<p><strong>ಬೆಂಗಳೂರು: </strong>ಹೊರ ರಾಜ್ಯಗಳ ವಾಹನಗಳನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಅಕ್ರಮವಾಗಿ ತಡೆದು ₹2,500 ವಸೂಲಿ ಮಾಡಿದ್ದ ಆರೋಪದಡಿ ಹಲಸೂರು ಗೇಟ್ ಸಂಚಾರ ಠಾಣೆ ಎಎಸ್ಐ ಡಿ.ಸಿ. ಮಹೇಶ್ ಹಾಗೂ ಹೆಡ್ ಕಾನ್ಸ್ಟೆಬಲ್ ಗಂಗಾಧರಪ್ಪ ಅವರನ್ನು ಅಮಾನತು ಮಾಡಲಾಗಿದೆ.</p>.<p>ನಗರದ ದೇವಾಂಗ ವೃತ್ತದಲ್ಲಿ ಜೂನ್ 10ರಂದು ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಹಾಗೂ ಹೆಡ್ ಕಾನ್ಸ್ಟೆಬಲ್ ವಾಹನ ತಡೆದು ಹಣ ವಸೂಲಿ ಮಾಡಿದ್ದರು. ಈ ಬಗ್ಗೆ ವಾಹನದ ಮಾಲೀಕರು, ಇ–ಮೇಲ್ ಮೂಲಕ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು.</p>.<p>ದೂರಿನ ಪರಿಶೀಲನೆ ನಡೆಸಿದ ರವಿಕಾಂತೇಗೌಡ, ಎಎಸ್ಐ ಹಾಗೂ ಹೆಡ್ ಕಾನ್ಸ್ಟೆಬಲ್ ಅಮಾನತು ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.</p>.<p>ದಂಡ ಸಂಗ್ರಹ ಪ್ರಕ್ರಿಯೆ ಪಾರದರ್ಶಕವಾಗಿರಬೇಕೆಂಬ ಕಾರಣಕ್ಕೆ ಪ್ರತಿಯೊಬ್ಬ ಸಿಬ್ಬಂದಿಗೂ ಬಾಡಿವೋರ್ನ್ ಕ್ಯಾಮೆರಾ ನೀಡಲಾಗಿದೆ. ಆದರೆ, ಎಎಸ್ಐ ಮಹೇಶ್ ಹಾಗೂ ಹೆಡ್ ಕಾನ್ಸ್ಟೆಬಲ್ ಗಂಗಾಧರಪ್ಪ, ಬಾಡಿವೋರ್ನ್ ಕ್ಯಾಮೆರಾ ಧರಿಸದೇ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವುದಾಗಿ ರವಿಕಾಂತೇಗೌಡ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಹೊರ ರಾಜ್ಯಗಳ ವಾಹನಗಳನ್ನು ದಾಖಲೆ ಪರಿಶೀಲನೆ ನೆಪದಲ್ಲಿ ಅಕ್ರಮವಾಗಿ ತಡೆದು ₹2,500 ವಸೂಲಿ ಮಾಡಿದ್ದ ಆರೋಪದಡಿ ಹಲಸೂರು ಗೇಟ್ ಸಂಚಾರ ಠಾಣೆ ಎಎಸ್ಐ ಡಿ.ಸಿ. ಮಹೇಶ್ ಹಾಗೂ ಹೆಡ್ ಕಾನ್ಸ್ಟೆಬಲ್ ಗಂಗಾಧರಪ್ಪ ಅವರನ್ನು ಅಮಾನತು ಮಾಡಲಾಗಿದೆ.</p>.<p>ನಗರದ ದೇವಾಂಗ ವೃತ್ತದಲ್ಲಿ ಜೂನ್ 10ರಂದು ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಹಾಗೂ ಹೆಡ್ ಕಾನ್ಸ್ಟೆಬಲ್ ವಾಹನ ತಡೆದು ಹಣ ವಸೂಲಿ ಮಾಡಿದ್ದರು. ಈ ಬಗ್ಗೆ ವಾಹನದ ಮಾಲೀಕರು, ಇ–ಮೇಲ್ ಮೂಲಕ ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ ಅವರಿಗೆ ದೂರು ನೀಡಿದ್ದರು.</p>.<p>ದೂರಿನ ಪರಿಶೀಲನೆ ನಡೆಸಿದ ರವಿಕಾಂತೇಗೌಡ, ಎಎಸ್ಐ ಹಾಗೂ ಹೆಡ್ ಕಾನ್ಸ್ಟೆಬಲ್ ಅಮಾನತು ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.</p>.<p>ದಂಡ ಸಂಗ್ರಹ ಪ್ರಕ್ರಿಯೆ ಪಾರದರ್ಶಕವಾಗಿರಬೇಕೆಂಬ ಕಾರಣಕ್ಕೆ ಪ್ರತಿಯೊಬ್ಬ ಸಿಬ್ಬಂದಿಗೂ ಬಾಡಿವೋರ್ನ್ ಕ್ಯಾಮೆರಾ ನೀಡಲಾಗಿದೆ. ಆದರೆ, ಎಎಸ್ಐ ಮಹೇಶ್ ಹಾಗೂ ಹೆಡ್ ಕಾನ್ಸ್ಟೆಬಲ್ ಗಂಗಾಧರಪ್ಪ, ಬಾಡಿವೋರ್ನ್ ಕ್ಯಾಮೆರಾ ಧರಿಸದೇ ಕರ್ತವ್ಯ ನಿರ್ವಹಿಸುತ್ತಿದ್ದರು. ಇದರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳುವುದಾಗಿ ರವಿಕಾಂತೇಗೌಡ ಆದೇಶದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>