ್ಧ ರಾಬರಿ, ಕೊಲೆ, ಕೊಲೆ ಯತ್ನ ಸೇರಿ ಕೆಲವು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಪತ್ನಿ ಮೋಸ ಮಾಡಿದ್ದಾಳೆ’ ಎಂದು ಆರೋಪಿಸಿ ರೌಡಿಶೀಟರ್ವೊಬ್ಬರು ಸಂಪಿಗೆಹಳ್ಳಿ ಪೊಲೀಸ್ ಠಾಣೆ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.</p>.<p>ಮೊಹಮ್ಮದ್ ಸಿದ್ದಿಕಿ ಅಲಿಯಾಸ್ ‘ಬರ್ನ್ ಸಿದ್ದಿಕಿ’ ಆತ್ಮಹತ್ಯೆಗೆ ಯತ್ನಿಸಿದವರು.</p>.<p>ಗುರುವಾರ ರಾತ್ರಿ ಬಾಟಲಿಯೊಂದರಲ್ಲಿ ಪೆಟ್ರೋಲ್ ತುಂಬಿಕೊಂಡು ಠಾಣೆ ಬಳಿಗೆ ಸಿದ್ದಿಕಿ ಬಂದಿದ್ದರು. ಪೆಟ್ರೋಲ್ ಸುರಿದುಕೊಂಡು, ನಂತರ ಲೈಟರ್ನಿಂದ ಬೆಂಕಿ ಹಚ್ಚಿಕೊಂಡಿದ್ದರು. ಸ್ಥಳದಲ್ಲಿದ್ದ ಪೊಲೀಸರು ಸಿದ್ದಿಕಿ ಅವರನ್ನು ರಕ್ಷಣೆ ಮಾಡಿದರು.</p>.<p>ಸಿದ್ದಿಕಿ ಅವರ ದೇಹದ ಶೇ 10ರಷ್ಟು ಭಾಗ ಸುಟ್ಟಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಿದ್ದಿಕಿ ಅವರ ವಿರುದ್ಧ ದೂರು ನೀಡಲು ಠಾಣೆಗೆ ಪತ್ನಿ ಬಂದಿದ್ದರು. ಅದರ ಮಾಹಿತಿ ತಿಳಿದು ಸ್ಥಳಕ್ಕೆ ಬಂದಿದ್ದ ರೌಡಿಶೀಟರ್, ಠಾಣೆ ಎದುರು ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ಮೂಲಗಳು ಹೇಳಿವೆ.</p>.<p>‘ಕರ್ತವ್ಯನಿರತ ಪೊಲೀಸರಿಗೆ ಬೆದರಿಕೆ ಹಾಕಿದ್ದರಿಂದ ಮೊಹಮ್ಮದ್ ಸಿದ್ದಿಕಿ ವಿರುದ್ಧ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಮೊಹಮ್ಮದ್ ಸಿದ್ದಿಕಿ ವಿರುದ್ಧ ರಾಬರಿ, ಕೊಲೆ, ಕೊಲೆ ಯತ್ನ ಸೇರಿ ಕೆಲವು ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>